Home / ಲೇಖನ / ಇತರೆ / ಅಣು ಒಪ್ಪಂದದ ಹಿಂದಿನ ಪುರುಷ ಮತ್ತು ಮಹಿಳೆ

ಅಣು ಒಪ್ಪಂದದ ಹಿಂದಿನ ಪುರುಷ ಮತ್ತು ಮಹಿಳೆ

ಸಾರಾ ಆರ್. ರೈಡ್‌ಮಾನ್ ಅವರು ಬರೆದ ‘ಅಣುವಿನ ಹಿಂದಿನ ಪುರುಷರು ಮತ್ತು ಮಹಿಳೆಯರು’ ಎಂಬ ಪುಸ್ತಕವನ್ನು ನಾನು ಕೊಂಡ ಮೇಲೆ ೫೦ ವರ್ಷಗಳು ಕಳೆದಿವೆ. ಇಂದಿಗೂ ಈ ಪುಸ್ತಕವು ನನ್ನ ಕೊಠಡಿಯ ಮೇಜಿನ ಮೇಲೆ ಪ್ರಮುಖ ಸ್ಥಾನದಲ್ಲಿ ಕಂಗೊಳಿಸುತ್ತಿದೆ. (ಲೇಖಕಿ ಆಕೆಯ ಪುಸ್ತಕವನ್ನು ನಾನು ಓದಬೇಕೆಂದು, ಮತ್ತೆ ಮತ್ತೆ ಓದಬೇಕೆಂದು ಇಚ್ಛಿಸಿರಬಹುದು.)

ಅದು ಸುಮಾರು ೧,೦೦೦ ಪ್ಯಾರಾಗಳನ್ನು ಹೊಂದಿದೆ. ಎಲ್ಲ ಪ್ಯಾರಾಗಳೂ ಭವ್ಯ ಪ್ಯಾರಾಗಳು (ಪ್ಯಾರ್ ಕಾ ಪ್ಯಾರಾ). ಮೊದಲನೇ ಪ್ಯಾರಾವು ೧೯೫೬ ಅಕ್ಟೋಬರ್ ೧೭ ರಂದು ಆದ ಪ್ರಪಂಚದ ಮೊಟ್ಟ ಮೊದಲನೇ ಪೂರ್ಣ ಪ್ರಮಾಣದ ಅಣುಶಕ್ತಿ ಕೇಂದ್ರದ ಉದ್ಘಾಟನೆಯ ಬಗ್ಗೆ ತಿಳಿಸುತ್ತದೆ.

ಆ ಪುಸ್ತಕವು ಭಾರತದಲ್ಲಿ ಔದ್ಯೋಗಿಕ ವಿಕಾಸದಲ್ಲಿ ಅಣುಶಕ್ತಿ ಸ್ಥಾವರಗಳ ಪಾತ್ರವನ್ನು ನಮಗೆ ತಿಳಿಸುತ್ತದೆ.

ಈ ಸಂದರ್ಭದಲ್ಲಿ ನಾವು, ನಮ್ಮರಾಷ್ಪ್ರವು ನಾಗರಿಕ ಪ್ರಯೋಜನಕ್ಕಾಗಿ ಅಣುಶಕ್ತಿ ಒಪ್ಪಂದಕ್ಕೆ ರುಜು ಹಾಕಿ ಖಾತರಿಪಡಿಸುವುದರಲ್ಲಿ ಶ್ರಮಿಸಿದ ಪುರುಷ ಮತ್ತು ಮಹಿಳೆಗೆ ಕೃತಜ್ಞರಾಗಿರಬೇಕು. ಆ ಇಬ್ಬರು ಮಹಾವ್ಯಕ್ತಿಗಳು ಯಾರು ? ಅಣು ಒಪ್ಪಂದದ ಹಿಂದಿನ ಪುರುಷ ನಮ್ಮ ಪ್ರಿಯ ಡಾ|| ಮನಮೋಹನ್ ಸಿಂಗ್, ಪ್ರಧಾನ ಮಂತ್ರಿಗಳು ಮತ್ತು ಅಣು ಒಪ್ಪಂದದ ಹಿಂದಿನ ಮಹಿಳೆ ನಮ್ಮ ಜನಪ್ರಿಯ ಶ್ರೀಮತಿ ಸೋನಿಯಾ ಗಾಂಧಿ, ಯುಪಿ‌ಎದ ಮಾನ್ಯ ಅಧ್ಯಕ್ಷೆ.

