Home / ಕವನ / ಕವಿತೆ / ಸೂರ್ಯಾಸ್ತಮಾನ ಸಮಯ

ಸೂರ್ಯಾಸ್ತಮಾನ ಸಮಯ

ಪಡುವಣ ದಿಗಂತದಲಿ ಅಗ್ನಿದೇವನ ಒಂದು
ಕಾಲ್ಚೆಂಡು ಮೇಲ್ಹಾರಿ ಕೆಳಬೀಳ್ವುದೊ!
ಬ್ರಹ್ಮಗಿರಿ ಎಂದೆಂಬ ಬೆಟ್ಟದಾ ಅರುಗಾಗಿ
ದಿನಕರನು ಇಣಿಕಿಣಿಕಿ ಮರೆಸೇರ್ವನೊ!

ಎಲ್ಲಿಂದ ಯಾವೆಡೆಗೆ?  ಯಾವೂರು ಪೋಗ್ವನೊ
ಅಗ್ನಿಯಾ ಚಂಡು ಈ ಕೆಂಬಣ್ಣದೀ;
ಪಡುವಣದ ಪ್ರಾಂತದಲಿ ನೀರು ನೆಲದಲಿ ಎಲ್ಲ
ರಂಗು ಕುಂಕುಮ ಚೆಲ್ಲಿ-ಮುನ್ನೋಡ್ವನು!

ಜೀವ ರಾಶಿಗಳೆಲ್ಲ ಗೂಡು ಸೇರುವ ಪೊಳ್ತು
ಏಳು ವರ್ಣದ ಬಿಲ್ಲು ನಡುಗೋಲಿಯೊ!
ಹಾರಿ ಬಿದ್ದಿತು ಅಲ್ಲಿ, ಪಾಕಡಾಚೆಲಿ ನೋಡು,
ದೇವ ನಾವೆಯ ಒಳಗೆ ತೇಲಿ ಪೋಪಂ!

ತುಳುನಾಡ ಸಂಪಾಜೆ ಘಾಟಿ ದಾಟುತ ಹಾರ್‍ವ
ಪಕ್ಷಿಗಳೊ ಕೂಹೂಹು ಕೂಗಿ ಎಲ್ಲ;
ತಪ್ಪಲಿನ ಬಯಲಿನಲಿ ದುಡಿದು ಹಾಡುತ ಪೋಪರ್‍
ಕಿನಕಾಪು ನೀರಿ ಬೀಸಿ ಹೆಂಗಳೆಲ್ಲ?

ದನವು ಕರಗಳು ಎಲ್ಲ ಮೇಕೇರಿ ಬಯಲಿನಲಿ
ಕರೆ ಕರೆದು ಸೇರಿದವು ಕೊಟ್ಟೆಯನು;
ಕೋಟೆ ಗಂಟೆಯೊ ಆರು ಬಡಿಯೆ ಸೇರಿದರೆಲ್ಲ
ಆಡುತಿಹ ಮಕ್ಕಳೂ ಮನೆ ಸೇರಲು.

ಸಂಜೆ ಸಮಯವೊ ನೋಡು, ತಂಪುಗಾಳಿಯು ಸುತ್ತು,
ಬಾನ್ಕರೆಯಲೊಂದು ಮಗು ಅಳುತಲಿಹುದು,
ತನ್ನ ಮುಗುಳ್ನಗೆಯನ್ನು ಮುದ್ದು ಮಾತುಗಳನ್ನು
ತೋರಿ, ತಾಸಿನ ಕಾಲ ಬಾಳಿ ಇಲ್ಲಿ!

ಬೆಳಕಿನಲಿ ಸುಖವಿಹುದು, ಅದು ಲೋಕನ್ಯಾಯ,
ರಾತ್ರಿ ಕಷ್ಟದ ನಂಟು, ಶೋಕ ಮೂಲ;
ಅಗಲಬೇಡ ನೀ, ಬೇಡ ಸೂರ್ಯದೇವ
ನೋಡಲಾರೆನು ನೀನು ಅಗಲ್ವುದೆಮ್ಮ!

ಸೃಷ್ಠಿ ಚಿತ್ರವ ಜಗಕೆ ತೋರಿ ನೀ ಮಿಗಿಲಿಂ
ಯಾವ ನಾಡೊಳು ಪೋಗಿ ನಿದ್ರಿಸುವಿಯೊ?
ಕಾಡು ಮಾಡನು ಎಲ್ಲ, ಗುಡ್ಡ ಬಯಲಲಿ ಮಲೆಯೊಳ್
ಹೊಂಬೆಳಕ ಚಿಮುಕಿಸುತ ಪೋಪೆ ಎಲ್ಲಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...