Home / ಕವನ / ಕವಿತೆ / ವಿಶ್ವಕರ್ಮ ಸೂಕ್ತ

ವಿಶ್ವಕರ್ಮ ಸೂಕ್ತ

ಈ ಎಲ್ಲ ವಿಶ್ವವನು ನಮ್ಮ ತಂದೆಯು ಋಷಿಯು
ಹೋತಾರನಾಗಿ ಯಜ್ಞದಲಿ ಅರ್ಪಿಸಿದ
ಆಶಿಸಿದ ಸೃಷ್ಟಿಸಿದ ಈ ತನ್ನ ಆಸ್ತಿಯಲಿ
ಮೊದಲಿಗನು ತಾನಾಗಿ ಸೇರಿಹೋದ

ಸೃಷ್ಟಿಯಾರಂಭದಲಿ ಈ ವಿಶ್ವವೇನಿತ್ತು
ಯಾವುದದು ತಾನಿತ್ತು ಹೇಗೆ ಇತ್ತು
ವಿಶ್ವಚಕ್ಷುವು ವಿಶ್ವಕರ್ಮನಾ ಮಹಿಮೆಯದು
ಈ ಭೂಮಿಗಗನಗಳ ಸೃಷ್ಟಿಸಿತ್ತು

ವಿಶ್ವವೆಲ್ಲಾ ಕಣ್ಣು ವಿಶ್ವವೆಲ್ಲಾ ಬಾಯಿ
ವಿಶ್ವವೆಲ್ಲಾ ಬಾಹು ಪಾದವಿರುವ
ಹಕ್ಕಿ ರೆಕ್ಕೆಗಳಂತೆ ತೆಕ್ಕೆಯಲಿ ಆ ದೇವ
ಬಾನು ಭೂಮಿಗಳನ್ನು ನಿರ್ಮಿಸಿರುವ

ಯಾವ ವನವದು ಅಲ್ಲಿ ಯಾವ ವೃಕ್ಷವು ಇತ್ತು
ಎಲ್ಲಿ ಈ ಭೂ ಬಾನು ಅಡಗಿದ್ದವು
ಮತಿವಂತ ಮಾನವರೆ ಮನದೊಳಗೆ ಚಿಂತಿಸಿರಿ
ಯಾವುದದು ಭುವನವನು ಧರಿಸಿರುವುದು

ಮೇಲಿರುವುದೆಲ್ಲವೂ ಕೆಳಗಿರುವುದೆಲ್ಲವೂ
ನಡುವಿರುವುದೆಲ್ಲವೂ ನೀ ವಿಶ್ವಕರ್ಮ
ಹವಿಸ್ಸನರ್ಪಿಸುವುದನು ಕಲಿಸು ಗೆಳೆಯರಿಗೆಲ್ಲ
ತನ್ನ ಅರ್ಪಿಸಿ ತಾನು ವೃದ್ಧಿಸುವ ಮರ್ಮ

ವಿಶ್ಚಕರ್ಮನೆ ಸ್ವತಃ ಈ ಭೂಮಿ ಸ್ವರ್ಗಗಳ
ಯಜ್ಞದಲ್ಲಾಜ್ಯ ಮಾಡಿದ ಪರಿಯಲಿ
ಸುತ್ತಲಿನ ಜನ ಮರುಳುತನದಲ್ಲಿ ಮುಳುಗಿರಲಿ
ಇಹದಿ ಸಂಪದ ಜ್ಞಾನ ನಮಗಾಗಲಿ

ವೇಗಮತಿ ವಾಕ್ಪತಿಯೆ ವಿಶ್ಚಕರ್ಮನೆ ನಿನ್ನ
ಬೇಡುವೆವು ಕಾರ್ಯಗಳ ವೃದ್ಧಿಗಾಗಿ
ವಿಶ್ವಂಭರನೆ ಸತ್ಯಕರ್ಮ ಕರುಣಿಸು ನಮ್ಮ
ಯಜ್ಞಹವಿಸುಗಳ ಸಂತುಷ್ಟಿಗಾಗಿ ||
(ಋಗ್ವೇದದ ೧೦ನೆ ಮಂಡಲ)
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...