Home / ಕವನ / ಕವಿತೆ / ಫಕೀರಪ್ಪನ ಕತೆ

ಫಕೀರಪ್ಪನ ಕತೆ

ಯಾರೂ ಹೇಳಬಲ್ಲರು ಕತೆಗಳನ್ನು. ಆದರೆ ಫಕೀರಪ್ಪನ ಶೈಲಿಯೇ
ಬೇರೆ. ಹೇಗೆ ಕೇಳುಗರ ಅಸಕ್ತಿಯನ್ನು ಕೆರಳಿಸಬೇಕು.
ಎಲ್ಲಿ ತಡೆಹಿಡಿಯಬೇಕು, ಯಾವಾಗ ವೀಳಯದೆಲೆಗೆ ಎಷ್ಟು
ಮೆಲ್ಲಗೆ ಸುಣ್ಣ ಸವರಬೇಕು -ಇದೆಲ್ಲ ಅವನೊಬ್ಬನಿಗೇ ಗೊತ್ತು.
ರಾತ್ರಿ ಸರಿಯುತ್ತಿದ್ದಂತೆ ಕತೆಯನ್ನು ಸಸ್ಪೆನ್ಸಿನಲ್ಲಿ-ಮತ್ತು
ನಮ್ಮನ್ನು ಭಯದಲ್ಲಿ-ನಿಲ್ಲಿಸಿ. ಫಕೀರಪ್ಪ ತಂಬಾಕಿನ ರಸ ಉಗುಳಲು
ಅಂಗಳದಾಚೆಗೆ ಹೋಗುವವ. ಅವನು ಮರಳಲು ಕಾದಂತೆ
ನಾವು ಇನ್ನಾರಿಗೂ ಕಾದ ನೆನಪಿಲ್ಲ.

ಫಕೀರಪ್ಪ ಈಗಿಲ್ಲ. ಒಂದು ಮುಂಜಾನೆ ಪಾಪ
ಕಾರಡ್ಕದ ಕಾಡಿನಲ್ಲಿ ಸತ್ತು ಬಿದ್ದಿದ್ದ. ಕೊಲೆಯೊ? ಆತ್ಮಹತ್ಯೆಯೊ?
(ಕಾರಣ ಇವನಿಗೂ ಅಸ್ತಿತ್ವದ ಸಮಸ್ಯೆಗಳಿದ್ದುವು.) ಹಸಿದ
ಯಕ್ಷಿಯೊಬ್ಬಳು ಗಬಾಯಿಸಿದಳೊ ಇವನನ್ನು? ಹಲವು ಜನ
ಹಲವು ವಿಧ ಹೇಳಿದರು. ಆದರೆ ನಿಜಕ್ಕೂ ತಾನು
ಹೇಗೆ ಸತ್ತೆ, ಎಷ್ಟು ಸ್ವಾರಸ್ಯಕರವಾಗಿ ಸತ್ತೆ ಎ೦ದು ಹೇಳುವುದಕ್ಕೆ
ಫಕೀರಪ್ಪ ತಾನೆ ಎಲ್ಲಿ?
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...