ಈ ಅಣುಶಕ್ತಿ ಒಪ್ಪಂದದ ಫಲವನ್ನು ಉಪಯೋಗಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮುಖ್ಯಮಂತ್ರಿ ನಮ್ಮ ಪ್ರೀತಿಯ ಡಾ || ಬಿ. ಎಸ್. ಯಡಿಯೂರಪ್ಪ ಅವರು ಈಗಾಗಲೇ ಕೇಂದ್ರಕ್ಕೆ ಬರೆದು ಪ್ರಸ್ತಾಪಿಸಲ್ಪಟ್ಟ ೨೧೦ ಎಂ. ಡಬ್ಲೂ. ಘಟಕಗಳ ಬದಲಾಗಿ ಎರಡು ೭೦೦ ಎಂ. ಡಬ್ಲೂ. ಅಣುಶಕ್ತಿ ಘಟಕಗಳನ್ನು ವಿಸ್ತರಣಕ್ಕಾಗಿ ಕೈಗಾದಲ್ಲಿ ಸ್ಥಾಪಿಸಲು ಕೇಳಿದ್ದಾರೆ. ಅವರು ರಾಜ್ಯದಲ್ಲಿ ದೊಡ್ಡಗಾತ್ರದ ಅಣು ರಿಯಾಕ್ಟರ್‌ಗಳನ್ನೊಳಗೊಂಡ ಅಣುಶಕ್ತಿ ಪಾರ್ಕನ್ನು ಸ್ಥಾಪಿಸಲೂ ಒತ್ತಾಯಿಸಹುದು.

ನಮ್ಮ ಮುಖ್ಯಮಂತ್ರಿಗಳ ವಿರೋಧಿಗಳು ನಮ್ಮ ಮುಖ್ಯಮಂತ್ರಿ ಅವರು ಬಹಳ ‘ಪವರ್ ಹಂಗ್ರಿ’ ಎಂದು ಹೇಳುತ್ತಾರೆ. ಆದರೆ ನಮ್ಮ ಜನಪ್ರಿಯ ಮುಖ್ಯಮಂತ್ರಿಯವರಿಗೆ ಪವರ್ ಅಂದರೆ ಥರ್ಮಲ್ ಪವರ್ (ತಾಪಶಕ್ತಿ), ನ್ಯೂಕ್ಲಿಯರ್ ಪವರ್ (ಅಣುಶಕ್ತಿ), ಸೋಲಾರ್ ಪವರ್ (ಸೌರಶಕ್ತಿ), ಹೈಡಲ್ ಪವರ್ (ಜಲವಿದ್ಯುಚ್ಛಕ್ತಿ) ಮತ್ತು ವಿಂಡ್‌ಪವರ್ (ವಾಯುಶಕ್ತಿ). ಅವರು ಅನೇಕ ಶಕ್ತಿಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ರಾಜ್ಯವು ಕ್ರಿ.ಶ. ೨೦೧೪ ರ ಹೊತ್ತಿಗೆ ೧೪,೦೦೦ ಎಂ.ಡಬ್ಲೂ. ಶಕ್ತಿಯನ್ನು ಉತ್ಪಾದಿಸಿ ಸಾಕಷ್ಟು ಶಕ್ತಿಯನ್ನು ಪಡೆದುಕೊಳ್ಳುವುದೆಂದು ನನಗೆ ನಂಬಿಕೆ ಇದೆ.

ನನಗೆ ಅಣುವು ಯಾವಾಗಲೂ ಒಂದು ಗಹನ ಸೌಂದರ್ಯವಾಗಿತ್ತು. ಅಣುವಿನ ಕೇಂದ್ರ ನನಗೆ ಸಿಲುಕದೆಂದು ನನಗೆ ಗೊತ್ತಿತ್ತು. ಆದರೂ ಅದನ್ನು ತಲುಪುವುದಕ್ಕಾಗಿ ಸರ್. ಜಾರ್ಜ್. ಥಾಮಸನ್ ಮತ್ತು ಅನೇಕ ಪುಸ್ತಕಗಳನ್ನು ಓದಿ ಹಲವು ಪ್ರಯತ್ನಗಳನ್ನು ಮಾಡಿದೆ. ಆದರೂ ಅಣುವಿನ ಕೇಂದ್ರದತ್ತ ನನ್ನ ದೂರ ಪ್ರಯಾಣದಲ್ಲಿ ಮೊದಲ ಮೈಲಿಯಲ್ಲೇ ನಾನೇಕೆ ನಿಂತು ಹೋಗಿದ್ದೇನೋ ನನಗೆ ನಿಜವಾಗಿಯೂ ತಿಳಿಯದು.
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...