Home / ಕವನ / ಕವಿತೆ / ಅಣುಶಕ್ತಿ

ಅಣುಶಕ್ತಿ

ಅಂದು – ಋಷಿಗಳ್ ಯೋಗಿಗಳ ಪರಮ ದಾರ್ಶನಿಕರ್‍
ಭಕ್ತರ್‍ ವಿರಕ್ತರ್‍ ಕೀವಂದ್ರರ್‍
ದಿವ್ಯಚಕ್ಷುನಿನಿಂ
ಅಣುವನೊಡೆದರ್‍
ಕಂಡರದ್ಭುತಮಂ,
ಪೂರ್ಣ ದರ್ಶನಮಂ:
ವ್ಯೋಮ ಭೂಮಿಗಳೊಳ್

ರವಿಯಾಗಿ ಶಶಿಯಾಗಿ ತಾರಾನಿಕರಮಾಗಿ
ಸಿಡಿಲಾಗಿ ಮಿಂಚಾಗಿ ವೃಷ್ಟಿಯೆನಿಸಿ
ಕಡಲಾಗಿ ಭೂಮಿಯೊಡಲಾಗಿ
ತಾನ್ ಸರ್ವ ಸೃಷ್ಟಿಯೆನಿಸಿ
ಮೆರೆವ
ಪರಮ ತೇಜಸ್ವಿಯನ್
ಅಣುವಿಗಣುವಾದನನ್
ಮಹತೋಮಹೀಯನನ್
ಸರ್ವಶಕ್ತನನ್
ಸರ್ವಕಾರಣನನ್
ಪರಮಾತ್ಮನನ್
ಲೋಕತಾರಕನನ್.

ಇಂದು – ಹಿರಿ ವಿಜ್ಞಾನಿಗಳ್ ಪರಮ ಶಕ್ತರ್‍
ಪ್ರತ್ಯಕ್ಷತಾ ತತ್ವದತಿವೀರ ಭಕ್ತರ್‍
ಯಂತ್ರ ಚಕ್ಷುವಿನಿಂ
ಅಣುವನೊಡೆದರ್‍
ಜಗದ
ಕಟ್ಟನೊಡೆದರ್‍:
ಒಡೆದು
ಕಂಡರದ್ಭುತಮಂ,
ಖಂಡ ದರ್ಶನಮಂ:
ವ್ಯೋಮ ಜನ ಭುವಿಗಳೊಳ್
ರವಿ ಶಶಿಗಳಂ ನೊಣೆವ ರಾಹು ಸಮನಾಗಿ
ತಾರೆಗಳ ಮುಕ್ಕುಳಿಪ ತಮದ ರಕ್ಕಸನೆನಿಸಿ
ಸಿಡಿಲಾಗಿ ಸಿಡಿದು ಸೀಳ್ ಮಿಂಚಾಗಿ ಇಳಿದು
ಸುರಿದಗ್ನಿವೃಷ್ಟಿಯಾಗಿ
ಕಡಲನೇ ಕುಡಿದು ನೆಲಮೆಲ್ಲಮನ್ ಒಡೆದು
ಸೃಷ್ಟಿಸರ್ವಸ್ವಮಂ ಬಿಡದೆ ತೊಡೆದು
ಅತಿ ರೌದ್ರದೆಸಕದಿಂ
ಉರಿದು ಮಾಮಸಕದಿಂ
ಪ್ರಲಯ ರುದ್ರಂ ತಾನೆ ಎನಿಸಿ
ಮೆರೆವ
ಪರಮ ಪ್ರಕಾಶಮಂ
ಸೃಷ್ಟಿಯ ವಿನಾಶಮಂ
ಅಣುವಿನೊಳಶಕ್ತಿಯಂ
ಲೋಕ ಮಾರಕಮಂ.

ಅದು ಶಾಂತಿದರ್ಶನಂ,
ಲೋಕತಾರಕ ಶಾಂತಿ;
ಇದು ಕ್ರಾಂತಿ ದರ್ಶನಂ,
ಲೋಕಮಾರಕ ಕ್ರಾಂತಿ.

ವಿಜ್ಞಾನಿಗಳ್ ಧರ್ಮಜ್ಞಾನಿಗಳ್ ತಾವಾಗಿ
ವಿಜ್ಞಾನದ ಸಿಡಿಲ್ ಬಾನವರ ಹೂವಾಗಿ
ಮಾನವರಿಗೊಸಗೆಯಾಗೆ
ಕ್ರಾಂತಿ ‘ಸಂಕ್ರಾಂತಿ’ಯಾಗೆ
ಶುಭವರಳೆ ಕ್ರಾಂತಿಯೊಳಗೆ
ನಿಶ್ಚಯಂ ಕಾಂತಿ ಇಳೆಗೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...