Home / ಕವನ / ಕವಿತೆ / ಸೀರೆ ಝಾಡಿಸಿದಳೆಂದರೆ

ಸೀರೆ ಝಾಡಿಸಿದಳೆಂದರೆ

ಮಕ್ಕಳು ಆಡುತ್ತಿರುತ್ತವೆ
ತಾಯಿ ಮಗುವಿಗೆ ಹಾಲು ಕೊಡುತ್ತಿರುತ್ತಾಳೆ
ದುಡಿವ ಜನ ದುಡಿಯುತ್ತಿರುತ್ತಾರೆ
ಓಡಾಡುವವರು ಓಡಾಡುತ್ತಿರುತ್ತಾರೆ
ಮಲಗಿರುವವರು ಮಲಗಿರುತ್ತಾರೆ
ಕುಳಿತಿರುವವರು ಕುಳಿತಿರುತ್ತಾರೆ
ಹೊಟ್ಟೆಗೋ ಹೊಟ್ಟೆಕಿಚ್ಚಿಗೋ
ಕರುಳ ಕರೆಗೋ ಸಂಚು ಹೊಂಚುಗಳಿಗೋ
ಸೆಳೆದಾಟಗಳಿಗೋ ಹಲವರು
ಹಲವು ವಿಧಗಳಲ್ಲಿ ಬಡಿದಾಡುತ್ತಿರುತ್ತಾರೆ
ಇಲ್ಲೇ ಇಲ್ಲೇ ಶಾಶ್ವತವಾಗಿ ಇರುತ್ತೇವೆಂಬಂತೆ
ಅಷ್ಟಾವಕ್ರಗಳಲ್ಲೂ ಎಲ್ಲಾ ಸುಸೂತ್ರ
ನಡೆದಿರುತ್ತದೆ ಬದುಕು ಜಟಕಾ ಬಂಡಿ
ಇವನೆಲ್ಲ ಹೊತ್ತ ಈ ತಾಯಿ
ಸುಮ್ಮನೆ ಬಿಮ್ಮನೆ ಬೀಗಿಕೊಂಡಿದ್ದರೆ
ಎಲ್ಲ ಸಲೀಸಾಗಿ ಸಾಗುತ್ತಿರುತ್ತದೆ
ಅವಳಿಗೆ ಹೊಟ್ಟೆ ನೋವಾಗಿ
ಹೊಡೆಮರಳಿತೆಂದರೆ
ಬೇಜಾರಾಗಿ ಒಮ್ಮೆ ಮೈ ನಡುಗಿಸಿದಳೆಂದರೆ…
ಅಥವಾ ಬಾಯಿ ತೆರೆದು ಆಕಳಿಸಿದಳೆಂದರೆ….
ಅಥವಾ ಅವಳಿಗೆ ಸೀನು ಬಂದು
ಸುಡು ಸುಡು ದ್ರವದ ಸೀನು
ಸೀದಿದಳೆಂದರೆ….
ಅಥವಾ ತನ್ನ ಸೀರೆ ನೆರಿಗೆಗಳ
ಸರಿಪಡಿಸಿಕೊಳ್ಳಲು ಸೀರೆ ಝಾಡಿಸಿದಳೆಂದರೆ…
ಅಥವಾ ಯಾಕಾದರೂ ನಿಟ್ಟುಸಿರು ಬಿಟ್ಟು
ಭೋರೆಂದು ಉಸಿರು ಬಿಡತೊಡಗಿದಳೆಂದರೆ…
ನಿಂತವರು ನಿಂತಲ್ಲಿ ಕುಂತವರು ಕುಂತಲ್ಲಿ
ಮಲಗಿದವರು ಅಲ್ಲೆ ಓಡಾಡುವವರು ಅಲ್ಲಲ್ಲೆ
ಬಡಿದಾಡುವವರು ಕಚ್ಚಾಡುವವರು
ಪ್ರೀತಿಸುವವರು ರಮಿಸುವವರು
ರೋಗಿಗಳು ಭೋಗಿಗಳು ಯುವಕರು ಮುದುಕರು
ಕೂಸು ಕುನ್ನಿ ಗಂಡು ಹೆಣ್ಣು ಎಲ್ಲ ಎಲ್ಲರೂ
ನೆಲಸಮ ಮಣ್ಣಲ್ಲಿ ಮಣ್ಣು
ಇಲ್ಲಿ ಉಳಿದ ಬಾಯಿ ಬಡಕೊಳ್ಳುವವರು
ಪತ್ರಿಕೆ-ಆಕಾಶವಾಣಿ-ದೂರವಾಣಿ ಸುದ್ದಿಗಳಿಗೆ
ಕೆಲವು ದಿನ ಆಹಾರ ಸಿಗುವುದು
ಅನುಕಂಪಗಳ ಸುರಿಮಳೆ ಸುರಿಯುತ್ತದೆ
ಸಹಾಯ ಹಸ್ತ ಭೂಮಂಡಲದುದ್ದ ಚಾಚುತ್ತವೆ
ಕೆಲಕಾಲ ಗತಿಸಿದಂತೆಲ್ಲಾ
ಈ ತಾಯಿಯ ಮೈಮೇಲಾದ ಗಾಯ
ಮಾದು ಹೋಗಿಬಿಡುತ್ತವೆ
ಎಂದಿನಂತೆ ಆಡುವವರು ಆಡುತ್ತಾರೆ
ಹೊಡೆದಾಡುವವರು ಹೋರಾಡುವವರು
ದುಡಿಯುವವರು ದುಃಖಿಸುವವರು
ನಗುವವರು ಕೆಲೆಯುವವರು
ತಂತಮ್ಮ ಪರಿಗಳ ಬದುಕುತ್ತಾರೆ
ಮತ್ತೆ ಈ ತಾಯಿ ಸುಮ್ಮನೆ ಬಿಮ್ಮನೆ
ಬೀಗುತ್ತ ಸಾಗುತ್ತಾಳೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...