Home / ಕಥೆ / ಜನಪದ / ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...