Home / ಕವನ / ಕವಿತೆ / ವಿಧಿ

ವಿಧಿ

ಹೇಳಿರಲಿಲ್ಲಿವೆ ನಾನು ನಿಮಗೆ
ಅವನಿರುವುದೆ ಹಾಗೆ
ಅವನ ಕೆಣಕಬೇಡಿರಿ ಎಂದು

ಅವನೇನು ಹುಚ್ಚನಲ್ಲ ಹೆಡ್ಡನೂ ಅಲ್ಲ
ಪ್ರೀತಿಯ ನೆಪದಲ್ಲಿ
ತಲೆ ಸಡಿಲಾದವನಲ್ಲ
ವಂಶಪಾರಂಪರ್ಯವಲ್ಲ
ಅವನ ಪೂರ್ವಜರಲ್ಲಿ
ಹೀಗೆ ಯಾರಿಗೂ ಇದ್ದಿರಲಿಲ್ಲ
ಅವನಷ್ಟಕ್ಕೆ ಬಿಟ್ಟರೆ ಅವನು
ಯಾರಿಗೇನೂ ಮಾಡುವುದಿಲ್ಲ

ಮಾತು ಬಯ್ಗಳದಂತೆ
ನಿಮಗೆ ಅನ್ನಿಸಬಹುದು
ಅವನ ರೀತಿ ಬೇರೆ-
ಪದಗಳನ್ನು ಹಣ್ಣಿನಂತೆ
ಕಚ್ಚುತ್ತಾನೆ
ಕಲ್ಲಿನಂತೆ ಎಸೆಯುತ್ತಾನೆ
ಜಗಲಿಯಲ್ಲಿ ಕುಳಿತು ವಾಕ್ಯಗಳನ್ನು
ನೂಲಿನಂತೆ ನೇಯುತ್ತಾನೆ
ಬೀಡಿಯ ಹೊಗೆಯಂತೆ
ಉಗುಳುತ್ತಾನೆ ಅರ್ಥದ
ದಟ್ಟ ಮೋಡಗಳನ್ನು

ದೇಶವಿದೇಶ ಸುತ್ತಿದವನಲ್ಲ
ಬಿಹಾರ ಬಂಗಾಳ ಒರಿಸ್ಸ
ಕಾಶ್ಮೀರ ಹಿಮಾಚಲಪ್ರದೇಶ
ಪಂಜಾಬ ಗುಜಾರಾತ ಮರಾಠ
ಎಲ್ಲಿಗೂ ಹೋಗಿಲ್ಲ
ಬೆಲ್ಚಿ ಭೋಪಾಲ ಭಾಗಲ್ಪುರ
ಮೀನಾಕ್ಷಿಪುರ ಕಾಮಾಟಿಪುರ ತಿರುವನಂತಪುರ
ಚಾರ್ಮಿನಾರ್ ಕುತುಬ್‌ಮಿನಾರ್ ಶ್ರವಣಬೆಳಗೂಳ
ಹಳದೀಘಾಟ ರಾಜಘಾಟ ತಾಳೀಕೊಟೆ
ಜಲಿಯನ್‌ವಾಲಾಬಾಗ್
ನೋಡಿದವನಲ್ಲ
ಗಾಂಧಿ ನೆಹರು ಪಟೇಲ ಜಿನ್ನ
ಶೇಖ್‌ಅಬ್ದುಲ್ಲ ಇಂದಿರಾಗಾಂಧಿ ಸಂಜಯಗಾಂಧಿ
ಫೂಲನ್ ದೇವಿ ಹಾಜಿಮಸ್ತಾನ
ಮೊರಾರ್ಜಿ ದೇಸಾಯಿ ಕಾಂತಿದೇಸಾಯಿ ವಾಜಪೇಯಿ
ಅಕ್ಬರ್ ಆಶೋಕ ತುಘಲಕ
ಚರಣ್‌ಸಿಂಗ್ ಸ್ವರಣ್‌ಸಿಂಗ್ ಭಿಂದ್ರಾನ್‌ವಾಲೆ
ರಾಜನಾರಾಯಣ್ ಅಮಜದ್‌ಖಾನ್
ಖಾನ್ ಅಬ್ದುಲ್ ಗಫಾರ್‌ಖಾನ್
ಡಾಕ್ಟರ್ ರಾಮ ಮನೋಹರ ಲೋಹಿಯಾ
ಯಾರನ್ನೂ ಕಂಡವನಲ್ಲ
ಆದರೂ ಅವನು ಹೇಳುವುದರಲ್ಲಿ ಸುಳ್ಳಿಲ್ಲ
ಎಲ್ಲ ಕಡೆ ಹೋಗಿದ್ದಾನೆ
ಎಲ್ಲ ನೋಡಿದ್ದಾನೆ
ಎಲ್ಲ ಕಂಡಿದ್ದಾನೆ

ಯಾರು ನಂಬಿದರೆಷ್ಟು ಬಿಟ್ಟರೆಷ್ಟು
ಮಹಾತ್ಮಾ ಗಾಂಧಿ ತಾನೇ ಎಂದು
ಕಿತ್ತೊಗೆದಿದ್ದನು ಅಂಗಿಯನ್ನು
ದಂಡಿಯಾತ್ರೆ ಕೈಗೊಳ್ಳುವೆನೆಂದು
ನಡೆದು ಹೋಗಿದ್ದನು ಕುಂಬಳೆಗೆ
ಅದೆಷ್ಟೋ ಬಾರಿ ಅನ್ನನೀರು ಬಿಟ್ಟು
ಉಪವಾಸ ಮಲಗಿದ್ದನು
ಗಾಂಧಿಯ ಕೊಲೆಯಾದಂದು
ತಾನೇ ಸತ್ತ ಎಂದುಕೊಂಡಿದ್ದನು
ನಂತರ ನಾಥೂರಾಮ್ ಗೋಡ್ಸೆಯನ್ನು
ಗಲ್ಲಿಗೇರಿಸಿದಾಗ
ತಲೆಬಾಗಿಸಿ ನಿಂತವನು ಇವನೇ!

ಕೊಲೆ ಸುಲಿಗೆ ಅತ್ಯಾಚಾರ ಅಹಿಂಸೆ
ಕ್ಷಾಮ ದಾಮರ ರೋಗ ರುಜಿನು ಮಹಾಯುದ್ಧ
ಎಲ್ಲ ವಿಧಿಗೂ ಬದ್ಧ
ನಡು ಮಧ್ಯಾಹ್ನದ ಸೂರ್ಯನನ್ನು
ಬಿಡುಗಣ್ಣಿನಿಂದ ನೋಡಿ ನಿಲ್ಲುವನು
ಎಂಥ ಸತ್ಯಕ್ಕೂ ಸಿದ್ಧ
ಆದರೂ ಯಾವ ದೇಶ ತಾನೆ
ಇಬ್ಬರು ಸೂರ್ಯರನ್ನು ಸಹಿಸುವುದು?
ಇವನು ಈಗಾಗಲೆ
ಅಂಧನಾಗತೊಡಗಿದ್ದಾನೆ !
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...