Home / ಕಥೆ / ಜನಪದ / ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿಯೇ ಬಂದಿತ್ತು. ಆದರೆ ಹಲವು ಸಾರೆ ಅವರಲ್ಲಿ ವಿರಸಪ್ರಸಂಗಗಳು ಬರುತ್ತಲೆ ಅವರಲ್ಲಿ ಬಾಯಿಗೆ ಬಾಯಿ, ಕೈಗೆಕೈ ಹತ್ತಿ ಕದನಗಳಾಗುತ್ತಿದ್ದವು. ಆದರೆ ಗಂಡಹೆಂಡಿರ ಜಗಳ ಉಂಡು ಮಲಗುವವರೆಗಷ್ಟೇ ಅಲ್ಲವೇ ?

ಬಾಯಿಗೆ ಬಾಯಿ ಹತ್ತಿ ಜಗಳಾಡಿದ್ದು ಸಾಕಾಗದೆ, ನನ್ನೀಸಾಹೇಬನು ಸಿಟ್ಟಿನ ಭರದಲ್ಲಿ ಹೆಂಡತಿಯನ್ನು ಒಳಿತಾಗಿ ಥಳಿಸಬೇಕೆಂದು, ಒಂದು ಬಡಿಗೆಯತ್ತಿ ಆಕೆಯ ಮೈಮುಟ್ಟಹೋಗಿ ಹೊಡೆಯಲನುವಾದನು. ಅಷ್ಣರಲ್ಲಿ ಹೆಂಡತಿ ಆತನನ್ನು ಎದುರಿಸಿ ಆತನ ಕೈಯೊಳಗಿನ ಬಡಿಗೆಯನ್ನು ನಿರಾಯಾಸವಾಗಿ ಕಸಿದುಕೊಂಡು ಜಂತಿಯಲ್ಲಿ ತುರುಕಿಬಿಡುವಳು. ಅದು ಕುಳ್ಳನಾದ ನನ್ನೀ ಸಾಹೇಬನಿಗೆ ನಿಲುಕದಂತಾಗುವದು. ಆ ಕಾರಣದಿಂದ ಅವರ ಜಗಳವು ಮೊಂಡವಾಗಿಬಿಡುವದು.

ಒಮ್ಮೊಮ್ಮೆ ಬಡೇಮಾನಿಗೆ ಸಿಟ್ಟು ಬಂದಾಗ ಆಕೆ ಬಾಗಿಲಿಕ್ಕಿ ಗಂಡನನ್ನು ಅದೇ ಬಡಿಗೆಯಿಂದ ಬಡಿಯುವಳು. ಹೆಂಡತಿ ಬಡೆಯುವಳೆಂದರೂ ಗಂಡನ ಬಾಯ ಅಬ್ಬರವೇ ಹೆಚ್ಚು. ಅದನ್ನು ಕೇಳಿದವರಿಗೆ ಅನಿಸುವುದು – “ಗಂಡನೇ ಬಾಗಿಲು ಹಾಕಿ ಹೆಂಡತಿಯನ್ನು ಜಿಗಿಜಿಗಿದು ಬಡಿಯುತ್ತಿದ್ದಾನೆ. ಅಂತೆಯೇ ದನಿ ತೇಕುತ್ತದೆ.”

ಹೆಂಡತಿ ಎಡಗೈಯಿಂದ ಗಂಡನ ರಟ್ಟೆಹಿಡಿದು ಮಗ್ಗುಲಿಗೆ ನಿಲ್ಲಿಸಿ, ಬೆನ್ನ ಮೇಲೆ ಬಡಿಗೆಯೇಟು ಹಾಕುವಳು. ಇನ್ನೇನು ಏಟು ಬೀಳುವುದಿನ್ನು ಎನ್ನುವ ಕ್ಷಣದಲ್ಲಿ – “ಎಷ್ಟಿರಬೇಕು ನಿನ್ನ ಸೊಕ್ಕು” ಎಂದು ಚೀರುವನು. ಅದು ಮುಗಿಯುವಷ್ಟರಲ್ಲಿ ಬಡಿಗೆಯೇಟಿನ ಸಪ್ಪಳ ! ಆಮೇಲೆ – “ನಿನ್ನ ಜೀವ ಉಳಿಸುವದಿಲ್ಲ ಇನ್ನು” ಎಂದು ಗುಡುಗುವನು. ತರುವಾಯ ಇನ್ನೊಂದು ಏಟು. ಅನಂತರ – ನಿನ್ನನ್ನು ಕೊಂದು ಹಾಕಿದರೂ ನನ್ನ ಸಿಟ್ಟು ಇಳಿಯದು” ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ – ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು – “ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ” ಎನ್ನುತ್ತ ಸಾಗಿ ಹೋಗುವರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...