Home / ಕವನ / ಕವಿತೆ / ಅಮೃತ ಸ್ವಾತಂತ್ರ್‍ಯ

ಅಮೃತ ಸ್ವಾತಂತ್ರ್‍ಯ

ಗಳಿಸಿಕೊಂಡಿಹೆವಿಂದು ಸ್ವಾತಂತ್ರ್‍ಯ ಭಾಗ್ಯವನು
ಉಳಿಸಿಕೊಳ್ಳುವೆವೇನು ಅದನು ಮುಂದಿನ್ನು?

ಜಾತಿ ಮತ ಪಂಥಗಳ ಭೇದಗಳನೆ ಹಿಡಿದು,
ರೀತಿ ನೀತಿಯ ತೊರೆದು, ಗುಣಕೆ ಮನ್ನಣೆ ತಡೆದು,
ಭೀತಿಯನ್ನೊಡ್ಡಿ ಜನತೆಯ ಹಕ್ಕುಗಳ ಕಡಿವ
ಸರ್ವಾಧಿಕಾರ ಬರೆ ಸ್ವಾತಂತ್ರ್‍ಯವೆ?

ಬಡವ ಬಲ್ಲಿದನೆಂಬ ಭೇದಗಳು ಇನ್ನುಳಿಯೆ
ಅವರಿಬ್ಬರೊಳದ್ವೇಷದುರಿ ಹೊತ್ತಿ ಬಲ್‌ಬೆಳೆಯೆ
ನಾಡೊಳು ಅಶಾಂತಿ ಅಂತಃಕಲಹಗಳು ಮೊಳೆಯೆ-
ಕಾದಾಡುವಾ ಹಕ್ಕೆ ಸ್ವಾತಂತ್ರ್‍ಯವೆ?

ಅರೆಹೊಟ್ಟೆ ತಿನ್ನುವುದೆ ನಿತ್ಯನಿಯಮವದಾಗೆ
ಇನ್ನು ಮಾರದೆ ಉಳಿಯೆ ಬಡತನದ ಬಿರುಬೇಗೆ
ಊರು ಕೇರಿಗಳೆಲ್ಲ ಭಿಕ್ಷುಕರ ಬೀಡಾಗೆ
ಸಾವು ಬದುಕಿನ ನರಕ ಸ್ವಾತಂತ್ರ್‍ಯವೆ?

ನಾಡ ಮಕ್ಕಳು ಮಂದಿ ಅಜ್ಞಾನದಲಿ ಮುಳುಗಿ
ಎಲ್ಲೊ ಹಲಕೆಲರು ಪಂಡಿತರೆನಿಸಿ ಬೆಳಗಿ
ಸ್ವಾರ್ಥಸಾಧಕರ ಪಡೆ ನಾಡೆಲ್ಲ ತಿರುಗುತಿರೆ
ಅವರ ತಾಳಕೆ ಕುಣಿಯೆ ಸ್ವಾತಂತ್ರ್‍ಯವೆ?

ಸಾಮ್ಯವಾದದ ಹೆಸರ ಹಲಗೆಯನು ಮುಂದಿಟ್ಟು
ವಿಜ್ಞಾನ ಯುಗವೆಂದು ಧರ್ಮವನು ಕಟ್ಟಿಟ್ಟು
ಪ್ರಾಚೀನ ಸಂಸ್ಕೃತಿಯ ಸುಟ್ಟು ಕರಿಬೊಟ್ಟಿಟ್ಟು
ಮುಂದುವರಿಯುವೆವೆನಲು ಸ್ವಾತಂತ್ರ್‍ಯವೆ?

ನಮ್ಮ ನಡೆ ನುಡಿ ನೋಟ ನಮ್ಮ ನಯ ನೀತಿ ನೆಲೆ
ನಮ್ಮ ನಾಡಿನ ಜ್ಞಾನ ಭಂಡಾರದತುಳ ಬೆಲೆ
ಧರ್ಮಬಾಹಿರ ಯಂತ್ರಜೀವನದಿನಾಗೆ ಕೊಲೆ
‘ನಾವು ನಾವಲ್ಲದಿಹ’ ಬದುಕು ಸ್ವಾತಂತ್ರ್‍ಯವೆ?

ತನ್ನ ನಂಬಿದ ಬೆಳಕ ಹಿಡಿದು ನಿಲಲಾಗದಿರೆ
ತನ್ನ ಕಾಣ್ಕೆಯ ಸತ್ಯ ನುಡಿಯಲನುವಿಲ್ಲದಿರೆ
ತನ್ನ ಇಚ್ಛೆಯ ಬಾಳ್ಕೆ ನಡೆಸಲೆಡೆಯಿಲ್ಲದಿರೆ
ದೊರೆತ ಸ್ವಾತಂತ್ರ್‍ಯವದು ಸ್ವಾತಂತ್ರ್‍ಯವೆ?

ದೇವನೆದುರಿನಲೆಲ್ಲ ಸರ್ವಸಮರೆನಿಸುತ್ತ
ಧರ್ಮ ನೆಲೆ ತಪ್ಪದೊಲು ಸಮತೆಯನು ಸಾಧಿಸುತ
ಇಹದ ಹಾಲಿಗೆ ಪರದ ಸಕ್ಕರೆಯ ಬೆರಸುತ್ತ
ಬಾಳಲಪ್ಪುದೆ ಅಮೃತ ಸ್ವಾತಂತ್ರ್‍ಯವಲ್ತೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...