Home / ಕವನ / ಕವಿತೆ / ವಿರಹಿಣಿಯ ಸಂತಾಪ

ವಿರಹಿಣಿಯ ಸಂತಾಪ

ಚಂದ್ರಮುಖಿಯು ನೀನು ಎಂದು ಬೆಡಗುಗಾರ್ತಿ ಚೆಲುವೆಯೆಂದು
ಸಂದ ಜೀವದಾತ್ಮ ಗೊಂಬೆಯೆಂದು ಪೇಽಳಿ-
ಇಂದು ತರವೆ ಇನಿಯ ಇನಿತು ಕೊರಗಿಸುವುದೊ!

ನೀರೆ ನೀನೆ ಶೂರೆ ಎಂದು ಎನ್ನ ಮೋಹ ಕಲಶವೆಂದು
ಸಾರೆ ಸರಸಿ ತೀರದಲ್ಲಿ ಚೆನ್ನು ಮುತ್ತು-
ಮೀರಿದೊಂದಾನಂದದಿತ್ತು-ಎಲ್ಲಿ ಪೋಽದೆ?

ಊರದೇವರಬ್ಬದಲ್ಲಿ ಬೆಳ್ದಿಂಗಳಾ ಆಟದಲ್ಲಿ
ಸೇರಿದವರು ಈ ದಂಪತಿಗಳಾರು-ಎಂದು,
ಸಾರಿನೋಡೆ ನಾಚಿ ನಡೆದುದನ್ನು ನೆನೆಯೆಯಾ?

ಅಂದು ಪತ್ರದಲ್ಲಿ ನೀನು ಬಣ್ಣನೆಗಳ ಶಬ್ದ ಜಾಲ-
ದಿಂದ ಕರೆದು ಬರುವ ಸುಖದ ಕನಸ ಕಂಡು
ನೊಂದ ನನ್ನ ವಂಚಿಸುವುದು-ನಿನಗೆ ತರಽವೆ?

ಬಡವರೊಲಿದ ನಲ್ಮೆ ಜೀವ ನೈಜ ಸುಖದ ರೂಪು ಅಲ್ಲ-?
ಬಡಿದು ಬಾಳ ಭಾಗ್ಯವನ್ನು ದ್ರೋಹದಿಂದ-
ಪಡೆವ ಅಲ್ಪ ಹುಸಿಯ ಸುಖದ ಕೆಚ್ಚು ಏಽಕೆ?

ಮೂಡುವೆಟ್ಟ ಹತ್ತುವಾಗ ಸೋಗೆ ಕೇಕೆ ಹಾಕುವಾಗ
ಕಾಡಸೊಬಗು ನೋಡಿ ದಣಿದು ಸೇರಿದಾಗ
ಕೂಡಿ ಬಿಡಿಸಿ ಲೋಕ ಸುಖವ ಪೇಳಿದೆಽಲ್ಲಿ?

ಮೊಸರು ಕಡೆದು ಬೆಣ್ಣೆ ತೂಗೆ, ಕಂದ ಜೋ ಜೊ ಲಾಲಿ ಹಾಡೆ
ಹಸಲೆ ಹುಲ್ಲ ಕುಯ್ಯುವಾಗ್ಗೆ ಹಾಡಿದೇನೊ?-
ಹೊಸತು ಜೋಡಿ ಜೀವ ಸುಖದ ಮರೆತೆಯೇನೊ?

ಕೊಲ್ಲಿಗದ್ದೆ ಅರುವಿಗಾಗಿ, ಹೊನಲು ಹರಿವ ಬಯಲಿಗಾಗಿ
ಬಳ್ಳಿ ಮನೆಯ ಕಟ್ಟಿ ನಲಿವ-ಕಾಡು ಸುಽತ್ತಿ
ಮಲ್ಲಳಿಗಳ ಹಾಡ ಕೇಳೆ ನಡೆವ ಬಾಽರೊ!

ಸೂಜಿದಾರ ಹೊತ್ತು ಹೊತ್ತು ಹೊರುವ ಭಾರ ಅದೇ ಆಯ್ತು!
ಜಾಜಿ ಕೋದು ಯಾರ ಕೊರಳಲಿರಿಸಲೆಂದು
ಸೋಜಿಗದಲಿ ನೆನೆದು ನೆನೆದು-ಸೊರಗಿದೆ ನಾ!

ಬಾವಿ ನೀರ ಸೇದುವಾಗ ಎಸರ ಬೇಯ್ಸಿ ತೆಗೆಯುವಾಗ
ಕವಿದ ಮಂಕ ಕಣ್ಣಿನಿಂದ ಒರಸುವಾಗಽ
ಜೀವಿಗಳ ಈ ಹುಸಿಯ ಬಾಳ ನೆನೆವೆ ನಾಽನೊ!

ನಗುತಲಿರು ನೀ, ನಗುವಿನಲ್ಲಿ ಬಾಳ ಸತ್ಯ ಮೂಡಿ ಬರಲಿ-
ಒಗುವ ಸತ್ಯ ನಲುಮೆಯೆಲ್ಲ-ಒಲುಮೆಯಲ್ಲಿ,
ಸೊಗವನೀಕ್ಷಿಸುತಲೆ ಬರಲಿ-ಆಹಾ ಕಾಽಯೋ!

ಸೂರ್ಯ ಕಾಂತಿ ಬೀಳ್ವ ಮುನ್ನ, ಚಂದ್ರ ಬೆಳಕು ತೋರ್ವ ಮುನ್ನ,
ಕಾರ್ಯಲೋಕ ಶಾಂತಿ ತಲ್ಪ ಸೇರ್ವ ಮುಽನ್ನ,
ಭಾರ್ಯೆ ದುಃಖವಳಿಸೆ, ಪ್ರಿಯಾ-ಬಂದು ಸೇಽರೊ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...