Home / ಕವನ / ಕವಿತೆ / ನಾವು ಮನುಜರು

ನಾವು ಮನುಜರು

ನಾವು ಸಾಮಾನ್ಯರು
ಕಡಿಯುತ್ತೇವೆ ಕುಡಿಯುತ್ತೇವೆ
ತಿನ್ನುತ್ತೇವೆ ಮಲಗುತ್ತೇವೆ
ಬಾಧೆಗಳಿಂದ ಮುಲುಗುತ್ತೇವೆ
ಹಸಿಯುತ್ತೇವೆ ಹುಸಿಯುತ್ತೇವೆ
ನುಸಿಯುತ್ತೇವೆ ಮಸೆಯುತ್ತೇವೆ
ಸಂದುಗಳಲ್ಲಿ ನುಸುಳುತ್ತೇವೆ
ಸಿಕ್ಕಷ್ಟು ಕಬಳಿಸುತ್ತೇವೆ
ಸಿಗಲಾರದ್ದಕ್ಕೆ ಹಳಹಳಿಸುತ್ತೇವೆ

ಕನಸುಗಳ ಹೆಣೆಯುತ್ತೇವೆ
ನನಸಾಗದೆ ದಣಿಯುತ್ತೇವೆ
ಪರದೆಗಳಲ್ಲಿ ಕುಣಿಯುತ್ತೇವೆ
ಕಾಣದುದರ ಬೆದರಿಕೆಗೆ ಮಣಿಯುತ್ತೇವೆ

ಹೊರಗೆ ಬಂದು ಬೀದಿಗಳಲ್ಲಿ
ನಿಸೂರಾಗಿ ನಡೆಯುತ್ತೇವೆ
ಗುಂಪಿನಲ್ಲಿ ಗೋವಿಂದಾ
ಸೀದಾ ಸಾದಾ ಸಾಚಾತನಗಳಿಗೆ
ನಾವೇ ಹಕ್ಕುದಾರರು
ನ್ಯಾಯ ನೀತಿ ಧರ್ಮಗಳಿಗೆ
ನಾವೇ ವಾರಸುದಾರರು
ಪೋಜು ಕೊಡುವ ಸರದಾರರು
ಪರರನ್ನು ಹೇಸುತ್ತೇವೆ
ಅಲ್ಲಿ ಇಲ್ಲಿ ಮೂಸುತ್ತೇವೆ
ಹಣಕ್ಕೆ ಹಡದಿ ಹಾಸುತ್ತೇವೆ
ಕಂಡವರ ಬೆಳೆಯ ಮೇಸುತ್ತೇವೆ
ಕಂಡು ಕೇಳಿದರೆ ಇಲ್ಲೆಂದು ವಾದಿಸುತ್ತೇವೆ
ರುಚಿಗಳನ್ನೇ ಬಯಸುತ್ತೇವೆ

ವಾಸನೆಗಳ ಹಿಂಬಾಲಿಸುತ್ತೇವೆ
ಕಡುಕೊಂಡು ಬಿದ್ದಾಗ ಹಲ್ಲು ಕಿಸಿಯುತ್ತೇವೆ
ಹೊರಳುತ್ತೇವೆ ನರಳುತ್ತೇವೆ

ಯಾರಿಗೆ ಬೇಕು ಕಷ್ಟ ನಷ್ಟ
ಸಾವು ನೋವು ಅನಿಷ್ಟ
ಅವುಗಳಿಂದ ದೂರ ಓಡುತ್ತೇವೆ
ಮೈ ಉಳಿಸಲು ಗೊಣಗಾಡುತ್ತೇವೆ
ಜೀವ ಉಳಿಸಲು ಹೆಣಗಾಡುತ್ತೇವೆ

ಚಟ ವ್ಯಸನಗಳು ನಮ್ಮ ಜೀವ ಬಂಧುಗಳು
ಅದಕ್ಕಾಗಿ ಬಿಟ್ಟೇವು ಜೀವ
ಸೋಮಾರಿತನ ಸುಳ್ಳು ತಗುಲುಗಳು
ನಮ್ಮ ಜಾಯಮಾನ
ಅದರಲ್ಲೇ ಸಾಗುತಿದೆ ದಿನಮಾನ

ಸಣ್ಣ ಸಣ್ಣದಕೆ ಸೆಣಸುತ್ತೇವೆ
ಕಚ್ಚಾಡುತ್ತೇವೆ ಬಡಿದಾಡುತ್ತೇವೆ
ನಾಯಿಗಳೂ ನಾಚುವಂತೆ
ಪುಕ್ಕಟೆ ಸಿಕ್ಕರೆ ಮುಕ್ಕುರುತ್ತೇವೆ
ಹರಕೊಂಡು ತಿನ್ನುತ್ತೇವೆ
ಕಾಗೆಗಳೂ ಬೆದರುವಂತೆ

ಏನೇನೂ ಕಿಸಿದಿಲ್ಲವಾದರೂ
ಮಾನ ಸನ್ಮಾನ ಪದವಿ ಪ್ರಶಸ್ತಿಗಳಿಗೆ
ಕೈ ಚಾಚುತ್ತೇವೆ ಬಾಚುತ್ತೇವೆ
ಪ್ರಚಾರ ನಮಗಲ್ಲದೆ ಇನ್ನಾರಿಗೆ
ಗೆದ್ದೆತ್ತಿನ ಬಾಲ ಹಿಡಿದು ಹಾಕಿ ಜೈಕಾರ
ಬೇಳೆ ಬೇಯಿಸಿಕೊಳ್ಳುತ್ತೇವೆ
ಗಾಳಿ ಬಂದಂತೆ ತೂರಿಕೊಳುತ್ತೇವೆ

ಹೆರರ ಚಪ್ಪರ ಉರಿಸಿ
ಮೈಕೈ ಕಾಯಿಸಿಕೊಳ್ಳುತ್ತೇವೆ
ಹೇಳುತ್ತಾ ಹೋದರೆ ನಮ್ಮ ಕಥನ
ಸಣ್ಣವು ಭಾರತ ರಾಮಾಯಣ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...