Home / ಕವನ / ಕವಿತೆ / ಕವಿಯ ಮನಸ್ಸು

ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...