Home / ಕವನ / ಕವಿತೆ / ಕಾರಡ್ಕ

ಕಾರಡ್ಕ

ಕೆಲವು ಸ್ಥಳಗಳ ಹೆಸರುಗಳಿಗೆ ಹಸಿಹುಲ್ಲಿನ ವಾಸನೆ ಮತ್ತು
ಈಗ ತಾನೆ ಮಳೆನಿಂತ ಮಣ್ಣಿನ ತೇವಗಳಿರುತ್ತವೆ.
ಅಪರಾಹ್ನದ ಇಳಿಬಿಸಿಲಲ್ಲಿ ಮನೆಮುಂದಿನ ಪಾರದರ್ಶಕ
ತೋಡಿನಲ್ಲಿ ಕಲ್ಲಿನ ಪಲ್ಲೆಗಳು ಏಡಿಗಳಂತೆ ಮಲಗಿರುವುದನ್ನು
ನೆನಪಿಗೆ ತರುತ್ತದೆ.

ಪಶ್ಚಿಮದಲ್ಲಿ ಹೊಳೆವ ಸಮುದ್ರದ ಅಂಚಿನಂತೆ
ಸ್ಪಷ್ಟವಾಗಿರುತ್ತದೆ. ಬಹುದೂರದ ಆಕಾಶದಲ್ಲಿ ಮಾಯುವ
ಘಟ್ಟಗಳ ಶಿಖರಗಳಂತೆ ಅಸ್ಪಷ್ಟವಾಗಿರುತ್ತವೆ ಕೂಡ.
ಅಂಥ ಸ್ಥಳಗಳಿಂದ ಸಂಜೆ ಕಣಿವೆಗಳಲ್ಲಿ ಇರುಳು
ತುಂಬಿ ಬರುವುದನ್ನು ಕಣ್ಣಾರೆ ಕಾಣಬಹುದು.

ಹೆಮ್ಮರಗಳು ಕಡಿದುರುಳಬಹುದು. ಬೆಂಕಿಯಿಟ್ಪರೆ ಬುಡಗಳು
ಅನೇಕ ದಿನಗಳ ತನಕ ಉರಿದು ಬೂದಿಯಾಗಬಹುದು ಅಥವ
ಕಮರಿ ಹೋಗಬಹುದು. ಬೆಂಕಿ ಹಚ್ಚಿದ ಕಾಡು ಇಡೀ ಗ್ರಾಮದ
ಮೇಲೆ ಕವಿಸುವುದು ಕಂದು ಹೊಗೆ. ಬಿಸಿಲು ಬೀಳುವ ದಿನ
ಆ ಬಣ್ಣಕ್ಕೆ ಬೇರೆ ಹೋಲಿಕೆಯಿಲ್ಲ.

ಒಮ್ಮೆ ವಲಸೆ ಹೋದ ಹುಲಿಗಳು ಮರಳಿ ಬರುವುದಿಲ್ಲ. ಆದರೂ
ಹೆಸರುಗಳು ಉಳಿಯುತ್ತವೆ. ಜಡಿ ಮಳೆಯಲ್ಲಿ ಹಳೆ ರೂಪಕಗಳಂತೆ
ಧ್ವನಿಸುತ್ತವೆ. ಚಳಿಗಾಲದ ಮುಗಿಯದ ರಾತ್ರಿಗಳಲ್ಲಿ
ಅಗ್ಗಿಷ್ಟಿಕೆಯ ಮುಂದೆ ಕತೆಗಳಾಗುತ್ತವೆ. ಬೇಸಿಗೆಯಲ್ಲಿ
ಮಾಗಿದ ಗೇರು ಮರಗಳಿಂದ ಕೆಂಪು ಹಳದಿ ಹಣ್ಣುಗಳಾಗಿ
ತೊನೆಯುತ್ತವೆ -ಅಥವ ಹಾಗೆಂದು ನೆನಪು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...