Home / ಕವನ / ಕವಿತೆ / ಸಾಕು ಮಾಡೋಣ

ಸಾಕು ಮಾಡೋಣ

ಪುರಾಣ ಪುಣ್ಯಕಥೆಗಳ ಮಿಥ್ಯಾಲಾಪಗಳು ಇನ್ನು ಸಾಕು
ಮುಗಿಲ ಮಲ್ಲಿಗೆಗಳ ಮೂಸುವ ಭ್ರಮೆ ಇನ್ನು ಸಾಕು,
ಕಾಣದುದರ ಕೈಕಾಲುಗಳಿಗೆ ಜೋತಾಡಿ
ಕರ್ರಗೆ ಕಲೆಕಲೆ ಮಾಡಿದ್ದ ಕಂತೆಗಳು ಇನ್ನು ಸಾಕು

ಇದೋ ನೋಡಿ ನಿಮ್ಮ ಮುಂದಿರುವುದು
ಪುಣ್ಯ ಗಣ್ಯ ಭೂಮಿ ಭಾರತವಲ್ಲ
ಹಂದೆಗಳ ಹಡೆಯುವ ದಾರಿದ್ರ್ಯ ದಳ್ಳುರಿಯ
ಆತ್ಮಘಾತಕತನದ ಗಟಾರಮತಿಗಳ ಒಣನೆಲವಾಗಿದೆ.
ನಾವೀಗ ನಿಜವನರಿಯದ ಕೂಪಮಂಡೂಕಗಳು
ಹಲವು ಹಲ್ಕಟ್ತನಗಳ ಮುಚ್ಚಿ ಆದರ್ಶ ಹಾಡುವವರು,
ಸಂಪನ್ನ ರಾಮರೊಳಗೆ ಹುದುಗಿರುವ ರಾವಣರು,
ಪತಿವ್ರತಾ ಮೇಕಪ್ಪಿನೊಳಗೆ ಮಿಡುಕುವ ಪತಿತೆಯರು,

ಜಗವನ್ನೇ ಬೆಳಗುವ ರವಿಕಿರಣಗಳು
ಈ ಒಣಕಾಡಿನೆಲೆಗಳಿಗೂ ಸೋಕವು
ನೆಲವ ಬೆಳಗುವುದನ್ನಂತು ಕೇಳಬೇಡ
ಇಲ್ಲಿಯ ಕಾಗೆ ಗೂಗೆಗಳಿಗೆ ಹೊಸಪಾಠ ಕಲಿಸಿದರೆ
ಅವು ಕೂಗುವುದು ಮತ್ತದೇ ಕಾಕಾ ಗೂಗೂ
ಇಲ್ಲಿಯ ನಾಯಿಗಳಿಗೆ ಹೊಸ ಶಾಸ್ತ್ರ ಕಲಿಸಿದರೆ
ಅವು ಊಳಿಡುವುದು ಮತ್ತದೇ ಬೌಬೌ
ನವ ವೇಷ ಭೂಷಣಗಳೊಳಗೆ
ಅದೇ ಪಾಚಿಗಟ್ಟಿದ ಭೂತಬುದ್ಧಿ,

ಯಾವ ಹೊಸಗಾಳಿಗೂ ಮೈತೆರೆಯದ ಹಳಸಲು ಬಾವಿ ಇದು
ಯಾವ ಹೊಸ ಪ್ರಭಾವಗಳಿಗೂ ಪಕ್ಕಾಗದ ಮೋಟು ಮರವಿದು
ಯಾವ ಹೊಸ ಬೀಜವೂ ನಾಟದ ಕಗ್ಗಲ್ಲಿದು
ಇಲ್ಲಿಯವರೆಗೆ ವಿಧಿ ನಿಷೇಧಗಳ
ಋಣಮಾರ್ಗದಲ್ಲಿ ನಡೆದದ್ದಾಯಿತು
ಹುಲಿ ಹಲ್ಲು ಕಿತ್ತು ಆಕಳ ಮಾಡುವ ಯತ್ನ ನಡೆಯಿತು
ಆಡುವ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು
ಸುರುವಿ
ಕಡಿವ ಕತ್ತಿಯನು ಬಂಡೆಗೆ ಹೊಡೆದು ಮೊಂಡಾಗಿಸಿ
ಜೀವಚ್ಛವವಾದೆವು
ಭಕ್ತಿಯ ಬೋಳೆತನ, ಅಹಿಂಸೆಯ ಹೇಡಿತನ, ಸ್ವರ್ಗದ
ದುರ್ಮಾರ್ಗತನ,
ಬ್ರಹ್ಮಚರ್ಯದ ಭಾನಗಡಿತನ, ಯೋಗದ ಗಂಡುಜೋಗತಿತನ,
ಇವನ್ನೆಲ್ಲ ಇನ್ನಾದರೂ ಸಾಕು ಮಾಡೋಣ
ಚೆನ್ನಾಗಿ ಉಳುವ-ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಮೈತುಂಬ ಕೆಲಸ ತುಂಬಿ ಕಾಯ ಕಲ್ಲಾಗಿಸುವಾ,
ಮನ ತುಂಬ ಸೊಗವುಂಡು ಭಾವಪೂರ ಹರಿಸುವಾ,

ನಮ್ಮ ಬೆನ್ನಿಗಂಟಿದ ಹೊಟ್ಟೆ ತುಂಬಿಸಿ ತೇಗುವ,
ಕಣ್ತುಂಬ ನಿದ್ರಿಸಿ ಪುನರ್ಜನ್ಮವನಣಕಿಸುವ
ಇಹ ಸಾರ್ಥಕತೆಯ ಧನಮಾರ್ಗ ಹಿಡಿಯೋಣ
ಎಲ್ಲಿ ಬೇಡದು ಕೂಡದು ಬಾರದುಗಳು ಬಂಧಿಸವೋ
ಎಲ್ಲಿ ಬೇಕು ಮಾಡು ಕೂಡುನಲಿಯುವಿಕೆಗಳು
ತಂತಾವೇ ಆಳುವುವೋ
ಹಾಗೆಯೇ ಬಾಳೋಣ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...