Home / ಕವನ / ಕವಿತೆ / ರಾಜಾಸನದ ಕಟ್ಟೆಯ ಮೇಗಲಿ

ರಾಜಾಸನದ ಕಟ್ಟೆಯ ಮೇಗಲಿ

ಮಡಿಕೇರೀ ಮಲೆ ಸೃಷ್ಠಿಯ ಕೋಮಲೆ
ಸುತ್ತಲು ಗಿರಿಸಾಲು.
ಬಯಲಿನ ತಪ್ಪಲು ನಿರ್ಝರ ದರಿಗಳು
ನಿಡು ಮರ ಗಿಡ ಸಾಲು,
ಸೃಷ್ಠಿಯ ರಮ್ಯ ಸೌಂದರ್ಯಗಳು

ದೃಷ್ಠಿಯೆ ಬೀಳದ ಆಳದೊಳೆಲ್ಲಿಯು
ಹಚ್ಚನೆ ಹೊಲಸಾಲು
ಸುತ್ತು ದಿಗಂತವ ಅಪ್ಪುತ ನಿಂತಿಹ
ನುಣ್ಣನೆ ಬೆಟ್ಟಗಳು,
ಸುತ್ತಲು ಹಬ್ಬಿದ ಬನಹಸುರು.

ತಪ್ಪಲ ಸಾನುವಲಾಯ್ವವು ದನಗಳು
ಅಂಬಾ-ಅನ್ನುತಲಿ-
ಇನಿವಣ್ ಮೆಲುತಲಿ ಮಿಗಮರಿ ಗಿರಿಯಿಂ
ಪೊದರೊಳು ಸೇರಿದವು
ಸಂಜೆ ವಿಶ್ರಾಂತಿಯ ಹೊಂದುವವು.

ಪಡುವಣ ಮಾರುತದೊಂದಿಗೆ ಹಾರುವ
ಚಿಲಿಪಿಲಿ ಹಕ್ಕಿಗಳು
ಕಣಿವೆಯಿಂದೊಯ್ಯನೆ ಬೆಳೆದಾ ಮರಗಳ
ಗೂಡಿನಲೊರಗುವವು
ಪೀಂ ಪೀಂ ಹಾಡಿನ ತಾಳಗಳು.

ತಪ್ಪಲ ನಿರ್ಝರ ಸುಂದರ ಸುಮಕರ
ದೃಶ್ಯದ ರೂಪವದೊ-
ಕಾಳಾಹಿಯ ತೆರ ಬಳಸೋಡುವ ಹಲ
ರಸ್ತೆಗಳದೊ-ಓಟ
ಬತ್ತದ ತೆನೆಗಳ ಗೆಲು ನೋಟ!

ಪಶ್ಚಿಮ ವಾರಿಧಿ ಸ್ನಾನವನೆಸಗಲು
ರವಿಯದೊ ಇಳಿಯುವನು,
ಕೆಂಗದಿರುಗಳನು ಬಾನ್ ಬಯಲೆಲ್ಲ
ಪಸರಿಸಿ ಇಳಿಯುವನು
ಸಂಜೆಯ ಸೂರ್ಯನು ಮುಳುಗುವನು

ರಾಜಾಸನದಾ ಕಟ್ಟೆಯ ಮೇಗಲಿ-
ಕೇರಿಯ ತರುಣಿಯರು
ರಮ ರಮ ಝಿಮ ಜಿಮ ಸಂವಾದಗಳಾ
ಲೀಲೆಯೊಳ್ ಮುಳುಗಿದರು
ಮರೆತರು ಸುತ್ತಲ ಲೋಕವನು.

ಹಕ್ಕಿಗಳಾಡೂ ಚಂದಿರನುದಯವು
ಗುಂಯ್ ಗುಂಯ್ ತುಂಬಿಗಳಾ
ಚಂಚಲ ಕರೆಯಲಿ, ಕೇಳಿಯ ಮರುಳಲಿ,
ಮನೋಲ್ಲಾಸದಲಿ-
ಕಾಮನ ವಾರ್ತಾವಿಷಯದಲಿ.

ತೆಂಬೆಲರೊಯ್ಯನೆ ತಣ್ಣನೆ ಬೀಸಲು
ಕುಣಿದವು ಕುರುಳುಗಳು-
ಮೊಲೆಕಟ್ಟುಡುಪೂ ಹಿನ್ನಿರಿ ಕುಚ್ಚೂ
ಜರಿ ವಸ್ತ್ರ ತೊಟ್ಟು-
ಮಿನುಗಿತು ಕುಂಕುಮದಾ ಬೊಟ್ಟು.

ಚೆಣಿಕಣಿ ಬಳೆಗಳು ಝಲ್‌ಜಲ್ ನೂಪುರ
ರತ್ನದ ಒಂಟಿಸರ
ತೂಗುವ ಜುಂಕಿಗಳೋಲೆಯನಾಡಿಸಿ
ಕುಲುಕುವರಾ ತಲೆಯ-
ಎದೆ ಮೇಲಿರಿಸುವರಾ ಜಡೆಯ!

ಆಚಿಂದೀಚೆಗೆ ಸರಸದಲಾಡುತ
ಘಮಘಮ ಹೂಗಳನು-
ಕೋಲಿಂ ಬೀಳಿಸಿ ‘ತೇರೆ ಶಿವಾ’ಡುತ-
ಪೋಣಿಸಿದರು ಮಾಲೆ-
ಸಂಪಿಗೆ ಜಾಜಿಗಳೂಮಾಲೆ!

ಕೆಂಪದೊ ಬಾನೂ ಮುಗಿಲೋಳಿಗಳೂ
ವರಿಸುವೆನವನೆನುತ-
ತಂತಮ್ಮ ಕೊರಳೊಳು ಹಾಕುತಮಾಲೆಯ
ಕೈಪರೆಯಾಟದಲಿ-
ನಾಚುವರವರೇ ಗೇಲಿಯಲಿ.

ಸೂರ್ಯನ ಕಾಂತಿಯು ನೀಲಾಕಾಶದಿಂ-
ದೆಲ್ಲಿಯೊ ಹರಿದೋಯ್ತು!
ನಿರ್ಜನ ಭೂಮಿಯದಾಯಿತು-ಸರಿದರು
ಉಳೀಸುತ ಕತ್ತಲನು
ಅನುಭವಿಸುತಲೀ ಹರುಷವನು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...