Home / ಕವನ / ಕವಿತೆ / ಒಂದು ಸ್ವಪ್ನ

ಒಂದು ಸ್ವಪ್ನ

ಸ್ವಪ್ನರಾಜ್ಯದ ಭಾವದೋಜೆಯ
ನಡುವೆ ನಡೆದೆನು ತೆಪ್ಪಗೆ,
ಮನೋಭೂಮಿಯನುತ್ತು ಅಗಿಯಿತು
ತೇಜಪೂರಿತ ಘಟನೆಯು!
ಮೆತ್ತಗಾಸಿದ ತಲ್ಪತಳವೇ
ನನ್ನ ಯಾತ್ರೆಯ ಭೂಮಿಯು!!

ಮೇಲೆ ಭಾನುವು ಬಿಳಿಯ ಮುಗಿಲು
ಕೆಳಗೆ ಕೊರಕಲು ದಾರಿಯು;
ಹಾದು ನಡೆದೆನು ಏಳುಬೀಳುತ
ಏರಿದೆನು ಗಿರಿ ಮೇಲಕೆ!
ಬೆಟ್ಟತಪ್ಪಲು ಜಾರುಕಲ್ಗಳು
ಬೀಳುವೆನೊ ಎಂಬೆದರಿಕೆ!!

ಅಮರಲೋಕದ ಹೂವುತೋಟದ
ನೆನಪು ಸುಳಿಯಿತು ಮನದಲಿ
ಮಂದಮಾರುತ ಎತ್ತಿತಂದಾ
ಅಮರ ಗಾನವ ಕೇಳಿದೆ,
ಕೇಳಪೋದೆನು-ಶೂನ್ಯಲೋಕವು
ಗಾಳಿ, ಗಿರಿದುದಿ, ಮರಗಳೆ!

ಐಂದ್ರಜಾಲಿಕ ದೃಶ್ಯದಂತೆಯೆ
ಬೆಟ್ಟಗವಿಯಿಂ ಪಕ್ಕನೆ
ಇಂಪುಗಾನದ ದನಿಯ ಅಲೆಯೊಳು
ತನ್ನ ರೂಪನು ಸೇರಿಸಿ
ಬಂದಳೊರ್ವಳು ಇಂದುವದನೆಯು
ಇಂದು ರೂಪವ ಹಳಿಯಿಸಿ.

ಸುಳಿದಳೀಚೆಗೆ ಬೆಟ್ಟದುದಿಯಲಿ
ನಿಂತ ನಾನು ನನ್ನನು!
ಮರೆತು ನೋಡಿದೆ ವಿಶ್ವನಿರ್ಮಿತ
ಮಾಯೆ ರೂಪವ ನೆನೆದೆನೊ;
ರೂಪ ನೋಡುತ ನೀಲ ಬಾನಿನ
ಸ್ವಚ್ಚ ಶೀಲವ ಹಳಿದೆನೊ!

ಹೆರಳ ಕುರುಳು ಮುಡಿಯ ಮುಗುಳು
ಕಾಂತಿ ಬೀರುವ ಕಂಗಳು
ಬಾಲೆ ಸದ್ಗುಣೆ ಹಂಸಯಾನೆಯು
ಜಾಣೆ ನೋಟಕೆ-ಕೆನ್ನೆಯು
ಒಂಟಿಸರವನು ರತ್ನಮಾಲೆಯ
ಕಟ್ಟಿ ನೂಪುರ ರನ್ನೆಯು!

ನೋಡಿ ಹಿಗ್ಗಿದೆ ವನವು ಗಾಳಿಯು
ಹಿಗ್ಗಿತೆನ್ನೊಡೆ ಬೀಸುತ
ದೂರ ಸರಿದುವು ಸುತ್ತು ಸೇರಿದ
ಹಕ್ಕಿಮಿಗಗಳು ಭ್ರಮರವು;
ಒಬ್ಬನಾದೆನು ಮುಂದೆ ಸರಿದೆನು
ಪೋದ ಧೈರ್ಯವ ಕರೆದೆನು!

ಹೂವು ಎಲೆಗಳು ಎಲ್ಲಿ ಅಣಿಕಿಪು-
ವೆಂದು ನಾಚುಗೆಪಟ್ಟನೊ!
ಗಿರಿಯ ಮೇಲ್ಗಡೆ ಚೆನ್ನಕಾಣುವ
ಮುಗಿಲು ನಗುವುದೊ ಎಂದು ನಾ
ಭಾವಿಸುತ್ತಲಿ, ‘ಯಾರ ನೋಡುವಿ’
ಎಂದು ಕೇಳಿದೆನವಳನು.

‘ಯಾರ ಇಲ್ಲವು ಹಣ್ಣು ಹೂಗಳ-
ನಾಯ್ದು ಪೋಗಲು ಬಂದೆನೊ!
ಕಂಡು ಸೋತೆನು ಮನವು ಬಿಮ್ಮನೆ
ಎನ್ನ ನಿಲಿಸಿತು-ಇಲ್ಲಿಯೆ’
ಎಂದು ಹೇಳಲು, ‘ರಮಣಿ ಹೆದರದಿ
ರೆ’ಂದು ಪಕ್ಕದಲಿರಿತೆನೊ!

ಸರಸವಾಟದಲೊತ್ತು ಕಳೆಯುತ
ಮಾತುಮಾತಲಿ ಮುಳುಗುತ;
ನೋಟ ಬಿಂಬಾಧರವ ಹೊಕ್ಕಿತು,
ಕಣ್ಣು ಕಣ್ಣನು ನುಂಗಿತು!
ದೃಷ್ಠಿಹೊರಳಿತು-ತನುವು ಕೊಂಕಿತು;
ಕೈಯು ಎದೆಯಲಿ ನುಸುಳಿತು!!

ಮುದ್ದು ಮಾತಿನ ಮುದ್ರೆ ಕೆನ್ನೆಲಿ,
ಅಭಯ ಸೂಚನೆ ಬಾಯಲಿ-
ಜಾಣೆ ನಾಚುತಲಂಜಿ ಅಪ್ಪಿತು,
ಬಿಗಿದ ಅಪ್ಪಗೆ ಸುಖದಲಿ
ಇರಲು-ಪಾಪೀ ನಿದ್ದೆವಂಚನೆ
ಮಾಡಿ ಕೆಡಿಸಿತು ಸುಖವನು!!!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...