Home / ಕವನ / ಕವಿತೆ / ಹೆಸರಿನೊಳಗೇನಿದೆ?

ಹೆಸರಿನೊಳಗೇನಿದೆ?

ದರ್ಪ ಸೂಚನೆ ಸುಖದ ವಂಚನೆ
’ಮನು’ ಮನದ ಯಾತನೆ
ಜಾತಿ ಧರ್ಮ ಆಸ್ತಿ ಗೌರವ
ಕಾಣಲಾರವೆ ಹೆಸರೊಳಗೆ?

ಊರ ಗೌಡನ ಹೆಸರು
ಶೂದ್ರ ಸಿದ್ದನದೇನು?
ಗೌಡ ಕರೆದಂತೆ ಕರಿಸಿದ್ದನನ್ನು
ಕೂಗಬಹುದೇ ಹೊಲೆಯ ಗೌಡನನ್ನು?

ಇರಬಹುದು ಒಮ್ಮೊಮ್ಮೆ
ಹೆಸರೊಂದೆ ಈರ್ವರಿಗು
ಒಂದೇ ಮನೆಯಲಿ ಸಣ್ಣ ದೊಡ್ಡ
ಜಾತಿ ಮತಗಳ ನಡುವೆ ದೊಡ್ಡ ಗುಡ್ಡ

ಲಂಗೋಟಿ ಇರದವಗೂ
ಗೌಡನೆಂದೆ, ಸಾಮಿಯೆಂದೆ
ಧಣಿಯೆಂದೆ, ಸಾವ್ಕಾರನೆಂದೆ
ಹಾಗಲ್ಲದಿದ್ದರೆ ಅದು ಜಾತಿ ನಿಂದೆ!

ಒಲವಿತ್ತು ಬಲವಿತ್ತು
ಛಲವಿತ್ತು ಗೆಲುವಿತ್ತು
ಊರಾಚೆಯ ಕರಿಯನಿಂದೆ
ಕರೆದೆ ನೀ ನಿನ್ನದೇ ದೇವರ
’ಲೇ ಬಸ್ಯಾ, ಯಂಕ್ಯಾ, ರಾಗ್ಯಾ, ರಾಮ್ಯಾ…’
ವಕ್ರೋಕ್ರ ಪೆಕರ ಕಾಗೆ ಕರೆವಂತೆ

ಹೆಸರಿನಿಂದಲೆ ಧರ್ಮ
ಹೆಸರಿನಿಂದಲೆ ಕರ್ಮ
ಗೊತ್ತಿಲ್ಲ ಯಾರಿಗೆ ಇದರ ಮರ್ಮ?

ಅಕ್ಬರನೆಂದರೆ ಮುಸ್ಲಿಮನೆಂದೆ
ಆಚಾರಿಯೆಂದರೆ ಹಾರವನೆಂದೆ
ಡೇವಿಡ್ಡು ಆಂಥೋನಿ ಕ್ರಿಸ್ತನೆಂದೆ

ಎಂದಾದರು ಎಲ್ಲಾದರು
ಇಟ್ಟು ಕರೆದೆವೆ ಬೇರೆ ಹೆಸರು
ನಮ್ಮ ಮಕ್ಕಳಿಗೂ ಅದಲು ಬದಲು?

ಮರದ ತುಂಡು
ಕಲ್ಲು ಗುಂಡು
ಊರ ಹೊರಗಿನ ದೇವರು

ಮಾರಮ್ಮ ದುರುಗಮ್ಮ
ಸುಂಕ್ಲಮ್ಮ ಮರಿಗೆಮ್ಮ
ಎಷ್ಟು ಚಂದದ ಹೆಸರು
ಕುರಿ ಕೋಳಿ ಕ್ವಾಣ
ಉಳಿಸಿದ್ದು ಇವರ ನ್ಯಾಣ!

ಚಂದ ಚಂದದ ಮೂರ್ತಿ
ಜಗವ ತುಂಬಿದೆ ಕೀರ್ತಿ
ದೊಡ್ಡ ಮಂದಿಯ ದೇವರು
ಕೃಷ್ಣನಂತೆ ರಾಮನಂತೆ
ಎಲ್ಲಾ ಅವನ ಲೀಲೆಯಂತೆ
ಗೋವಿಂದಾ ಮಾಯೆ ನಿನ್ನ ಹೆಸರು!

ಜಾತಿ ಜಾತಿಗೂ ಒಬ್ಬ
ಧರ್ಮ ಧರ್ಮಕೂ ಮಬ್ಬ
ಸೃಷ್ಟಿಸಿದೆ ಬಲುಚತುರ ಮಾಯಕಾರ

ನಾಮ ನಾಮಗಳ ಹೊಸೆದು
ಒಂದೇ ದಾರದಿ ಬೆಸೆದು
ಜೀವ ಜೀವಕೆ ಜೀವಕೊಡುವುದ
ಬೇಕೆಂತಲೇ ಮರೆತ ಗೆಣೆಕಾರ!

ನಿನ್ನೆ ಮೊನ್ನೆಗಳಿಂದ ಕತ್ತಲೆ ಸೀಳಿ
ನಾಲ್ಕಕ್ಷರದ ಬೆಳಕು ಮೂಡಿ
ಉಟ್ಟ ವಸ್ತ್ರದ ಜೊತೆಗೇ
ಇಟ್ಟ ಹೆಸರುಗಳು ಬದಲಾಗಿ
ಸಂದಿದೆ ನಗರಜೀವನದ ಷೋಕಿ

ಹೆಸರಿನಲ್ಲೇನಿದೆ ಬರೀ ಹೆಸರು
ಲೋಕವಾದರೆ ತಾ ಒಂದೇ ಉಸಿರು

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...