Home / ಕವನ / ಕವಿತೆ / ಸ್ಥಿತ್ಯಂತರ

ಸ್ಥಿತ್ಯಂತರ

ಸದಾ ಕಿಚಿಪಿಚಿಗುಡುವ
ಗೊಂದಲದ ಗುಬ್ಬಿ ಗೂಡು
ಕೇಳುವುದಿಲ್ಲ ಒಂದಾದರೂ
ಸುಮಧುರ ಹಾಡು

ಬಿಡುವಿಲ್ಲದೇ ತುಯ್ಯುವ ಒಂದು ವೀಣೆ
ನಿರಂತರ ಕಾಡುವುದೇಕೋ ಕಾಣೆ!
ಮಧ್ಯಂತರದಲಿ ನಿಂತ
ನಾನು-ನನ್ನಂತವರು
ದವಡೆಯ ಕೊನೆಯ ಹಲ್ಲುಗಳನ್ನು
ಅರ್ಧವಷ್ಟೇ ಕಂಡವರು.

ಹಳತು ಸರಿಯೋ?
ಹೊಸದು ಸರಿಯೋ?
ಸದಾ ಮಂಥನದ ಚಿಂತನ
ಹಳವಂಡಗಳ ಸೃಷ್ಟಿಸಿ
ನವ ಸೃಷ್ಟಿಕರ್ತರ ಜನನ.
ಎಲ್ಲ ಕಾಲಕ್ಕೂ ಮಿಡಿಯುತ್ತಿದ್ದ ತಾಯಿಬೇರು
ಇತ್ತೀಚೆಗೆ ಒಮ್ಮೊಮ್ಮೆ ಮಾತ್ರ
ಎಲ್ಲೋ ಮಿಸುಕು
ಮುಂದಿನವರಿಗೆ ಅದೂ ಇಲ್ಲವೇನೋ?
ಸಧ್ಯ ನಮ್ಮಂತೆ
ದ್ವಂದ್ವದಲಿ ಸುಯ್ಯಬೇಕಿಲ್ಲ!

ಅದೂ ಬೇಕು, ಇದೂ ಬೇಕು
ಎಲ್ಲವೂ ಬೇಕು ಎನ್ನುವಂತಿಲ್ಲ
ಇಲ್ಲಿ ಆಯ್ಕೆಗಿರುವುದೊಂದೇ ಬದುಕು
ಎದೆಗೆ ಗುರಿಯಿಟ್ಟಿದೆ ಬಂದೂಕು!

ವರಗಳು ಶಾಪವಾಗಿ,
ಶಾಪಗಳೇ ವರವಾಗಿಬಿಡುವ
ಈ ಮನ್ವಂತರದ ಕಾಲದಲಿ
ಅತ್ತಬಾಗದೇ, ಇತ್ತ ಬೀಗದೇ
ಸ್ಥಿರನಿಂತ ಸೂರ್ಯನಂತೆ
ಗೆದ್ದೂ ಬೀಗದೆ, ಸೋತೂ ಬಾಗದೆ
ಎಲ್ಲ ಚಡಪಡಿಕೆ ಎದೆಯೊಳಗೆ ಮುಚ್ಚಿಟ್ಟು
ಸದಾ ಧಗಧಗ ಉರಿವ
ಕೆಂಪುಸೂರ್ಯನ ಬಗಲಲ್ಲೇ ಬಚ್ಚಿಟ್ಟು
ಮೇಲೆ ಆತ್ಮವಿಶ್ವಾಸದ ನಗೆಯ
ಮುಸುಕು ಹೊದ್ದರಾಯ್ತು
ಎಲ್ಲ ತನ್ನಂತೆ ತಾನೇ ಸರಿಹೋದೀತು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...