Home / ಕವನ / ಕವಿತೆ / ಸುವರ್ಣ ಸ್ವಾತಂತ್ರ್ಯ

ಸುವರ್ಣ ಸ್ವಾತಂತ್ರ್ಯ

ಭಾರತ ದೇಶದ ಸ್ವಾತಂತ್ರ್ಯೋತ್ಸವದ
ಸುವರ್ಣ ಹಬ್ಬವ ಮಾಡೋಣ
ಬನ್ನಿರಿ ಗೆಳೆಯರೆ ದೇಶ ಬಾಂಧವರೆ
ಸ್ವಾತಂತ್ರ್ಯವ ಕೊಂಡಾಡೋಣ

ತಿಲಕ್ ಗೋಖಲೆ ಮಹಾತ್ಮ ಗಾಂಧಿ
ಸುಭಾಷ್ ವಲ್ಲಭ ಜವಾಹರ
ಸಾವಿರ ಸಾವಿರ ದೇಶಭಕ್ತ ಜನ
ಹೋರಾಡುತ ಗಳಿಸಿದಾ ವರ

ಎಷ್ಟೋ ಜನ ಪ್ರಾಣಗಳನು ತೆತ್ತರೊ
ತಾಯಿಯ ಪಾದಕ್ಕೆ ನೈವೇದ್ಯ
ರಕ್ತದಿ ಬರೆದರೊ ತ್ಯಾಗದ ಕತೆಗಳ
ಎಲರಿಗೂ ವಂದನೆಯಾದ್ಯ

ಬ್ರಿಟಿಷರ ಬೂಟಿನ ತುಳಿತಕ್ಕೆ ಸಿಕ್ಕು
ಜೈಲಲಿ ಕೊಳೆತರೊ ಎಷ್ಟೊ ಜನಾ
ಹೆಂಡಿರು ಮಕ್ಕಳ ಮನೆಗಳ ತೊರೆದು
ನರಳಿ ಗೈದರೋ ಬಲಿದಾನ

ಅಂಥ ಎಲ್ಲ ಸ್ವಾತಂತ್ರ್ಯ ವೀರರಿಗೆ
ಅಶ್ರುತರ್ಪಣವ ಕೊಡಬೇಕು
ಅವರು ಕೊಟ್ಟ ಸ್ವಾತಂತ್ರ್ಯ ಸಂಪದವ
ಎಚ್ಚರದಲಿ ಬಳಸಲು ಬೇಕು

ಐವತ್ತು ವರುಷ ಬಂಗಾರ ಹರುಷ
ಕಳೆದುದು ಪಡೆದುದು ಏನೇನು
ಬಂಗಾರವೇನು ಬೆಳ್ಳಿಯೋ ಮಣ್ಣೋ
ಗಳಿಸಿದ್ದು ಸಾಧಿಸಿದ್ದೇನು
***

ಪ್ರತೀವರ್ಷವೂ ಮಾಡುತ ಬಂದೆವು
ಸ್ವಾತಂತ್ರ್ಯೋತ್ಸವ ಹಬ್ಬ
ಪ್ರತೀ ಸಾರಿಯು ವಿಷಾದದಿಂದಲೇ
ಕಂಡೆವು ಕವಿದಿಹ ಮಬ್ಬ

ಕಛೇರಿ ಶಾಲಾ ವಿದ್ಯಾಲಯಗಳು
ಮಕ್ಕಳ ಮೆರವಣಿಗೆಯಲಿ
ಧ್ವಜವ ಹಾರಿಸುವ ನಾಟಕ ಮಾಡುತ
ಕಳೆದೆವು ವರ್ಷಗಳಲ್ಲಿ

ಪ್ರತೀ ವರ್ಷವೂ ಕೇಳುತ ಬಂದೆವು
ಯಾರಿಗೆ ಬಂತೀ ಸ್ವಾತಂತ್ರ್ಯ
ದೀನ ದಲಿತರಿಗೆ ನೋವು ನರಳಿಕೆಯು
ಕೆಲವರಿಗಷ್ಟೇ ಸ್ವಾತಂತ್ರ್ಯ

ಘಟಸರ್ಪಗಳನು ಇಲಿ ಕಪ್ಪೆಗಳನು
ತೋಳಗಳನ್ನೂ ಕುರಿಗಳನು
ಒಂದೆ ಕೋಣೆಯಲಿ ಕೂಡಿ ಹಾಕಿದೊಲು
ಮಾಡಲು ಸ್ವತಂತ್ರ ದೇಶವನು

