Home / ಲೇಖನ / ವಿಜ್ಞಾನ / ಉರುಬುವ ಹವ್ಯಾಸ ಬಿಡಿ

ಉರುಬುವ ಹವ್ಯಾಸ ಬಿಡಿ

ಚಿತ್ರ: ಮ್ಯಾಗೀ ಮೋರಿಲ್

ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಜೊಲ್ಲಿನ ತುಂತುರಿನಿಂದೊಡಗೂಡಿ ತೇವವಾಗಿರುತ್ತದೆ. ಹೀಗೆ ಉರುಬಿದಾಗ ಬಾಯಿಯಿಂದ ಹೊರಟ ಗಾಳಿ ಆಹಾರ ಪಾನೀಯಗಳ ಮೇಲೆ ಜೊಲ್ಲಿನ ತುಂತುರು ಬೀಳುತ್ತದೆ. ತಮ್ಮದೇ ಆಹಾರವನ್ನು ತಾವು ಉರುಬಿಕೊಂಡರೆ ಪರವಾಗಿಲ್ಲ. ಆದರೆ ಎಷ್ಟೋ ವೇಳೆ ಇತರರು [ಮಕ್ಕಳಿಗೆ ತಿನ್ನಿಸುವಾಗ, ಕುಡಿಸುವಾಗ] ಉರುಬುವುದೇ ಹೆಚ್ಚು. ಹೊಟೇಲುಗಳಲ್ಲಿ ಹಾಲಿನ ಕೆನೆ ತೆಗೆಯಲು ಉರುಬಿ ತಮ್ಮ ಎಂಜಲನ್ನು ಎಷ್ಟೋ ಮಂದಿಗೆ ಹಂಚುತ್ತಾರೆ. ತಮಗೆ ಅರಿವಿಲ್ಲದೆ ಮನೆಯಲ್ಲೂ ಕೂಡ ಅಡಿಗೆ ಮಾಡುವ ಗೃಹಿಣಿಯರು ಅಥವಾ ಅಡಿಗೆಯವನು ಹೀಗೆ ಇತರರಿಗೆ ತನ್ನ ಎಂಜಲನ್ನು ಹಂಚುವುದುಂಟು.

ಹೀಗೆ ಮಾಡುವಾಗ ಉರುಲಿದವರ ಬಾಯಲ್ಲಿ ಇರಬಹುದಾದ ರೋಗ ಕ್ರಿಮಿಗಳು ಮತ್ತು ದುರ್ಗಂಧ ಇತರರಿಗೂ ಹಂಚಿಕೆಯಾಗುತ್ತದೆ. ಇದರಿಂದ ಹಲವು ರೋಗ ಹರಡಲು ಸಹಕಾರಿಯಾಗುತ್ತದೆ. ಶ್ವಾಸಕೋಶ [ತೊಳ್ಳೆ]ದಲ್ಲಿನ ಕ್ಷಯ ನಾಯಿಕೆಮ್ಮು ದಡಾರ ಸಿತಾಳ ಸಿಡುಬು ಮುಂತಾದ ಹಲವು ಬಗೆಯ ಕಾಯಿಲೆಗಳು ಹರಡುವ ಸಾಧ್ಯತೆಯಿದೆ. ಹೀಗಾಗಿ ಜನತೆಯ ಹಿತಕ್ಕೆ ಧಕ್ಕೆ ತರುವ ಈ ಅಭ್ಯಾಸ ಏಕೆ ಬೇಕು? ಬಿಸಿ ಆರಿಸಿಕೊಳ್ಳಬೇಕಾದಾಗ ರಟ್ಟು, ಮಂದವಾದ ಕಾಗದ ಅಥವಾ ಬೀಸಣಿಗೆಯನ್ನು ಬಳಸಬಹುದು.

ಅಪಾಯ:

ಬಸಿಯಲ್ಲಿ ಚಹ ಕುಡಿಯುವುದು ಅಸಭ್ಯ ಲಕ್ಷಣವೆಂದು ಭಾವಿಸುವ ಜನರೆಷ್ಟೋ ಉಂಟು. ಅಸಭ್ಯ ಲಕ್ಷಣವೆನಿಸಿದರೂ ಹೀಗೆ ಕುಡಿಯುವುದು ಆರೋಗ್ಯ ದೃಷ್ಠಿಯಿಂದ ಬಹಳ ಒಳ್ಳೆಯದು. ಇದರಿಂದ ಬಹಳ ಬಿಸಿಯಾದ ಚಹ ಹೊಟ್ಟೆಗೆ ಹೋಗುವುದಿಲ್ಲ. ಬಹಳ ಬಿಸಿಯಾದ ಚಹ ಉದರ ಕೋಶದ ಗೋಡೆಗಳಿಗೆ ಅಪಾಯವುಂಟುಮಾಡುವುದು. ಆದ್ದರಿಂದ ಚಹ, ಹಾಲು ಏನೇ ಕುಡಿಯುವಾಗ ಬಸಿಯಲ್ಲೇ ಕುಡಿಯಿರಿ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...