Home / ಕವನ / ಕವಿತೆ / ಹಗಲಲ್ಲಿ ಕೆಂಪು ಕತ್ತಲೆ

ಹಗಲಲ್ಲಿ ಕೆಂಪು ಕತ್ತಲೆ

ಹದ್ದು ಹಾರಾಡುತಿವೆ ದೇಶಾಕಾಶದ ಮೇಲೆ
ನಿದ್ದೆ ಮಾಡುತಿವೆ ಹೆಣಗಳು ಈ ನೆಲದ ಮೇಲೆ
ರಾಮಬಾಣಗಳು ಬಡಿಗೆ ಸಲಾಕಿಗಳಾಗಿವೆ
ಮಂದಿರಗಳಲ್ಲಿ ಮಾರಣಹೋಮ ನಡೆದಿದೆ
ವಿದ್ಯಾಮಂದಿರಗಳಲ್ಲಿ ಕೊಲ್ಲುವ ವಿದ್ಯಾಪಠಣ
ಜಗದೊಡೆಯ ಯಾವುದೋ ಸಂದಿಯಲ್ಲಿ ಕುಳಿತುಕೊಂಡು
ಬೇರೆ ಸಂದಿನವರನೆಲ್ಲ ಕೊಲ್ಲಲು ಧರ್ಮಾದೇಶ ನೀಡುತ್ತಾನೆ
ತಿಳಿ ಸರೋವರದಂಥ ಕೂಸು ಕಂದಮ್ಮಗಳ ಕಣ್ಣುಗಳಲ್ಲಿ
ಕೆಂಪು ನದಿಗಳ ಭಯಾನಕ ಕನಸುಗಳು
ಮನಮನಗಳು ಸಿಡಿಮದ್ದುಗಳ ಗೂಡುಗಳಾಗಿವೆ
ಮಾತು ಮಾತುಗಳು ವಿಷ ಒಳಗಿಟ್ಟುಕೊಂಡ ಹೂಗಳು
ಮಚ್ಚು ಚಾಕು ಚೈನುಗಳದೇ ಕಾರುಬಾರು
ಓಣಿ ಓಣಿಗಳಲ್ಲಿ ದೇಶದ ಸಂದುಗೊಂದುಗಳಲ್ಲಿ

ಆದರೆ ಮೇಲೆ ಮೇಲೆ ಹಾಡುತ್ತಿದ್ದಾರೆ
‘ಸಾರೆ ಜಹಾನ್‌ಸೆ ಅಚ್ಚಾ ಹಿಂದೋಸ್ತಾನ್ ಹಮಾರಾ’
‘ಈಶ್ವರ ಅಲ್ಲಾ ತೇರೇ ನಾಮ್ ಸಬಕೋ ಸನ್ಮತಿ ದೇ ಭಗವಾನ್’
ದಮ್ಮೇ ಇಲ್ಲದೆ ಹಾಡು ಗಾಳಿಯಲ್ಲಿ ತೇಲಿ ಕರಗಿ ಹೋಗುತ್ತವೆ

ದೇಶ ಸಮಸ್ಯೆಗಳ ಹಾವುಗಳ ಹುತ್ತ
ಒಳಗೊಳಗೇ ಭುಸುಗುಡುತ್ತಿವೆ
ಉಗುಳುತ್ತಿವೆ ವಿಷವ-ಕೊಲ್ಲುತ್ತಿವೆ ಭವಿಷ್ಯವ
ಮೇಲೆ ಕಟ್ಟಿದ ವಲ್ಮೀಕವ ಗುಡಿಯೆಂದು ಭಾವಿಸಿದ್ದಾರೆ
ರಾಮ ರಹೀಮರ ನಡುವೆ ಮುಗಿಲೆತ್ತರ ಗೋಡೆ
ಒಂದನ್ನೊಂದು ನಿರ್ನಾಮ ಮಾಡುವ ದ್ವೇಷ
ತ್ವೇಷದ ಭ್ರಮೆಯ ಪರಿಕಲ್ಪನೆ

ಜಗವೇ ಮನೆಯಾದವಗೆ ಮಂದಿರ ಮಸೀದಿಗಳಲಿ
ಕಟ್ಟಿ ಹಾಕಿದ್ದಾರೆ, ನಿರಾಕಾರ ನಿರ್ಗುಣನ ಮೈಮೇಲೆ
ನಾಮ ಜನಿವಾರ, ಟೋಪಿ ಗಡ್ಡಗಳ ಅಂಟಿಸಿ
ದಾರಿ ಮಾಡಿಕೊಂಡಿದ್ದಾರೆ ಕೆಂಪು ಕಾಲುವೆಗಳಿಗೆ
ಸಜ್ಜಾಗಿವೆ ಕೆಂಗಣ್ಣುಗಳು ಭಾವುಕತೆಯಿಂದ

ಬಾತುಕೂಂಡಿವೆ ತೋಳುಗಳು ಬಡಿದಾಡುವ ಹಟದಿಂದ
ವಿಜ್ಞಾನ ಸೂರ್ಯ ಒಂದೇ ತೆಕ್ಕೆಯಲ್ಲಿ
ಭೂಮಂಡಲವ ಅಪ್ಪಿಕೊಂಡಿರುವ ಈ ಹಗಲಲ್ಲೇ
ಆವರಿಸಿದೆ ಮತಾಂಧ ಕೆಂಪುಕತ್ತಲು ಸುತ್ತಲು
ತಾಲಿಬಾನೋ ಅಯೋಧ್ಯಯ ನೆಲಬಾನೊ
ಕಾಶ್ಮೀರವೋ ಮಾಯಲಾರದ ಹುಣ್ಣು ಹುಣ್ಣು
ಗಾಂಧೀಜಿಯ ಗುಜರಾತು ನರಮೇಧಗಳ ಸುಡುಗಾಡು
ಅಹಿಂಸಾತತ್ವದ ತೆಳು ಮೋಡ ಮೇಲೆ ಮೇಲೆ
ಹಿಂಸಾ ತಾಂಡವ ನರ್ತಿಸಿದೆ ಕರುಳುಗಳ ಮಾಲೆ ಮಾಲೆ
ರಾಜಕೀಯ ಚೌಕಾಸಿ ನಡೆದಿದೆ ಕುರ್ಚಿಗಳ ಮೇಲೆ
ಅಕರಾಳ ವಿಕರಾಳ ರಕ್ತಮಾಂಸಗಳ ಪಿಪಾಸೆ
ಹಲ್ಲುಕಿಸಿದು ದೇಶದ ಮೂಲೆ ಮೂಲೆಗಳಲ್ಲಿ ತಿನ್ನುತ್ತಿದ್ದರೂ
ದಿಲ್ಲಿ ಸಾರುತ್ತಿದೆ ಮೇರಾ ಭಾರತ್‌ ಮಹಾನ್
ಇಲ್ಲಿ ಅಂತರಾತ್ಮ ಮುನುಗುತಿದೆ ದೇಶದ ಅವಸಾನ್
ಸಬಕೋ ಸನ್ಮತಿ ದೇ ಭಗವಾನ್
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...