Home / ಕವನ / ಕವಿತೆ / ಮೂರು ಲಂಗಗಳ ಮಾತುಕತೆ

ಮೂರು ಲಂಗಗಳ ಮಾತುಕತೆ

ಲಂಗ ೧

‘ಏನೇ
ಇಷ್ಟೊಂಽಽಽದು ಘಮ್ ಅಂತೀಯಾ
ರಾತ್ರಿಯೆಲ್ಲಾ ಜೋರಾಽಽಽ?

ಒಂದಕ್ಕೊಂದು ಗಂಟು ಹಾಕಿ
ದ ಗಂಟಿನೊಳಗೇ ಕುಳಿತು
ಶುರುವಿಟ್ಟುಕೊಂಡವು ಎಂದಿನಂತೇ ಮಾತಿಗೆ
ಗಂಟು ಮೋರೆಯ ಸಡಿಲಿಸುತ

ಲಂಗ ೨

‘ಅದು ಬ್ಯಾರೆ ಕೇಡು ಈ ಜನುಮಕ್ಕೆ
ನಾನೇನು
ನಿನ್‌ಥರ
ಇದ್ದವರ ಮನೆಯ ಮಗಳಾ?
ಬೆಳಗೆದ್ರೆ ನೀರು ಬರಲಿಲ್ಲ
ತರಕಾರಿ ತರಲಿಲ್ಲ
ಹಾಲು ಸಿಗಲಿಲ್ಲ
ಕರೆಂಟು ಬಿಲ್ಲು ಕಟ್ಟಲಿಲ್ಲ
ನೂಽಽಽರು ರಗಳೆ
ಸಂಜೆ ಟ್ಯೂಷನ್ನಿಗೋದ ಮಕ್ಕಳು
ಮನೆ ಸೇರುವವರೆಗೂ ಜೀವವಿಲ್ಲ
ಕುಡಿದು ತೂರಾಡುವ ಗಂಡ
ನಿಗೆ ಕಾದ ಮೈ
ಕೆಂಡವಾಗಿದ್ದಷ್ಟೇ ಪುಣ್ಯ
ಉಫ್… ನನ್ ಹಣೆ ಬರಹ’

ಮುದುಡಿಕೊಂಡಿದ್ದ ಕೆಂಪು
ಲಂಗದ ಕಡೆ ಮುಖ ತಿರುವಿ
‘ನೀನೇನು
ಎಷ್ಟೊಂದು ಮೆತ್ತಗಾಗಿದ್ದೀಯಾ
ಏನ್ ಸಮಾಚಾರ, ಸುಸ್ತಾ…?’

ಲಂಗ ೩
ತೂಕಡಿಸುವ ಕಣ್ಣುಗಳನ್ನು ಉಜ್ಜಿಕೊಳ್ಳುತ್ತಾ
ಮೂಲೋಕ ಕಾಣುವಂತೆ ಆಕಳಿಸುತ್ತಾ

‘ನನ್ ಸುಸ್ತು ಯಾರ್ ಕೇಳ್ತಾರೆ ಬಿಡಕ್ಕ
ನನಗೋ
ಗಂಟೆಗೊಬ್ಬ ಗೆಳೆಯ
ಅವ ತಂದಿದ್ದು ಉಡುವುದೊರೊಳಗೆ
ಇವ ಕೈ ಮಾಡಿ ಕರೆಯುತ್ತಾನೆ
ಬಾಗಿಲಲ್ಲಿ ಹೂ ಹಿಡಿದು ನಿಲ್ಲುತ್ತಾನೆ

ಇನ್ನೊಬ್ಬ ಕಚ್ಚೆಗೇ ಕೈ ಹಾಕುತ್ತಾನೆ…
ರಾತ್ರಿಯೆಲ್ಲಾಽಽಽ
ಜೀವವಿಲ್ಲದ ಗೊಂಬೆಯಂತೆ
ಗಾಳಿ ಇಲ್ಲದ ಚೆಂಡಿನಂತೆ
ಹಾಸಿಗೆ ತುಂಬಾ ಅವರ ಬುಡಕ್ಕೆ
ಹರಕೆ ಹೊತ್ತವಳಂತೆ ಉರುಳಾಡಿ
ಪ್ರತಿನಿತ್ಯ ಜಾಗರಣೆ
ನಂದೂ ಒಂದು ಬದುಕು
ಅಂತ ಯಾರ್ಗೇಳಾಣ…?’

*

ಉಳಿದ ಲಂಗಗಳು ಮೂಕವಾಗಿ
ಬಾಯಿ ತೆರೆದು ಕೇಳುತ್ತಿರುವಂತೇ
ಎದುರು ಲಂಗದ ಕಣ್ಣಲ್ಲಿ
ಎರಡು ಹನಿ ಉದುರುವ ಮುನ್ನ
ಅಗಸಗಿತ್ತಿ
ಸರಬರನೆ ಎಲ್ಲರನು ಎತ್ತಿ
ಕುದಿವ ಹಂಡೆಯೊಳಗೆ ಒತ್ತಿ
ಕೈ ತೊಳೆದುಕೊಂಡು
ತನ್ನ ಹರಕು ಲಂಗಕ್ಕೆ
ಒರೆಸಿಕೊಂಡಳು
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...