Home / ಕಥೆ / ಜನಪದ / ಒಂಟೆಯ ಮೇಲಿನ ಶಾಹಣೆ

ಒಂಟೆಯ ಮೇಲಿನ ಶಾಹಣೆ

ಚಿತ್ರ: ಪಿಕ್ಸಾಬೇ

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು.

ಚಿಕ್ಕದಾದ ಹಂಡೆಯ ಬಾಯಿಗಿಂತ ದೊಡ್ಡದಾದ ಕೋಣನ ತಲೆಯು ಹಂಡೆಯಲ್ಲಿ ಸಿಕ್ಕುಕೊಂಡಿತು. ಜಗ್ಗಾಡಿತು. ಎಳೆದಾಡಿತು. ಬಗೆ ಹರಿಯಲಿಲ್ಲ. ಮನೆಯವರು; ಓಡಿಬಂದರು ಒಬ್ಬಿಬ್ಬರು ಹಂಡೆ ಹಿಡಿದರು. ಒಬ್ಬಿಬ್ಬರು ಕೋಣಕರುವನ್ನು ಹಿಡಿದೆಳೆದರು. ಏನುಮಾಡಿದರೂ ಕೋಣನ ತಲೆ ಹಂಡೆಯಿಂದ ಹೊರಬರಲಿಲ್ಲ. ಕೊನೆಗೆ ಊರಲ್ಲಿರುವ ಶಾಹಣೆನನ್ನು ಕರೆಯಕಳಿಸಿದರು.

ಬಹಳ ಶಾಹಣೆ ಎಂದು ಆತನು ಆ ಭಾಗದ ಹಳ್ಳಿಗಳಿಗೆಲ್ಲ ಹೆಸರಾಗಿದ್ದನು. ಎಲ್ಲಿಗೆ ಹೋದರೂ ಆತನು ಒಂಟೆಯ ಮೇಲೆ ಕುಳಿತುಕೊಂಡೇ ಹೋಗುತ್ತಿದ್ದನು. ಹೋದಲ್ಲಿ ಅವನು ಯುಕ್ತಿ ಹೇಳುವಾಗ ಸಹ ಒಂಟೆಯ ಮೇಲಿಂದ ಕೆಳಗಿಳಿಯುತ್ತಿದ್ದಿಲ್ಲ. ಒಂಟೆಯ ಮೇಲೆ ಕುಳಿತುಕೊಂಡೇ ಬುದ್ದಿ ಹೇಳುತ್ತಿದ್ದುದರಿಂದ ಅವನನ್ನು ಒಂಟೆಯ ಮೇಲಿನ ಶಾಹಣೆ ಎಂದು ಕರೆಯುತ್ತಿದ್ದರು.

ಆ ಒಂಟೆಯಮೇಲಿನ ಶಾಹಣೆ ಬಂದನು. ಆದರೆ ಆ ರೈತನ ಮನೆಯ ಒಳಗೆ ಬರುವುದು ಹೇಗೆ ? ಆತನಂತೂ ಒಂಟೆಯ ಮೇಲೆ ಕುಳಿತುಕೊಂಡೇ ಬರತಕ್ಕವನು.

ಮನೆಯೊಳಗೆ ಬರುವದಕ್ಕೆ ಯುಕ್ತಿಯನ್ನೂ ಅವನೇ ಹೇಳಿಕೊಟ್ಟನು. ಆ ಪ್ರಕಾರ ತಲೆಬಾಗಿಲನ್ನು ಕಿತ್ತಿಡಬೇಕಾಯಿತು. ಆಗ ಒಳಗೆ ಬಂದು ಇದ್ದ ತೊಡಕನ್ನು ನಿರೀಕ್ಷಿಸಿದನು – “ಇದೇನು ಮಹಾ” ಎಂದನು.

ಕೋಣನ ಕುತ್ತಿಗೆ ಕಡೆಯಲು ಹೇಳಿದನು.
ಹಂಡೆಯನ್ನು ಒಡೆಯಲು ಸಲಹೆಯಿತ್ತನು.

ಅವನು ಹೇಳಿದಂತೆ ಎಲ್ಲವೂ ನಡೆದುಹೋಯಿತು. “ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ” ಎಂದು ನುಡಿದು. ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ!
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...