Home / ಲೇಖನ / ವಿಜ್ಞಾನ / ಉರುಬುವ ಹವ್ಯಾಸ ಬಿಡಿ

ಉರುಬುವ ಹವ್ಯಾಸ ಬಿಡಿ

ಚಿತ್ರ: ಮ್ಯಾಗೀ ಮೋರಿಲ್

ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಜೊಲ್ಲಿನ ತುಂತುರಿನಿಂದೊಡಗೂಡಿ ತೇವವಾಗಿರುತ್ತದೆ. ಹೀಗೆ ಉರುಬಿದಾಗ ಬಾಯಿಯಿಂದ ಹೊರಟ ಗಾಳಿ ಆಹಾರ ಪಾನೀಯಗಳ ಮೇಲೆ ಜೊಲ್ಲಿನ ತುಂತುರು ಬೀಳುತ್ತದೆ. ತಮ್ಮದೇ ಆಹಾರವನ್ನು ತಾವು ಉರುಬಿಕೊಂಡರೆ ಪರವಾಗಿಲ್ಲ. ಆದರೆ ಎಷ್ಟೋ ವೇಳೆ ಇತರರು [ಮಕ್ಕಳಿಗೆ ತಿನ್ನಿಸುವಾಗ, ಕುಡಿಸುವಾಗ] ಉರುಬುವುದೇ ಹೆಚ್ಚು. ಹೊಟೇಲುಗಳಲ್ಲಿ ಹಾಲಿನ ಕೆನೆ ತೆಗೆಯಲು ಉರುಬಿ ತಮ್ಮ ಎಂಜಲನ್ನು ಎಷ್ಟೋ ಮಂದಿಗೆ ಹಂಚುತ್ತಾರೆ. ತಮಗೆ ಅರಿವಿಲ್ಲದೆ ಮನೆಯಲ್ಲೂ ಕೂಡ ಅಡಿಗೆ ಮಾಡುವ ಗೃಹಿಣಿಯರು ಅಥವಾ ಅಡಿಗೆಯವನು ಹೀಗೆ ಇತರರಿಗೆ ತನ್ನ ಎಂಜಲನ್ನು ಹಂಚುವುದುಂಟು.

ಹೀಗೆ ಮಾಡುವಾಗ ಉರುಲಿದವರ ಬಾಯಲ್ಲಿ ಇರಬಹುದಾದ ರೋಗ ಕ್ರಿಮಿಗಳು ಮತ್ತು ದುರ್ಗಂಧ ಇತರರಿಗೂ ಹಂಚಿಕೆಯಾಗುತ್ತದೆ. ಇದರಿಂದ ಹಲವು ರೋಗ ಹರಡಲು ಸಹಕಾರಿಯಾಗುತ್ತದೆ. ಶ್ವಾಸಕೋಶ [ತೊಳ್ಳೆ]ದಲ್ಲಿನ ಕ್ಷಯ ನಾಯಿಕೆಮ್ಮು ದಡಾರ ಸಿತಾಳ ಸಿಡುಬು ಮುಂತಾದ ಹಲವು ಬಗೆಯ ಕಾಯಿಲೆಗಳು ಹರಡುವ ಸಾಧ್ಯತೆಯಿದೆ. ಹೀಗಾಗಿ ಜನತೆಯ ಹಿತಕ್ಕೆ ಧಕ್ಕೆ ತರುವ ಈ ಅಭ್ಯಾಸ ಏಕೆ ಬೇಕು? ಬಿಸಿ ಆರಿಸಿಕೊಳ್ಳಬೇಕಾದಾಗ ರಟ್ಟು, ಮಂದವಾದ ಕಾಗದ ಅಥವಾ ಬೀಸಣಿಗೆಯನ್ನು ಬಳಸಬಹುದು.

ಅಪಾಯ:

ಬಸಿಯಲ್ಲಿ ಚಹ ಕುಡಿಯುವುದು ಅಸಭ್ಯ ಲಕ್ಷಣವೆಂದು ಭಾವಿಸುವ ಜನರೆಷ್ಟೋ ಉಂಟು. ಅಸಭ್ಯ ಲಕ್ಷಣವೆನಿಸಿದರೂ ಹೀಗೆ ಕುಡಿಯುವುದು ಆರೋಗ್ಯ ದೃಷ್ಠಿಯಿಂದ ಬಹಳ ಒಳ್ಳೆಯದು. ಇದರಿಂದ ಬಹಳ ಬಿಸಿಯಾದ ಚಹ ಹೊಟ್ಟೆಗೆ ಹೋಗುವುದಿಲ್ಲ. ಬಹಳ ಬಿಸಿಯಾದ ಚಹ ಉದರ ಕೋಶದ ಗೋಡೆಗಳಿಗೆ ಅಪಾಯವುಂಟುಮಾಡುವುದು. ಆದ್ದರಿಂದ ಚಹ, ಹಾಲು ಏನೇ ಕುಡಿಯುವಾಗ ಬಸಿಯಲ್ಲೇ ಕುಡಿಯಿರಿ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...