Home / ಕವನ / ಕವಿತೆ / ಕವಿಯ ಮನಸ್ಸು

ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...