Home / ಕವನ / ಕವಿತೆ / ತೋರಣ ಕಟ್ಟೋಣ!

ತೋರಣ ಕಟ್ಟೋಣ!

ಹಬ್ಬ ಬಂತು, ಓ ಹಬ್ಬ! ಕೆಳೆಯರೇ,
ತೋರಣ ಕಟ್ಟೋಣ!
ಹಬ್ಬ ಹಬ್ಬಕೂ ಮನೆಯ ಬಾಗಿಲಿಗೆ
ತೋರಣ ಕಟ್ಟೋಣ!

ಮಾವಿನ ತೋಪಿಗೆ ಬನ್ನಿರಿ, ಕೆಳೆಯರೆ,
ತೋರಣ ಕಟ್ಟೋಣ;
ಬೆಳಗಿನ ಜಾವ ಮುಗಿಯುವ ಮುನ್ನ
ತೋರಣ ಕಟ್ಟೋಣ!

ಚುಕ್ಕಿಯಾಗಸದೆ ಮಾಸುವ ಮುನ್ನ
ತೋರಣ ಕಟ್ಟೋಣ;
ಹಕ್ಕಿ ಗೂಡಿನಲಿ ಎಚ್ಚರುವ ವೇಳೆ
ತೋರಣ ಕಟ್ಟೋಣ!

ಕೆಂಪು ಮೂಡಲಲಿ ಹುಟ್ಟುವ ಹೊತ್ತಿಗೆ
ತೋರಣ ಕಟ್ಟೋಣ;
ತಂಪು ಹೊತ್ತಿನಲೆ ಸೊಂಪು ತಳಿರಿನ
ತೋರಣ ಕಟ್ಟೋಣ!

ಎಲ್ಲರೊಂದಾಗಿ ಉಲ್ಲಸದಿಂದ
ತೋರಣ ಕಟ್ಟೋಣ;
ನಲ್ಲ ನಲ್ಲೆಯರು ಏಳುವ ಮೊದಲೆ
ತೋರಣ ಕಟ್ಟೋಣ!

ಅಕ್ಕ ರಂಗೋಲಿಯಿಕ್ಕುವ ಮೊದಲೆ
ತೋರಣ ಕಟ್ಟೋಣ;
ಚಿಕ್ಕ ಮಕ್ಕಳೇಳುವ ಹೊತ್ತಿಗೆ ಹೊಸ
ತೋರಣ ಕಟ್ಟೋಣ!

ಸುಂದರಾಂಗಿಯರ ಚೆಂದದ ಹಬ್ಬಕೆ
ತೋರಣ ಕಟ್ಟೋಣ;
ನಂದಗೋಕುಲವ ಹೋಲುವ ಮನೆಗೆ
ತೋರಣ ಕಟ್ಟೋಣ!

ದೇವ ದೇವನಾನಂದದ ಹಬ್ಬಕೆ
ತೋರಣ ಕಟ್ಟೋಣ;
ಪಾವನಮೂರ್ತಿ ಮನೆಗೆ ಬರುವನು
ತೋರಣ ಕಟ್ಟೋಣ!

ಹೊಸತು ಹಬ್ಬವಿದೊ ಕನ್ನಡ ಹಬ್ಬಕೆ
ತೋರಣ ಕಟ್ಟೋಣ!
ಒಸಗೆಯಾಗಲಿದೆ ನಾಡು ನಾಡಿಗೇ
ತೋರಣ ಕಟ್ಟೋಣ!

ಸಾಲು ಹಬ್ಬದಲಿ ಸಾಲು ಸಾಲಾಗಿ
ತೋರಣ ಕಟ್ಟೋಣ;
ಸಾಲ ಸೋಲಗಳು ಇದ್ದರೆ ಇರಲಿ
ತೋರಣ ಕಟ್ಟೋಣ!

ಪಂಚ ಭಕ್ಷ್ಯ ಇಲ್ಲಾ ಎನಲೇತಕೆ?
ತೋರಣ ಕಟ್ಟೋಣ!
ವಂಚನೆಯಿಲ್ಲದ ಬದುಕಿನ ಹಬ್ಬಕೆ
ತೋರಣ ಕಟ್ಟೋಣ!

ಮನೋಮಂದಿರಕೆ ನಿಚ್ಚ ಹಸುರಿನಾ
ತೋರಣ ಕಟ್ಟೋಣ!
ಹೃದಯ ಕಲಶದಾ ಮುಂಗಡೆ ಹರುಷದ
ತೋರಣ ಕಟ್ಟೋಣ!

ಬಂದಿತು ಬಿಡುಗಡೆ! ಬಿಡುಗಡೆ ಹಬ್ಬಕೆ
ತೋರಣ ಕಟ್ಟೋಣ!
ನಾಡು ನಗುತಿರಲಿ! ಅಶೋಕನ ತಳಿರಿನ
ತೋರಣ ಕಟ್ಟೋಣ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...