Home / ಕವನ / ಕವಿತೆ / ತಿರುವನಂತಪುರ ೭೧

ತಿರುವನಂತಪುರ ೭೧

ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ
ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ
ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ
ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ
ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು
ಇಳಿದುಕೊಳ್ಳುವುದಕ್ಕೆ ರೂಮು ಆನ್ವೇಷಿಸಿದೆ
ಶ್ರದ್ಧೆಯಿಂದ ಆತಂಕದಿಂದ ಬಳಲಿಕೆಯಿಂದ ಶ್ರದ್ಧೆಯಿಂದ
ನಡೆದೆ ಅನ್ವೇಷಿಸುತ್ತಾ ನಡೆಯುತ್ತಾ ನಡೆದೆ

ನಡೆದು ಆಶ್ರಯಕ್ಕಾಗಿ ತಿರುಗಿ
ಜನಸ್ತೋಮ ರಣಹೋಮ ಘೋಷ ತಿರುಗಿ
ಡಬಲ್ ಡೆಕ್ಕರ್ ಘೋಷ ಟರ್ಮಿನಸ್ ಘೋಷ
ಹಿಪ್ಪಿಯಿಪ್ಪಿ ಹರೇಕೃಷ್ಣ ಸೈರನ್ ಘೋಷ
ಸತ್ಯಾಗ್ರಹ ಸಮರ ಘೋಷ ತಿರುವನಂತಪುರ
ಶ್ರೀ ಪದ್ಮನಾಭ ಮಂತ್ರಘೋಷ
ಮತ್ತೆ ನನ್ನೀ ವೇಷ ಅಸಹಾಯಕ ರೋಷ
ದಾಮರಿನಂತೆ ಕುದಿದು ರೋಷ
ಚಪ್ಪಡಿಗಳೆಡೆಯಿಂದ ಬೊಕ್ಕೆ ಏಳುತ್ತಾ ಚಪ್ಪಡಿಗಳೆಡೆಯಿಂದ
ಇಂಗಿ ಹೋಗುತ್ತಾ ಹೋದೆ ತಿರುಗಿ

ವರ್ಷಗಳ ಹಿಂದೆ ಇದೇ ಬೀದಿಗಳಲ್ಲಿ ನಡೆದಿದ್ದೆ ಹೀಗೆ
ಇದೇ ಬೀದಿಗಳಲ್ಲಿ ಪಾರ್ಕುಗಳಲ್ಲಿ ಬೀದಿಗಳಲ್ಲಿ ಹೋಟೆಲುಗಳಲ್ಲಿ
ಬೀದಿಗಳಲ್ಲಿ ಅಂಗಡಿಗಳಲ್ಲಿ ಬೀದಿಗಳಲ್ಲಿ ಬೀದಿಗಳಲ್ಲಿ
ನಡೆದಿದ್ದೆ ನಡೆದಿದ್ದರೂ ವ್ಯವಹರಿಸಿದ್ದರೂ
ಪರಿಚಯ ಅನಿಸಿದ್ದರೂ ಈ
ಮೂಲ ಕಣಗಳು ಆಗಂತುಕವಾಗಿ ಬಿದ್ದಿದ್ದಾವೆ ಈಗ ಕಣ
ಕಣಗಳೂ ಎಂದಾಗ ಈ ತಿರುವ
ನಂತಪುರ ನಂತಪುರ ನಂತಪುರನಗರ ನಂತಪುರ ನಗರ
ದೀರ್ಘ ಉದ್ದಗಲ ವಾಲುತ್ತಾ
ನನ್ನೆಡೆಗೆ ಹರಿಯುತ್ತಿದೆ ಎಂದಾಗ
ಕಾಲು ಕುಸಿಯುತ್ತಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...