Home / ಕವನ / ಕವಿತೆ / ಕೇರಳದ ಹುಡುಗಿಯರು

ಕೇರಳದ ಹುಡುಗಿಯರು

ಕೇರಳದ ಹುಡುಗಿಯರು ಸದಾ ಶೋಡಶಿಯರು
ಎಂದರೆ ಅತಿಶಯೋಕ್ತಿ ಹೌದು ಅಲ್ಲ
ಕಾರಣ ಇದ್ದೀತು ಹೀಗೆ-

ಕೇರಳದ ಮಣ್ಣು
ಉತ್ತರೂ ಬಿತ್ತರೂ ಬೆಳೆದರೂ ಕೊಯ್ದರೂ ಸದಾ
ಛಲೋ ಹೊಸ ಹೆಣ್ಣು-ಎಂದರೆ ಈ
ಸಮುದ್ರದ ಉದ್ದ ಗಾಳಿಗೆ ಮಳೆಗೆ ಬಿಸಿಲಿಗೆ
ಜೀವಂತ ಒಡ್ಡಿದ ಬೆತ್ತಲೆ ದೇಹ-

ಇಲ್ಲಿ ಈ ಬಯಲಿನ ಸೊಬಗಿನ
ತೆಂಗಿನ ನಾರಿನ ನೀರಿನ ಕೊಂಪೆಯ ಕೇರಿಯ
ಕಳ್ಳಿನ ಕಾಮದ ಜಗಳದ ಕೇಕೆಯ ಫೇರಿಯ
ಎದ್ದ ನಗರಗಳ ಬಿದ್ದ ಬೀದಿಗಳ ಜನಗಳ ಸಂಘರ್ಷದ ಸೆಕೆಗೆ

ಈ ಭೂಮಿಯಲ್ಲಿ ಅವತರಿಸಿದ ಶಾಪಗ್ರಸ್ತೆಯರು
ಈ ಭೂಮಿಯ ಸೆಳವಿಗೆ ತುಯ್ಯುತ್ತಾರೆ ಈ ಕಡಲಿನ ತೆರೆಗಳ
ಏರಿಳಿತದ ಕರೆಗೆ ಓಗೊಡುತ್ತಾರೆ

ಪ್ರಮೋದೆ ಪ್ರಮೀಳೆಯ ಸುಕುಮಾರ ಕತೆಯ ಪರಿಷೆಯಲ್ಲಿ
ದುರಂತ ಕಾಣದಿರಬಹುದು ಕಣ್ಣುಗಳ ಹಿಂದೆ
ನಿರಾಸೆ ಮಾಯ್ದಿರಬಹುದು ಕಾಡಿಗೆಯ ಹಿಂದೆ
ನಿಟ್ಟುಸಿರು ಕೇಳದಿರಬಹುದು ಚೆಲ್ಲಾಟದ ಹಿಂದೆ

ಕತೆಗೂ ವಾಸ್ತವತೆಗೂ ಅಂತರವಾಗಿ ನಿಂತ ಇವರಲ್ಲಿ
“ಆ!” ಎಂದು ಆಶ್ಚರ್ಯ ಚಿಮ್ಮಿದಾಗಲೂ ಕಣ್ಣುಗಳಲ್ಲಿ
ಅಥವಾ ವೇದನೆ ಹರಿದಾಗಲೂ ಕೆನ್ನೆಗಳಲ್ಲಿ
ಅಥವಾ ರೋಮಾಂಚ ಮೂಡಿದಾಗಲೂ ಮೈಯಲ್ಲಿ
ಬದುಕು ಒಂದಲ್ಲ ಒಂದು ವಿಧ ಮೂರ್ತಗೊಂಡಾಗಲೂ ಇವರಲ್ಲಿ

ತುರುಬಿನ ಈ ಎಣ್ಣೆಯ ಕಣ್ಣಿನ ಈ ಸೆಳಕಿನ
ಕಂಕುಳ ಈ ಬೆವರಿನ ಸುವಾಸದ ಆಕರ್ಷದ ಹಿಂದೆ
ಬದುಕಿನ ಉದಯಾಸ್ತಮದ ವ್ಯಂಗ್ಯದಲ್ಲೂ
ಇದರ ನಿಷ್ಠುರ ಕ್ರೌರ್ಯದಲ್ಲೂ

ಎಲ್ಲರನ್ನೂ ಎಚ್ಚರಿಸಿ ಹಂಗಿಸಿ ನಗುವ ಭಂಗಿ
ಹೆಜ್ಜೆಯಲ್ಲಿ ಗೆಜ್ಜೆಯಲ್ಲಿ ಇವರ ಉದಾಸೀನದ ಒಜ್ಜೆಯಲ್ಲಿ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...