Home / ಕವನ / ಕವಿತೆ / ಕಾರಡ್ಕ

ಕಾರಡ್ಕ

ಕೆಲವು ಸ್ಥಳಗಳ ಹೆಸರುಗಳಿಗೆ ಹಸಿಹುಲ್ಲಿನ ವಾಸನೆ ಮತ್ತು
ಈಗ ತಾನೆ ಮಳೆನಿಂತ ಮಣ್ಣಿನ ತೇವಗಳಿರುತ್ತವೆ.
ಅಪರಾಹ್ನದ ಇಳಿಬಿಸಿಲಲ್ಲಿ ಮನೆಮುಂದಿನ ಪಾರದರ್ಶಕ
ತೋಡಿನಲ್ಲಿ ಕಲ್ಲಿನ ಪಲ್ಲೆಗಳು ಏಡಿಗಳಂತೆ ಮಲಗಿರುವುದನ್ನು
ನೆನಪಿಗೆ ತರುತ್ತದೆ.

ಪಶ್ಚಿಮದಲ್ಲಿ ಹೊಳೆವ ಸಮುದ್ರದ ಅಂಚಿನಂತೆ
ಸ್ಪಷ್ಟವಾಗಿರುತ್ತದೆ. ಬಹುದೂರದ ಆಕಾಶದಲ್ಲಿ ಮಾಯುವ
ಘಟ್ಟಗಳ ಶಿಖರಗಳಂತೆ ಅಸ್ಪಷ್ಟವಾಗಿರುತ್ತವೆ ಕೂಡ.
ಅಂಥ ಸ್ಥಳಗಳಿಂದ ಸಂಜೆ ಕಣಿವೆಗಳಲ್ಲಿ ಇರುಳು
ತುಂಬಿ ಬರುವುದನ್ನು ಕಣ್ಣಾರೆ ಕಾಣಬಹುದು.

ಹೆಮ್ಮರಗಳು ಕಡಿದುರುಳಬಹುದು. ಬೆಂಕಿಯಿಟ್ಪರೆ ಬುಡಗಳು
ಅನೇಕ ದಿನಗಳ ತನಕ ಉರಿದು ಬೂದಿಯಾಗಬಹುದು ಅಥವ
ಕಮರಿ ಹೋಗಬಹುದು. ಬೆಂಕಿ ಹಚ್ಚಿದ ಕಾಡು ಇಡೀ ಗ್ರಾಮದ
ಮೇಲೆ ಕವಿಸುವುದು ಕಂದು ಹೊಗೆ. ಬಿಸಿಲು ಬೀಳುವ ದಿನ
ಆ ಬಣ್ಣಕ್ಕೆ ಬೇರೆ ಹೋಲಿಕೆಯಿಲ್ಲ.

ಒಮ್ಮೆ ವಲಸೆ ಹೋದ ಹುಲಿಗಳು ಮರಳಿ ಬರುವುದಿಲ್ಲ. ಆದರೂ
ಹೆಸರುಗಳು ಉಳಿಯುತ್ತವೆ. ಜಡಿ ಮಳೆಯಲ್ಲಿ ಹಳೆ ರೂಪಕಗಳಂತೆ
ಧ್ವನಿಸುತ್ತವೆ. ಚಳಿಗಾಲದ ಮುಗಿಯದ ರಾತ್ರಿಗಳಲ್ಲಿ
ಅಗ್ಗಿಷ್ಟಿಕೆಯ ಮುಂದೆ ಕತೆಗಳಾಗುತ್ತವೆ. ಬೇಸಿಗೆಯಲ್ಲಿ
ಮಾಗಿದ ಗೇರು ಮರಗಳಿಂದ ಕೆಂಪು ಹಳದಿ ಹಣ್ಣುಗಳಾಗಿ
ತೊನೆಯುತ್ತವೆ -ಅಥವ ಹಾಗೆಂದು ನೆನಪು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...