Home / ಕವನ / ಜನಪದ / ನಮ್ಮೂರ ಹೋಳಿ ಹಾಡು – ೯

ನಮ್ಮೂರ ಹೋಳಿ ಹಾಡು – ೯

ಕಾಮ ನೀನು ಧೂಮವಾದಿ
ಸೋಮನಾಥನ ಕಣ್ಣಿಗೆ
ಪ್ರೇಮದಾ ನುಡಿ ಏನು ಹೇಳಿದಿ
ಕಾಮಿನಿ ರತಿ ದೇವಿಗೆ

ನಿನ್ನ ಪೋಲುವೆ ಪುರುಷರು
ಜಗದೊಳಿನ್ನೂ
ಹುಟ್ಯಾರೆಂದಿಗೆ?
ನನ್ನ ಮುತ್ತೈದೆ ತನಕೆ
ಭಂಗ ತಂದ್ಯಾ ಇಂದಿಗೆ ||೧||

ಮಾರ ನಿನ್ನ ರೂಪ ನೋಡಿ
ಸೈರಿಸದೀ ಅಮರ್‍ಯಾರೋ
ದೂರಿ ಎಲ್ಲರೂ
ಶಿವನ ಕಣ್ಣಿಗೆ ಮಾರುಗೊಟ್ಟ
ಪಾಪತ್ಮರೂ ||೨||

ಸ್ಮರನೆ ನಿನ್ನಯ ಮನಕೆ
ತಾರಕನುಪದ್ರವ ಕೊಟ್ಟನೆ
ಹರಿವಿರಂಚಿಯೂ
ಗುರುಬೃಹಸ್ಪತಿ
ಕರೆದು ಪೇಳಿದರ್‍ಯೋಚನೆ ||೩||

ಮೋಸದಿಂದಲಿ
ಭಾಷೆಗೊಂಡರು
ಈಸನಗ್ನಿಗಣ್ಣಿಗೆ ನಾಶಗೈದನು
ಗುರುವರನು ಬಹು
ದೊರೆಯಾದನು ಭೂಮಿಗೆ ||೪||

ಕಡು ಚೆಲುವ ಕಂದರ್ಪ
ನಿನ್ನಯ ಮಡದಿ ರತಿಯಳ ದುಃಖವಾ
ಬಿಡುವಳೋ ಸೈ
ಗಡಗಡ ನೇ ತಾ
ಹುಡಿಯೊಳಗೆ ಹೊರಳಾಡುತಾ ||೫||

ಮಾರ ಬಾಣಕೆ ಮನು – ಮುನ್ಯಾದಿಯ
ದಾರಿ ತಪ್ಪಿಸಿ ಮುತ್ತಿದೆ|
ಮೂರು ಲೋಕದಿ ನಿನ್ನ
ಮಿಕ್ಕುವರಾರು
ಕದನದೊಳಿಂದಿಗೆ ||೬||

ಭೂಮಿಯೊಳುತ್ಪತ್ಯವೆಂಬುದು
ಕಾಮ ನಿನ್ನಿಂದಲ್ಲದೇ!
ನೀ ಮರಣ ಹೊಂದಿದರೆ
ಜಗತ್ರಯ ತಾ
ಮುಳಿಗಿ ಹೋಯಿತಲ್ಲದೆ ||೭||

ಕ್ಷಿತಿಯೊಳಗೆ ಪತಿವ್ರತಾ
ಶಿರೋಮಣಿಯಾ|
ರತಿ ಎಂಬ ಚೆಲುವೆಯಾ
ಪತಿವಳಿದ ರಂಡೆತನವ ವಹಿಸಿ
ಕ್ಷಿತಿಗೆಯಾದಳು ಪಾಪಿಯಾ ||೮||

ಕಾಲಕಾಲಾಂತರದಿ ರತಿಯಾ
ತಾಳಿಕರಿಮಣಿಯ ತೆಗೆಯದೆ
ಪಾಲನೇತ್ರನ ದಯದಿ
ಬಾಲೆ ನಿನ್ನನು ನೆನೆಲದೆ ||೯||

ನೆನಪಿದಾಕ್ಷಣ ಮನಸಿಜನು ಎಂದೆನೆಸಿ
ರತಿಯಳ ಪಾಲಿಸೋ|
ತನು ಕಳೆದರೂ ಮನದಿಗೂಡಿ
ಜೀವ ಜಗತ್ರಯವನು ಪಾಲಿಸೋ ||೧೦||

ಕ್ಷಿತಿಗೆ ರತಿ ಮನ್ಮಥರಿಬ್ಬರೂ
ಪತಿ ಸೋಮೇಶನ ಕರುಣದಿ |
ಸಕಲನುಚರಾಚರೆಗೆವುಪ
ಸಮ ರತಿಯ ಗೂಡುತಾ ಸೌಖ್ಯದಿ ||೧೧||
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...