Home / ಕಥೆ / ಜನಪದ / ಒಂಟೆಯ ಮೇಲಿನ ಶಾಹಣೆ

ಒಂಟೆಯ ಮೇಲಿನ ಶಾಹಣೆ

ಚಿತ್ರ: ಪಿಕ್ಸಾಬೇ

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು.

ಚಿಕ್ಕದಾದ ಹಂಡೆಯ ಬಾಯಿಗಿಂತ ದೊಡ್ಡದಾದ ಕೋಣನ ತಲೆಯು ಹಂಡೆಯಲ್ಲಿ ಸಿಕ್ಕುಕೊಂಡಿತು. ಜಗ್ಗಾಡಿತು. ಎಳೆದಾಡಿತು. ಬಗೆ ಹರಿಯಲಿಲ್ಲ. ಮನೆಯವರು; ಓಡಿಬಂದರು ಒಬ್ಬಿಬ್ಬರು ಹಂಡೆ ಹಿಡಿದರು. ಒಬ್ಬಿಬ್ಬರು ಕೋಣಕರುವನ್ನು ಹಿಡಿದೆಳೆದರು. ಏನುಮಾಡಿದರೂ ಕೋಣನ ತಲೆ ಹಂಡೆಯಿಂದ ಹೊರಬರಲಿಲ್ಲ. ಕೊನೆಗೆ ಊರಲ್ಲಿರುವ ಶಾಹಣೆನನ್ನು ಕರೆಯಕಳಿಸಿದರು.

ಬಹಳ ಶಾಹಣೆ ಎಂದು ಆತನು ಆ ಭಾಗದ ಹಳ್ಳಿಗಳಿಗೆಲ್ಲ ಹೆಸರಾಗಿದ್ದನು. ಎಲ್ಲಿಗೆ ಹೋದರೂ ಆತನು ಒಂಟೆಯ ಮೇಲೆ ಕುಳಿತುಕೊಂಡೇ ಹೋಗುತ್ತಿದ್ದನು. ಹೋದಲ್ಲಿ ಅವನು ಯುಕ್ತಿ ಹೇಳುವಾಗ ಸಹ ಒಂಟೆಯ ಮೇಲಿಂದ ಕೆಳಗಿಳಿಯುತ್ತಿದ್ದಿಲ್ಲ. ಒಂಟೆಯ ಮೇಲೆ ಕುಳಿತುಕೊಂಡೇ ಬುದ್ದಿ ಹೇಳುತ್ತಿದ್ದುದರಿಂದ ಅವನನ್ನು ಒಂಟೆಯ ಮೇಲಿನ ಶಾಹಣೆ ಎಂದು ಕರೆಯುತ್ತಿದ್ದರು.

ಆ ಒಂಟೆಯಮೇಲಿನ ಶಾಹಣೆ ಬಂದನು. ಆದರೆ ಆ ರೈತನ ಮನೆಯ ಒಳಗೆ ಬರುವುದು ಹೇಗೆ ? ಆತನಂತೂ ಒಂಟೆಯ ಮೇಲೆ ಕುಳಿತುಕೊಂಡೇ ಬರತಕ್ಕವನು.

ಮನೆಯೊಳಗೆ ಬರುವದಕ್ಕೆ ಯುಕ್ತಿಯನ್ನೂ ಅವನೇ ಹೇಳಿಕೊಟ್ಟನು. ಆ ಪ್ರಕಾರ ತಲೆಬಾಗಿಲನ್ನು ಕಿತ್ತಿಡಬೇಕಾಯಿತು. ಆಗ ಒಳಗೆ ಬಂದು ಇದ್ದ ತೊಡಕನ್ನು ನಿರೀಕ್ಷಿಸಿದನು – “ಇದೇನು ಮಹಾ” ಎಂದನು.

ಕೋಣನ ಕುತ್ತಿಗೆ ಕಡೆಯಲು ಹೇಳಿದನು.
ಹಂಡೆಯನ್ನು ಒಡೆಯಲು ಸಲಹೆಯಿತ್ತನು.

ಅವನು ಹೇಳಿದಂತೆ ಎಲ್ಲವೂ ನಡೆದುಹೋಯಿತು. “ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ” ಎಂದು ನುಡಿದು. ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ!
*****

Tagged:

Leave a Reply

Your email address will not be published. Required fields are marked *

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...