Home / ಕವನ / ಕವಿತೆ / ದಾರಿ ಬಿಡಿರೋ

ದಾರಿ ಬಿಡಿರೋ

ದಾರಿ ಬಿಡಿರೋ ಇವನಿಗೆ, ಉಸಿರು ಕಟ್ಟಬೇಡಿ, ದಾರಿ ಕಟ್ಟಬೇಡಿ
ಹುಲಿಕರಡಿಗಳಂತೆ ಹೆದರಿಸಬೇಡಿ
ಮರಿಗಿಳಿಯಂತಿವನು
ಕತ್ತಿ ಬಡಿಗೆಗಳನಾಡಿಸಬೇಡಿ
ಬಳ್ಳಿ ಚಿಗುರಿನಂತಿವನು
ಮುಳ್ಳು ಕಲ್ಲುಗಳ ಹರವಬೇಡಿ,
ಹೂಪಾದ ಇವನವು
ಕೋಲಾಹಲದಲೆಯಪ್ಪಳಿಸಬೇಡಿ
ಆಶ್ರಮ ಶಾಂತಿಯಲ್ಲರಳಿದ ಕಿವಿಯಿವನವು
ಉರಿಮಾರಿಯ ಮೆರವಣಿಗೆ ಮಾಡಬೇಡಿ,
ಮರಣದಾಚೆ ನೋಡಿ ಬಂದವನಿವನು
ಅಸಂಬದ್ಧ ಪ್ರೇತಕುಣಿತ ಕುಣಿಯಬೇಡಿ
ಸಹಜನಾಟ್ಯದೊಲೆದಾಡಿದ ಮೈ ಇವನದು
ಅಸಂಗತ ಸಂಗೀತವನರಚಬೇಡಿ,
ದಿವ್ಯಗಾನಕೆ ದನಿಗೂಡಿಸಿ ಹದ್ದಾದವನಿವನು
ನೂರಾರು ಹಗ್ಗಗಳಿಂದ ಬಂಧಿಸಬೇಡಿ,
ಸ್ವಚ್ಛಂದ ಲೀಲೆ ಇವನದು
ಮಾತಿನ ಮೋಡಿಯಲ್ಲಿ ಮುಚ್ಚಬೇಡಿ,
ಮೌನದ ಗವಿಯ ಹೊಕ್ಕು ಬಂದವನಿವನು
ಹೆಣ್ಣಕುಣಿಸಿ ನೋಟ ಕೂಟ ಕಟಿಸೂತ್ರಗಳಿಂದ ಕಟ್ಟಬೇಡಿ
ಬೇರಿನ ಬಿಳಿಹೂವ ನೆತ್ತಿಗೇರಿಸಿ ಮೂಸಿ
ಬಳ್ಳಿ ಬಂಧಕೆಡೆಯಾಗದೆ ಬಯಲಾಡುವನಿವನು
ಇವನು ಪರದವನಾದರೂ ಪರಕೀಯನಲ್ಲ
ನಮ್ಮವನೇ, ದಾರಿ ಬಿಡಿ
ನಿಮ್ಮ ಹತ್ತಿಕ್ಕಿ ಭಂಗಿಸಿ ಸ್ವಂತ ದಾರಿ ಬಿಡಿಸಿಕೊಳ್ಳುವವರೆಗೆ
ಬೇಡ ಬಿಡಿ
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...