Home / ಕವನ / ಕವಿತೆ / ಕವಿಗಳು

ಕವಿಗಳು

ಇವರ ಕಣ್ಣಿಗೆ ಇಲ್ಲೆಲ್ಲಾ ಓರೆಕೋರೆಗಳೇ ಕಾಣುತ್ತವೆ
ನೇರಮಾಡಲು ಇವರು ಸೆಣಸುತ್ತಾರೆ
ಇವರ ನೋಟಕತ್ತಿಗಳು ವಕ್ರತೆಗಳ ಕತ್ತರಿಸುವಂತೆ ನೋಡುತ್ತವೆ
ಇವರ ಎದೆ ಏನೇನೋ ಹಾಡುತ್ತದೆ
ಆ ಹಾಡ ಕಡಲಿಂದ ನುಡಿಬಟ್ಟಲಲ್ಲಿ ಇವರು ಮೊಗೆದೇ
ಮೊಗೆಯುತ್ತಾರೆ
ಅಸಂಖ್ಯ ಅಭಿನಯ ದೃಶ್ಯ ತರಂಗ

ಏನು ರಸತುಂಬಿ ಕಳಿಸಿರುವನೋ ಅವನು ಇವರೆದೆಯಲ್ಲಿ
ಅದು ಗಾಳಿಯಲೆಗೂ ಕಲಕಲಗೊಳ್ಳುತ್ತದೆ
ತುಮುಲಗೊಳ್ಳುತ್ತದೆ ಕೊನೆಗೆ ಕುದಿಯತೊಡಗುತ್ತದೆ
ಇವರು ಆ ಕುದಿಯನುಕ್ಕಿಸುತ್ತಾರೆ ಕಕ್ಕುತ್ತಾರೆ
ನೂರೆನೂರೆ ಬಿಸಿಬಿಸಿ ಸಿಡಿಲಂತೆ ಕೆಂಡದ ಮಳೆಯಂತೆ

ಇವರ ವೀಣೆಯ ತಂತಿ ಬಲು ಕೋಮಲ
ಇತರೆಲ್ಲ ತಂತಿಗಳು ಮಿಡಿಯದ ತಾನಗಳಲ್ಲಿ
ಇವು ಮಿಡಿಯುತ್ತವೆ ನುಡಿಯುತ್ತವೆ
ಇತರರು ಅಂದುಕೊಳ್ಳಲೂ ಆಗದುದನು
ಇವರು ಅನುಭವಿಸಿ ದನಿದೋರುತ್ತಾರೆ
ನಿಮ್ಮ ಕಟ್ಟೆಯೇರಿಗಳಿವರಿಗೆ ಸೆರೆಮನೆ

ನಿಂತ ಹೊಂಡು ನೀರೆಂದೂ ಇವರಾಗಲಾರರು
ಹನಿಹನಿ ಜಿನುಗುವ ಒರತೆಯಾದರೂ ಸರಿ
ಕ್ಷಣ ಕ್ಷಣಕೂ ಸೃಷ್ಟಿಯು ಇವರನ್ನು
ಕುಂತಲ್ಲಿ ಕುಳ್ಳಿರಿಸದೆ, ನಿಂತಲ್ಲಿ ನಿಲ್ಲಿಸದೆ, ಮಲಗಗೊಡದೆ
ಹರಿದಾಡಿಸುತ್ತದೆ ಸ್ವಚ್ಛಂಧ ನಿರ್ಝರಿಯಂತೆ
ಧಾರೆ ಧಾರೆ ಜಲಪಾತದಂತೆ, ನೆಲಮುದ್ದಿಸುವ ಮಳೆಯಂತೆ
ಇವರ ನೀರಾಳ ನಿಮ್ಮಳತೆಗೆ ಸಿಗುವುದಂತೂ ಅಲ್ಲ
ನಿಮಗಂತೂ ಇವರ ನಡೆ ಸೊಟ್ಟು, ಹೆಜ್ಜೆ ಹುಚ್ಚುಚ್ಚಾರ
ನುಡಿ ಒಗಟು, ಚರಿತ್ರೆ ವಿಚಿತ್ರ, ನೀತಿ ಅತೀತ
ಇವರ ಬಟ್ಟೆ ಕಂಡಾಬಟ್ಟೆ, ಇವರ ವರ್ತನೆ
ಅದ್ವೈತ-ಅಯೋಮಯ….
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...