Home / ಕವನ / ಕವಿತೆ / ಜೀವನ ಸಮಸ್ಯೆ

ಜೀವನ ಸಮಸ್ಯೆ

ಮನದ ಕಾಂಕ್ಷೆ ಒಲವಿನೆಣಿಕೆ ಆಳ ಅಳೆದು
ನೋಡಲಾರೆ,
ವಿಶ್ವವ್ಯಾಪಿ ಎಮ್ಮ ಮುದವು ನಿಲ್ವುದೆಲ್ಲಿ
ಎಣಿಸಲಾರೆ!
ಕತ್ತಲಂತೆ ಸುತ್ತಲೆಲ್ಲ ಮನಕೆ ಭಾರ
ದೇಹಸರ್ವ
ತಿಂಬೆದೆಲ್ಲ ಅರುಚಿ ಕೇಳು, ಯಾರ ಇದುರು
ಪೇಳ್ವುದಲ್ಲ!!
ಮಂಜುಗಟ್ಟಿ ನೇತೃದ್ವಯವು ಬೆಂದಮನವ
ಸೂಚಿಸುವುದು,
ಶ್ರಮದ ಸಾರ ಸಾಮ್ಯಗಳನು ಮೂಲೆಗಟ್ಟಿ
ತಿಳಿಯದಿಹರು!
ಕಾಣೆ ನಿಂತ ಎಣೀಸಿದಾಶೆ, ಕಾಣೆ ನಾವೆ
ವಿದಿತಕಾಂಕ್ಷೆ
ನಾವೆ ನಮಗೆ ಮೇಲೆಂದೆನಿಸಿ ಬೇಳುತಿಹೆವು
ದಾಸ್ಯ ಬಲೆಗೆ!
ಅಹೋ ನೊಂದ ಲೋಕಯೆಲ್ಲ ಎಂತೊ ಎಲ್ಲೊ
ಸಾಗುತಿಹುದು
ಆಹಾ ನಾನು ಹನಿಯ ತೆರದಿ ವಿಧಿಯ ತೆರೆಯ-
ಲುಕ್ಕುತಿಹೆನು.
ಬೆಳೆದು ಬಂದೆ ಜನವನರಿತೆ ಕೆಂಪು ಕಪ್ಪಿ
ನಷ್ಟು ಭೇದ
ಒಂದರಂತೆ ಒಂದು ಇಲ್ಲ, ವೃಕದ ಬಳಿಯ
ಕುರಿಯ ತೆರವೆ!
ಬದುಕಿನೆಣಿಕೆಯಿಂದ ಕ್ರಿಮಿಯು ಸಾಗುತಿಹುದು
ದೇಹಪೊತ್ತು
ಜ್ಞಾನಜ್ಯೋತಿ ಹೊತ್ತುತ್ತಿರುವ ನರನ ರೀತಿ
ಭೀತಿ ಎಂತು?
ಕಂಡುದೆಲ್ಲ ಕಲ್ಲಿನಷ್ಟು ಗಟ್ಟಿಯೆಂದು
ತೋರ್ಪುದಹುದು,
ಎನ್ನ ಇರದ ತೆರವು ಮಾತ್ರ ಹಿಮದ ತೆರದಿ
ಗೋಚರಿಪುದು;
ಭಾವನೆಗಳಾ ಕೂಪದಲ್ಲಿ ಹೊರಳಿ ಹೊರಳೀ
ಎದ್ದುನೋಡೆ,
ನೊಂದ ಮನ, ನಿರಾಶೆ ಜಾಲಮಯವ ನೊಂದೆ
ತೋರುತಿಹುದು.
ಹಣದ ಬರವು ತಣಿಸದೆಮ್ಮ; ಸುಖದ ಸೋಗು
ನಶಿಸದೆಮ್ಮ;
ಆದರೂ ಆನಂದಕ್ಕೊಂದು ದಿವ್ಯ ರತ್ನ
ತೃಪ್ತಿಬೇಕು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...