Home / ಕವನ / ಕವಿತೆ / ಕವಿಯ ಮನಸ್ಸು

ಕವಿಯ ಮನಸ್ಸು

ಏಳುಲೋಕದಲೇಳು ಕಡಲಲಿ
ಏಳು ಪರ್ವತ ಬಾನಲಿ
ಏಳು ಸಾವಿರ ದೇಶದಿ,
ಸುತ್ತಿ ಹಾರ್ವುದು ನೋಡಿ ನೆಡೆವುದು
ನಿಮಿಷ ನಿಮಿಷಕೆ ಕ್ಷಣದಲಿ
ಕವಿಯ ಮನಸ್ಸದೊ ಹಾರ್ವುದು!

ಚಂದ್ರಲೋಕದ ಸುತ್ತು ತಿರುಗುತ
ಸೂರ್ಯಕಾಂತಿಯ ನೋಡಿತು!
ವಿಶ್ವಗೋಳವ ತಿರುಗಿಸಿ-
ಪಾತಾಳದಾಳಕೆ ಕೊರೆದು ನುಗ್ಗುತ
ಯಾವ ಜ್ಞಾನಿಯು ಹೇಳದ,
ವಿಶ್ವರೂಪವ ಹಾಡಿತು!

ಮೊರೆವ ತುಂಬಿಯ ತೆರದಲಿಂತಿದೊ
ಇಲ್ಲಿ ಅಲ್ಲಿ ಹಾರುತ
ಕವಿಯ ಮನಸನು ಬಾಯಲಿ,
ಗಗನದಾಡುವ ಲೋಕ ಗುಟ್ಟನು
ಕಂಡು ಹಿಡಿಯುತ ಹಾರುತ
ದೇವ ಸತ್ಯವ ಹೇಳುತ.

ಗಂಗೆ ಬಂದಾ, ಸ್ವರ್ಗ ಸೇರಿದ
ಕಾವೇರಿ ಕುಂಡಿಕೆ ಮಹಿಮೆಯ
ಯಮುನೆ ತೀರ್ಥ ಶಕ್ತಿಯ
ದೇವ ರಾಕ್ಷಸ ಸಮರ ಸರ್ವವು
ರಾಮ ರಾವಣ ರಾಜ್ಯದ
ಕೂಸು ಕೃಷ್ಣನ ಬೀರ್ಯವ

ಯಾವ ಜ್ಞಾನಿಯು ಕಂಡು ಕೇಳಿದೊ-
ಕವಿಯ ಮನಸ್ಸೊಂದಲ್ಲದೆ
ಅವನ ಲಿಖಿತವಲ್ಲದೆ,
ಕಾಳಿದಾಸನ ಕ್ಷೀರ ಸಾಮ್ಯದ
ಉಕ್ತಿ ಮರೆಯಲಿ ಎಂತು ನಾ?
ಸ್ತುತಿಸದಿರ್ಪುದು ಎಂತುವೊ?

ಸೂಜಿ ಮೊದಲಿಂ ವಿಶ್ವದಂತ್ಯಕು
ವಿಷಯ ಸರ್ವಽ ಹಾಡಿದರ್‍,
ಹಾಡದಿರುವುದು ಯಾವುದೊ?
ಕವಿಯ ಮನಸದು ವಿದ್ಯುತ್ ಶಕ್ತಿಯ
ಗತಿಯ ಮೀರಿದೆ-ದಾಟಿದೆ
ವಿಶ್ವಭೇಧಿಸಿ ಸಾಗಿದೆ.

ಕವಿಯೊ ತನ್ನ ಸೂಕ್ಷ್ಮವಾದದಿ
ಕ್ರಾಂತಿ ಸಾರಿದ ರಾಜ್ಯಕೆ
ಶಾಂತಿ ನೀಡಿದ ದೇಶಕೆ;
ಜಗದ ಎಲ್ಲಾ ಅಲ್ಲಸಲ್ಲದ
ವ್ಯಾಜ್ಯ ಸಮರಕೆ ಮೂಲವೊ
ಕವಿಯ ನಿರ್ಭಯ ಮನಸ್ಸದೊ!

ಮಧುವ ಜಿಹ್ವೆಯಲಿಟ್ಟ ತೆರದಲಿ
ದೇವ ಕವಿಗಳ ಹಾಡದು,
ಗಾನರಸದಲಿ ತೇಲಿಸಿ,
ಜ್ಞಾನ ಶಕ್ತಿಯ ವಿಶ್ವ ಗುಟ್ಟನು
ಎರಡು ಕೈಯಿಂ ತಟ್ಟುತ
ಪೇಳ್ವ ಹಾಡದೊ, ಆಹಹಾ!

ಮಂತ್ರ ಋಷಿಗಳ ಪ್ಲೇಟೊ ಬರೆಹವು
ಮಿಲ್ಟನ್ ಸಾರಿದ ಮಾಕತೆ,
ವೇದ ಮಂತ್ರವು ಕವಿಮತ;
ವಾಲ್ಮೀಕಿ ಹೋಮರ್‍ ಗಯಟೆ ವ್ಯಾಸನು
ಷೇಕ್ಸ್‌ಪೀಯರ್‍ ಡಾಂಟೆಯೊ
ದೇವ ಕವಿಗಳೊ ಲೋಕದಿ.

ಸೂರೆಮಾಡಿತು ಲೋಕ ಮನಸನು
ಕವಿಯ ಮಂತ್ರದ ಕ್ರಾಂತಿಯೊ
ರಂಗು ರಂಗದೊ ಚಿತ್ತಾರ-
ಕ್ಷೀರ ಶರ್ಕರಾ ಬೆರೆಸಿ ಸವಿಯುವ
ತೆರದೆ ವಾಣಿಯು-ಅಮೃತ
ಬಂದ ಮನಸ್ಸು-ಸರಸ್ವತಿ!

ಅನ್ನ ನೀರೂ ಬಿಟ್ಟು ಬಾಳ್ವೆನೊ
ಹಾಡಾನಂದವ ಪಡೆಯುವ
ಭಾಗ್ಯ ಎಂತು ನಾನ ಬಿಡುವೆನೊ?
ಬಾಳಲೀ ಕವಿ ಮಾಽತ್ಮರೆಲ್ಲ
ಚಿರಾಯುವಿಂದಲಿ ಲೋಕದಿ!
ಅಗ್ನಿಯಂತೆಯೆ ಸತ್ಯದಿ!!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...