Home / ಕವನ / ಕವಿತೆ / ಮನೆಯು ಪಾಲಾಯ್ತು

ಮನೆಯು ಪಾಲಾಯ್ತು

“ಮನೆಯು ಪಾಲಾಯ್ತು
ಒರ್‌ಬಾಳ್ವೆ ಹೋಳಾಯ್ತು
ಕರುಳೆರಡು ಸೀಳಾಯ್ತು
ಅಯ್ಯೊ! ಅಕಟಕಟಾ!
ಎರಡಾಯ್ತು ಬಾವುಟ”
ಎಂದು ಗೋಳಾಡದಿರು
ಓ, ಗೆಳೆಯನೇ!

ಕಲಹ ಪಾಲಿಗೆ ಮೊದಲು:
ಹೊಗೆಯಿತಸಮಾಧಾನ,
ಉರಿಯಿತು ದುರಭಿಮಾನ.
ತಮ್ಮ, ಪಸುಗೆಯ ಬಯಸಿ
ಕೈಮಾಡಿದನು, ಮುನಿದು;
ಒಬ್ಬಣ್ಣ ಸುಮ್ಮನಿರೆ
ಉಳಿದರಂತಿಹರೆ?

ಹೊಡೆತಕ್ಕೆ ಮರುಹೊಡೆತ;
ಮತದ ಮದ್ದಿನ ಸಿಡಿತ!
ಮಾರಿಗಾಯ್ತೌತಣ;
ನಾಡೆಲ್ಲ ರಣ ರಣ!

ತಡವೆ ರೋಗನಿದಾನ!
ಒಳಗೆಲ್ಲೊ ವಿಷದ ಸೆಲೆ
ಉಪಚಾರ ಮೇಲ್ಮೇಲೆ!
ಅರಿವು ಮೂಡಿದ ಮೇಲೆ
ನಿಜದ ಸಂಧಾನ.
ನಮ್ಮ ಮನೆ ಪಾಲಾಗೆ
ಬೇಕಾಯ್ತು ಕಡೆಗೆಮಗೆ
ಹೆರರ ತೀರ್ಮಾನ!

ಎಲ್ಲವೂ ಆಯ್ತು, ದಿಟ!
ಪಾಲಾಯ್ತು ಮನೆ ಮಠ,
ಹಣಕಾಸು ಆಳು ಭಟ;
ಒಂದೆಸೆದ ಬಾವುಟ!
ಗೆದ್ದಿತೆಲ್ಲರ ಹಟ!
ಇನ್ನೇತಕಾ ಗೋಳು?

ನೋಡು ನಾಳಿನ ಬಾಳು:
ನಗುತಿರಲಿ ಆ ಮನೆ,
ನಗುತಿರಲಿ ಈ ಮನೆ!
ಅವರ ಬಾವುಟವವರು
ನಮ್ಮ ಬಾವುಟ ನಾವು
ಏರಿಸುವ! ಹಾರಿಸುವ!
ಒಲುಮೆ ತೋರಿಸುವ!
ನಮ್ಮ ಕರುಳಿನ ನಂಟು
ಬಿಡಿಸಲಾಗದ ಗಂಟು:
ಈ ನಂಬಿಕೆಯ ಬೆಳಕೆ
ಒಡೆದ ಮನಕಂಟು!

ಬೇರೆಯಿಹ ಕೈಗಳನು
ಮುಗಿದು ವಂದಿಸಿದಂತೆ;
ಎರಡು ಕಣ್ಣಿನ ಕವಲು-
ನೋಟ ಸಂಧಿಸಿದಂತೆ;
ಇಬ್ಬಗೆಯ ಹೂಗಳನು
ಹಾರಕೊಂದಿಸಿದಂತೆ;
ಗಂಡು ಹೆಣ್ಣಿನ ಬಾಳ-
ನೊಲುಮೆ ಬಂಧಿಸಿದಂತೆ;
ಕವಲೊಡೆದ ಕಾವೇರಿ
ಮತ್ತೆ ಕೂಡಿದ ತೆರದಿ;
ಬೇಡನಾವನೊ ಬಂದು
ಎರಡು ಗೂಡಿನಲಿಟ್ಟ
ಜೊತೆಯ ಹಕ್ಕಿಗೆ ಕಟ್ಟ-
ಕಡೆಗೆ ಬಿಡುಗಡೆ ದೊರೆಯೆ
ಅವು ಹಾರಿ ನೆರೆವಂತೆ;
ಹುಟ್ಟು ಧರಿಸಿದ ಆತ್ಮ
ಪರಮಾತ್ಮನಲಿ ಕಡೆಗೆ
ಬೆರೆತೈಕ್ಯವಪ್ಪಂತೆ;
ನಾವು ಸೋದರರಿಂದು
ಬೇರಾದರೇನಂತೆ,-
ಮನವೊಡೆಯದಂತೆ
ಮನೆಯೊಡೆಯದಂತೆ
ಮತ್ತೆ ಬೆರೆಯೋಣ,
ಹೊಸ ಬಾಳ ತೆರೆಯೋಣ,
ಶಾಂತಿ ಸೌಹಾರ್ದಗಳ
ಅಮೃತವರ್ಷದ ಧಾರೆ
ಇಳೆಗೆಲ್ಲ ಕರೆಯೋಣ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...