Home / ಕವನ / ಜನಪದ / ನಮ್ಮೂರ ಹೋಳಿ ಹಾಡು – ೯

ನಮ್ಮೂರ ಹೋಳಿ ಹಾಡು – ೯

ಕಾಮ ನೀನು ಧೂಮವಾದಿ
ಸೋಮನಾಥನ ಕಣ್ಣಿಗೆ
ಪ್ರೇಮದಾ ನುಡಿ ಏನು ಹೇಳಿದಿ
ಕಾಮಿನಿ ರತಿ ದೇವಿಗೆ

ನಿನ್ನ ಪೋಲುವೆ ಪುರುಷರು
ಜಗದೊಳಿನ್ನೂ
ಹುಟ್ಯಾರೆಂದಿಗೆ?
ನನ್ನ ಮುತ್ತೈದೆ ತನಕೆ
ಭಂಗ ತಂದ್ಯಾ ಇಂದಿಗೆ ||೧||

ಮಾರ ನಿನ್ನ ರೂಪ ನೋಡಿ
ಸೈರಿಸದೀ ಅಮರ್‍ಯಾರೋ
ದೂರಿ ಎಲ್ಲರೂ
ಶಿವನ ಕಣ್ಣಿಗೆ ಮಾರುಗೊಟ್ಟ
ಪಾಪತ್ಮರೂ ||೨||

ಸ್ಮರನೆ ನಿನ್ನಯ ಮನಕೆ
ತಾರಕನುಪದ್ರವ ಕೊಟ್ಟನೆ
ಹರಿವಿರಂಚಿಯೂ
ಗುರುಬೃಹಸ್ಪತಿ
ಕರೆದು ಪೇಳಿದರ್‍ಯೋಚನೆ ||೩||

ಮೋಸದಿಂದಲಿ
ಭಾಷೆಗೊಂಡರು
ಈಸನಗ್ನಿಗಣ್ಣಿಗೆ ನಾಶಗೈದನು
ಗುರುವರನು ಬಹು
ದೊರೆಯಾದನು ಭೂಮಿಗೆ ||೪||

ಕಡು ಚೆಲುವ ಕಂದರ್ಪ
ನಿನ್ನಯ ಮಡದಿ ರತಿಯಳ ದುಃಖವಾ
ಬಿಡುವಳೋ ಸೈ
ಗಡಗಡ ನೇ ತಾ
ಹುಡಿಯೊಳಗೆ ಹೊರಳಾಡುತಾ ||೫||

ಮಾರ ಬಾಣಕೆ ಮನು – ಮುನ್ಯಾದಿಯ
ದಾರಿ ತಪ್ಪಿಸಿ ಮುತ್ತಿದೆ|
ಮೂರು ಲೋಕದಿ ನಿನ್ನ
ಮಿಕ್ಕುವರಾರು
ಕದನದೊಳಿಂದಿಗೆ ||೬||

ಭೂಮಿಯೊಳುತ್ಪತ್ಯವೆಂಬುದು
ಕಾಮ ನಿನ್ನಿಂದಲ್ಲದೇ!
ನೀ ಮರಣ ಹೊಂದಿದರೆ
ಜಗತ್ರಯ ತಾ
ಮುಳಿಗಿ ಹೋಯಿತಲ್ಲದೆ ||೭||

ಕ್ಷಿತಿಯೊಳಗೆ ಪತಿವ್ರತಾ
ಶಿರೋಮಣಿಯಾ|
ರತಿ ಎಂಬ ಚೆಲುವೆಯಾ
ಪತಿವಳಿದ ರಂಡೆತನವ ವಹಿಸಿ
ಕ್ಷಿತಿಗೆಯಾದಳು ಪಾಪಿಯಾ ||೮||

ಕಾಲಕಾಲಾಂತರದಿ ರತಿಯಾ
ತಾಳಿಕರಿಮಣಿಯ ತೆಗೆಯದೆ
ಪಾಲನೇತ್ರನ ದಯದಿ
ಬಾಲೆ ನಿನ್ನನು ನೆನೆಲದೆ ||೯||

ನೆನಪಿದಾಕ್ಷಣ ಮನಸಿಜನು ಎಂದೆನೆಸಿ
ರತಿಯಳ ಪಾಲಿಸೋ|
ತನು ಕಳೆದರೂ ಮನದಿಗೂಡಿ
ಜೀವ ಜಗತ್ರಯವನು ಪಾಲಿಸೋ ||೧೦||

ಕ್ಷಿತಿಗೆ ರತಿ ಮನ್ಮಥರಿಬ್ಬರೂ
ಪತಿ ಸೋಮೇಶನ ಕರುಣದಿ |
ಸಕಲನುಚರಾಚರೆಗೆವುಪ
ಸಮ ರತಿಯ ಗೂಡುತಾ ಸೌಖ್ಯದಿ ||೧೧||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...