Home / ಕವನ / ಕವಿತೆ / ಅಶೋಕ ಚಕ್ರ

ಅಶೋಕ ಚಕ್ರ

ನೋಡದೊ ಸ್ವಾತಂತ್ರ್‍ಯಾಕಾಶದಲಿ
ಹಾರುತ್ತಿದೆ ನವ ರಾಷ್ಟ್ರಧ್ವಜವು!
ಹಾರಲಿ! ಏರಲಿ! ಈ ಹೊಸ ಬಾವುಟ!
ಚಿರ ಬಾಳಲಿ ನವ ಭಾರತ ಕೂಟ!

ಹಿಂದೂ ಮುಸ್ಲಿಮ ಸಿಕ್ಕರು ಒಂದು
ಹಿಂದೆ ಇಂದು ಮುಂದೆಂದೆಂದೂ-
ಇಂತು ಸಾರುತಿದೆ ಈ ಹೊಸ ಬಾವುಟ:
ಗೆಲ್ಲಲಿ ಎಲ್ಲರು ಒಂದೆನುವೀ ದಿಟ!

ಬಾರ ಬಾರ ಹರಿಕಾರ ಸಮೀರ
ತಾರ ತಾರ ಬಾವುಟಕ್ಕೆ ವಿಹಾರ
ತೋರ ತೋರ ಬಾವುಟದಾಕಾರ:
ಹಾಡಲಿ ಹರಸಲಿ ಲೋಕವಪಾರ!

ನಿಲ್ಗೆ ಚಂದ್ರತಾರಂಬರಮೀ ಧ್ವಜ
ಪುಣ್ಯಭೂಮಿಯಲಿ ನವ ಕಲ್ಪ ಕುಜ!
ತುಂಬಿ ಬಿಡುತಿರಲಿ ಫಲಪುಷ್ಪವ್ರಜ,
ಆಶ್ರಯ ಹೊಂದಲಿ ಸರ್ವಪ್ರಜಾ.

ಹಸುರು ಬಿಳಿಪು ಕೇಸರಿಗಳು ಕೂಡಿದ
ಮೂಬಣ್ಣದ ನಡುವೆಯಲದೊ ನೋಡು:
‘ಅಶೋಕ ಚಕ್ರ’ವು ಮೆರೆಯುತಿದೆ,
ಶಾಂತಿಯ ಯುಗವನು ತೆರೆಯುತಿದೆ.

ಅಂದು ಅಶೋಕನು ಧರಿಸಿದ ಚಕ್ರ:
ಯುದ್ಧವ ನಿಲಿಸಿದ ಶಾಂತಿಯ ಚಕ್ರ;
ಶಾಂತಿ ಪುಷ್ಟಿ ತುಷ್ಟಿಗಳನು ತುಂಬುವ,
ಭಗವಾನ್ ಬುದ್ಧನ ಧರ್ಮದ ಚಕ್ರ.

ಹಿಂದೆ ಕೃಷ್ಣನೇ ತೋರಿದ ದಾರಿ-
ಗಾಂಧಿ ಮಹಾತ್ಮರು ಎತ್ತಿಹಿಡಿದ ಗುರಿ-
ಸತ್ಯ ಅಹಿಂಸೆ ದಾನ ಧರ್ಮ ದಯೆ:
ಶೋಕವ ಹರಿಸುವ ‘ಅಶೋಕ’ ಚಕ್ರ.

ಯುದ್ಧವನೆಸಗದೆ, ಯಾರನು ಕೊಲ್ಲದೆ,
ಕೊಲ್ಲಬಂದವರ ರಕ್ತವ ಚೆಲ್ಲದೆ,
ಆಳರಸರ ಹೃದಯವ ಮಾರ್ಪಡಿಸಿದ
ದಿವ್ಯಮಂತ್ರವಿದು: ಅಶೋಕ ಚಕ್ರ.

ನಾಡಿನ ದಾಸ್ಯದ ಶೋಕವ ಕಳೆದು
ಹೆರರಿಗೆ ಶೋಕವ ತರುವುದನುಳಿದು
ಶಾಂತಿಯ ಬೆಳಸುವ ಧ್ಯೇಯವ ತಳೆದು
ತಿರುಗುತ ಬೆಳಗುತಲಿಹುದೀ ಚಕ್ರ.

ಭಾರತೀಯ ಸಂಸ್ಕೃತಿಗಿದೆ ಗುರುತು:
ಭೇದಭಾವಗಳನೆಲ್ಲರು ಮರೆತು
ಕೂಡಿ ಬಾಳೆ ಶೋಕವೆ ಹೊರತು:
ಆ ಬಾಳ ತರಲಿ ಈ ಶುಭ ಚಕ್ರ!

ಸತ್ಯ ಅಹಿಂಸೆಗಳಡಿಗಲ್ ಮೇಲೆ
ಸಮತೆಯ ಸೌಧವ ಕಟ್ಟಲು ನಾಳೆ
ಜನತೆಯ ಶೋಕವು ನೀಗುವುದಾಗಳೆ:
ಅದರ ಮುಂಗುರುಹು ಅಶೋಕ ಚಕ್ರ!

ಭಾರತ ಮಾತೆಗೆ ಕಿರೀಟವಿಟ್ಟು
ನಾಡಿಗೆ ನಲ್‌ನಗು ಮುಖವನು ಕೊಟ್ಟು
ವಿಶ್ವಕೆ ಶಾಂತಿಯ ಹರಕೆಯನಿಟ್ಟು
ತಿಗುತ್ತಿರಲಿ ಸನಾತನ ಚಕ್ರ!

ಎನಿತು ಸೂಳು ತಿರುಗಿದುದೀ ಚಕ್ರ,
ಎನಿತು ಸೂಳು ನಿಂತುದೊ ಈ ಚಕ್ರ;
ನಿಲ್ಲದೆ ತಿರುಗಲಿ ಅಶೋಕ ಚಕ್ರ,
ಗೆಲ್ಲಲಿ ಜಗವನೆ ಧರ್ಮದ ಚಕ್ರ!

ಶ್ರೀ ಕೃಷ್ಣ ಬುದ್ಧ ಅಶೋಕ ಗಾಂಧೀ
ಪ್ರಭೃತಿಪ್ರವರ್ತಿತ ಚಕ್ರಕ್ಕೆ ನಮೋ
ಧರ್ಮದ ಚಕ್ರಕೆ ನಮೋ ನಮೋ
ಅಶೋಕ ಚಕ್ರಕೆ ನಮೋ ನಮೋ

ಅಶೋಕ ಚಕ್ರಾಂಕಿತ ಧ್ವಜಕೆ ನಮೋ
ಭಾರತ ಮಾತೆಗೆ ನಮೋ ನಮೋ
ಭಾರತ ಜನತೆಗೆ ತೇಜವನೆರೆದು
ಸಲಹುವ ದೇವಗೆ ನಮೋ ನಮೋ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...