Home / ಕವನ / ಕವಿತೆ / ಸಮರ್ಥನೆ : ಗಂಡ

ಸಮರ್ಥನೆ : ಗಂಡ

ನಿನ್ನ ದಮ್ಮಯ್ಯ
ತಪ್ಪು ತಿಳಿಕೋಬೇಡ ನನ್ನ
ತಿಂದದ್ದೆ ತಿಂದು ಜಗಿದದ್ದೆ ಜಗಿದು
ಬರುತಿದೆ ನನಗೆ ವಾಕರಿಕೆ ಅಷ್ಟೆ
ತಿಳಿಸಾರು, ಹುಳಿ ಸಾಂಬಾರು, ಹುರಿದ ಮೀನು
ಅನ್ನ ಮೊಸರು – ನಾ ಹುಟ್ಟಿದಂದಿನಿಂದ ಮುಕ್ಕಿದ್ದು.
ಬದುಕಬೇಕಲ್ಲ ಎಂದು
ನುಂಗುತಿದ್ದೇನೆ – ಒಗ್ಗರಣೆ ಹಾಕಿದರು
ನನಗೆ ರುಚಿಯಿಲ್ಲ.
ಹಾಗೆ ಬೇಕಾದರೆ
ನಮ್ಮ ಮದುವೆಗೆ ಮೊದಲೆ
ಇಲ್ಲಿ ಕೆಲಸಕ್ಕಿದ್ದ
ಪಾರು ಕುಟ್ಟಿಯ ಟಗರು ಮರಿಗಳಂತಹ ನಾಲ್ಕು
ಗಂಡು ಮಕ್ಕಳ ಸಾಕ್ಷಿ
ಒಂದು ಕಾಲಕ್ಕೆ
ರಾತ್ರಿಯೊಂದರಲಿ ನಾಲ್ಕು ಚದುರೆಯರೊಡನೆ
ಚದುರಂಗವಾಡಿ ಗೆದ್ದವನು ನಾನು
ಹೆಚ್ಚೇಕೆ?
ಮೊದಲ ರಾತ್ರಿ ಗುಟುರು ಹಾಕಿ ನಾ
ಹೋರಿ ಬಂದಾಗ
ಹ್ಹಾ ಎಂದು ನೀನೆ
ತೆವಳಲಿಲ್ಲವೆ?
ಮನಸ್ಸಿಗೇನೋ ಬೇಕು
ಮಾಂಸ ದುರ್ಬಲ ನೋಡು.
ಬೆಕ್ಕಿಗಿಕ್ಕಿದ ಹಾಗೆ ಇಕ್ಕಿದರೆ ನಿನಗೆ
ಸಾಕಾಗುವುದಿಲ್ಲ ಭಾರಿ ಹೊಟ್ಟೆ ಬಾಕಿ!
ಈಗ ಗೊತ್ತಾಯ್ತೆ
ಜೋಲು ಮೊಲೆಗಳ ಮುದುಕ
ಸುಕ್ಕು ಮೋರೆಯ ಮುದುಕಿ
ಗುಟ್ಟು ಮಾತಿನಲಿ ನಡೆಸಿದ ಮಸಲತ್ತು?
ಗಲ್ಲಿಯಲೊ ಓಣಿಯಲೊ
ಬೇಕಾದಲ್ಲಿ ಸುತ್ತಿ
ಕದ್ದೊ, ಕೇಳಿಯೊ, ಪಡೆದೊ ತಿನ್ನಬಹುದಾದ
ಹುಟ್ಟುಸ್ವಾತಂತ್ರ್ಯಕ್ಕೆ ಹಾಕಿದರು ಸಂಕೋಲೆ.
ನೀನು ಬಯಸಿದ್ದಲ್ಲ
ನಾನು ಕೇಳಿದ್ದಲ್ಲ
ಯಾರ ಉದ್ಧಾರಕ್ಕೆ ಈ ಯಜ್ಞ?
ನಿನಗೆ ತಿಳಿದರಿಲಿಲ್ಲ ಮೊದಲೆ
ನನಗೆ ಸಂಶಯವಿತ್ತು
ಆದರೂ ನನ್ನ ಸೊಂಟದ ಸುತ್ತ
ಹಣಿಕಿ ಹಾಕುವ ಕುತೂಹಲ ನಿನಗೆ
ನನಗೊ ಕಲ್ಲು ತಪ್ಪಿಸಿಕೊಂಡು ಓಡಿ ಸಾಕಾಗಿ
ಕೊನೆಗೆ ನನ್ನದೇ ಒಂದು ಹೆಂಡತಿ ಇರಲಿ – ಎಂದು
– ಅಂತು ಹೀಗೆ
ಒಂದೆ ತಾಳಿಯಲಿ ಇಬ್ಬರಿಗೆ ಗಾಳ.
ನಮ್ಮ ಜೈಲಿನ ಒಳಗೆ ನಾವು ಕುಳಿತಿರುವುದಕೆ
ಇದು ಲೀಗಲ್ ಪರ್ಮಿಟು
ಈ ಜೈಲು ನನ್ನ ನಿನ್ನ
ಮುತ್ತಜ್ಜರ ಸೇನೆ ಕಲ್ಲು ಹೊತ್ತು ಕಟ್ಟಿದ್ದು
ನಮ್ಮದೂ ಸಂದಿದೆ ಇದಕೆ ಅಳಿಲ ಸೇವೆ
ಹೆದರಬೇಡ ನೀನು
ಬಿದ್ದೀತು ಈ ಜೈಲು
ಪ್ರವಾಹದಲಿ ಕೊಚ್ಚಿ ಹೋದೀತು ಇದರ ಒಂದೊಂದೆ ಕಲ್ಲು.
ಬೇಸರವೆ ನಿನಗೆ? ನನಗೂ ಹಾಗೆ.
ಆಯ್ತು ನಿನಗಷ್ಟು ಬೇಕಿದ್ದರೆ
ತೆರೆ ಕದ
ಈಗ ಬಂದೆ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...