Home / ಕವನ / ಕವಿತೆ / ಆದರ್ಶಕ್ಕೆ

ಆದರ್ಶಕ್ಕೆ

ದೂರದೂರ ದಿಕ್ದಿಗಂತದಿಂದ ದೂರಕೆ
ಹಗಲು ಮುಗಿಲು ಮಿಲನವಾಗಿ ಕುಣಿಯುತಿರುವೆಡೆ
ಜಗವೆ ಒಲವ ಕೊಳಲು ಆಗಿ ಗಾನ ಸುರಿವೆಡೆ
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ಕಣ್ಣ ಮುಚ್ಚಿ
ಹೃದಯ ಮುಚ್ಚಿ
ಒಮ್ಮೆ ಅಂದು ಕಾತರಿಸಲು
ಮಿಂಚಿನಂತೆ ತೂರಿ ನೀನು
ಜೀವ ತೋರಿದೆ
ಬಲವ ಕಲಕಿದೆ!

ಯಾರಿಗಾಗಿ ಕೊರಗುತಿಹೆನೊ ಅದನೆ ಅರಿಯದೆ
ಸಾಗುತಿಹುದು ಜೀವ ನನ್ನ ನೆಲೆಯ ಕಾಣದೆ!   ೧

ಎಲ್ಲೆಡೆಯಲು ಬೆಳಕು ಇರಲು ನನಗೆ ಕತ್ತಲು!
ಅಲೆಗಳಂತೆ ಜಿಗಿದು ಜಿಗಿದ ಬಾಳು ಬತ್ತಲು
ಕಂಡುದೊಮ್ಮೆ-ಕಾಂಬುದೆಲ್ಲಿ-ಶೂನ್ಯ ಸುತ್ತಲು!
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ಮನಸು ಸೊರಗಿ
ಜೀವ ಕೊರಗಿ
ಸುತ್ತಮುತ್ತು ತಿರುಗಿ ತಿರುಗಿ
ಮೌನದಲ್ಲೆ ಮರುಗಿ ಮರುಗಿ
ನಿನ್ನ ಕಾಣದೆ
ಬಾಡಿ ಒರಗಿದೆ!

ಕಾಲ ದುಗುಡದಾಳದಲ್ಲಿ ಹರಿದು ಸಾಗಿದೆ
ಸಾಗುತಿಹುದು ಜೀವನಿನ್ನ ನೆಲೆಯ ಕಾಣದೆ!   ೨

ಎಳೆಮಂಜಿನ ಮೇಲ್ಮೈಯಿನ ಮೃದುತೆಯಂತೆದೆ
ಎಳೆಹರಯದ ದಳಗಳೊಳಗೆ ಹುದುಗಿ ಹೋಗಿರೆ
ಬೀಗಿ ಬಳುಕಿ ಸಾರಿಹೋದ ಬೆಳಗಿನ ಕನಸೆ!
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ತಾಯ ಮಮತೆ
ಎದೆಯ ಕೊರತೆ
ನೀಗುತೆನ್ನ ಮನಕೆ ಶಾಂತಿ
ತರುವುದೆಂಬ ಬಯಕೆ ಭ್ರಾಂತಿ
ಕಂಡುದೇನನು?
-ತನ್ನತನವನು!

ಪ್ರೇಮ ತನ್ನ ಬೆಲೆಯಿದೆಂದು ಬೇಡಲು ಬಹುದೆ?
ಸಾಗುತಿಹುದು ಜೀವ ನಿನ್ನ ನೆಲೆಯ ಕಾಣದೆ!   ೩

ಹೆಣ್ಣೊಂದರ ಕಣ್ಣಿನಲ್ಲಿ ಮಿಂಚಿನ ಮಿಣುಕು
ಕಂಡೆನೊಮ್ಮೆ ಅಲ್ಲೆ ಇಹುದು ಒಲವಿನ ಬದುಕು
ಎನುತ ಹಾರಿಹೋದೆನಾಗ ಆಕೆಯ ಬಳಿಗು
ಸಾಗುತಿರಲು ಜೀವ ನಿನ್ನ ಮೂರ್ತಿಯರಸುತೆ!

ಇನಿತು ದಿನವು
ಕಾಣದಿರವು
ಹೃದಯ ಬಯಸಿ ಬೆಳೆಸಿದೊಲವು
ಹೂವಾಗಿದೆ ಆಕೆ ಚೆಲುವು
ಎನುವ ಭರವಸೆ
ಎದೆಯ ತುಂಬಿರೆ
ಆಸೆಯೊಡೆದು ಒಲವು ಸಿಡಿದು ಹೃದಯ ಬಿರಿದಿದೆ!
ಸಾಗುತಿಹುದು ಜೀವ ನಿನ್ನ ನೆಲೆಯ ಕಾಣದೆ!   ೪

ಮುಳುಗುತಿರುವ ತಾರೆ ತನ್ನ ಕಂಗಳ ತೊಳೆದು
ಕಳುಹುತಿರಲು ಭುವಿಯ ಕಡೆಗೆ ಮಂಜಿನ ಹರಳು
ಹಾತೊರೆಯುತ ಕಾಯುವಂತೆ ಹೂವಿನ ಎದೆಯು
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ನೆಲೆಯನರಸಿ
ಬದುಕ ಸವೆಸಿ
ಕೊನೆಯಿಲ್ಲದ ಕಡಲಿನಲ್ಲಿ
ಕೊರಗು ಕೊಟ್ಟ ದೋಣಿಯಲ್ಲಿ
ಅಲೆಗೆ ಬೆದರುತೆ
ಜೀವ ಸಾಗಿದೆ!

ಒಲವವಸತಿ ಕಾತರಿಸಿದೆ ನಾಳೆಯರಿಯದೆ!
ಸಾಗುತಿಹುದು ಜೀವ ನಿನ್ನ ನೆಲೆಯ ಕಾಣದೆ!   ೫
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...