ಆಕಳು ಮೊಲಗಳ ಹುಲಿಸಿಂಹಗಳನು
ಒಂದೇ ಕಣದಲಿ ಹಾಕಿ
ಕೂಡಿ ಬಾಳಿ ಸಹ ಜೀವನ ಎನ್ನುತ
ತಂದರು ಸ್ವತಂತ್ರ ಬೆರಕಿ

ಕೋಟಿ ಕೋಟಿಗಳ ಕಬಳಿಸುವಂಥಾ
ಅಧಿಕೃತ ದರೋಡೆಯವರ
ಪ್ರಜಾರಾಜ್ಯವಿದು ಸೃಷ್ಟಿ ಮಾಡುತಿದೆ
ದೇಶ ಕೊಳ್ಳೆ ಹೊಡೆಯುವವರ

ಹಣವುಳ್ಳವರಿಗೆ ಸೇವೆಗೆ ನಿಂತಿವೆ
ಖಾಕೀ ಬಿಳಿ ಕರಿ ಡ್ರೆಸ್ಸು
ಹಣವಿಲ್ಲದವರ ಪಾಲಿಗೆ ಎಲ್ಲಾ
ಕಾನೂನ್ ವ್ಯವಸ್ಥೆ ಟಿಸ್ಸು

ಕಾಳಸಂತೆಗಳು ಕಪ್ಪು ದಂಧೆಗಳು
ರಾಜಾರೋಷದಿ ನಡೆದಾವೆ
ಗೂಂಡಾದಾದರು ರಾಜಕಾರಣವು
ಕೈಕೈ ಹಿಡಿದೇ ಸಾಗ್ಯಾವೆ

ಬಂಗಲೆ ಬಿಲ್ಡಿಂಗ್ ಬೆಳೆದೇ ಬೆಳೆದಿವೆ
ರಕ್ಕಸ ಬೊಜ್ಜಿನ ನಗರಗಳು
ಗೂಡೇ ಇಲ್ಲದೆ ಗೋಳಿಡುತ್ತಿದ್ದರು
ಬಡವರು ಕೊಚ್ಚೆಯ ಪ್ರಾಣಿಗಳು

ನೌಕರಿಗಳದೇ ಮಾರ್ಕೆಟ್ ಇರುವುದು
ಲಕ್ಷಲಕ್ಷಗಳ ವ್ಯಾಪಾರ
ಮದುವೆಯ ಮಾರ್ಕೆಟ್ ಮೆರೆಯುತ್ತಿರುವುದು
ಲಕ್ಷಗಳ ಬೆಲೆಯ ಗಂಡುವರ

ನೌಕರಿದಾರರ ಗುರಿಯು ಗಳಿಸುವುದು
ಅಪ್ರಮಾಣಿಕತೆ ದಾರಿ
ಎಷ್ಟೇ ಸುರಿದರೂ ಹೆಣ್ಣಿಗೆ ಉಳಿವುದು
ಹಿಂಸೆಯ ಬೆಂಕಿಯ ದಾರಿ

ಜಾತಿ ಧರ್ಮಗಳು ಮೌಢ್ಯಾಚಾರ
ಹಳೆಯ ಭೂತಗಳು ಬೆಳೆಯುತಿವೆ
ಹೊಸಯುಗದಿ ಹೊಸುತು ರೂಪವ ತಳೆದಿವೆ
ಜನಗಳ ಮತಿಯನು ಮಸಳಿಸಿವೆ

ಅಯೋಧ್ಯೆಯಲ್ಲೋ ಕಾಶ್ಮೀರದಲ್ಲೋ
ಕೆಂಪು ಚಿತ್ತಾರಗಳು ಬರೆದಾವೋ
ಬೊಂಬಾಯಿಯಲ್ಲೋ ಅಸ್ಸಾಮಿನಲ್ಲೋ
ಬಾಂಬು ರಂಗೋಲಿ ಹಾಕ್ಯಾವೋ

ಕೋಟಿ ಕೋಟಿಗಳ ಹಗರಣಗಳಲೂ
ದೇಶದ ಮುನ್ನಡೆ ಅಂತೀವೋ
ಸುವರ್ಣ ಸ್ವತಂತ್ರ ಭಾರತದಲ್ಲಿ
ತಿಪ್ಪೆಯ ಮ್ಯಾಲೇ ಕುಂತೀವೋ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...