Home / ಕಥೆ / ಜನಪದ / ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...