Home / ಕವನ / ಕವಿತೆ / ಪಾರ್ಟಿ ಕಳೆದ ಮೇಲೆ

ಪಾರ್ಟಿ ಕಳೆದ ಮೇಲೆ

ಎಲ್ಲರೂ ಎದ್ದು ಹೋದರು ಒಬ್ಬೊಬ್ಬರಾಗಿ ಕೆಲವರು ಗುಂಪುಗಳಾಗಿ
ಇಲ್ಲಿ ಬಂದಿದ್ದ ಜನರು ಗಳಿಗೆಯ ಮೊದಲು ಇಲ್ಲಿ ಸೇರಿದ್ದವರು
ಸೇರಿ ಹೆಣ್ಣು ಗಂಡುಗಳು ಪಾನೀಯದಲ್ಲಿ ಸಂಗೀತದಲ್ಲಿ ನೃತ್ಯದಲ್ಲಿ
ಸೇರಿ ಒಂದಾಗಿ ಒಂದೆ ಕ್ರಯಾವಿಧಿಯಲ್ಲಿ ತೊಡಗಿಸಿಕೊಂಡವರು
ಟೇಬಲಿನ ಸುತ್ತ ಸೋಫಾದ ಸುತ್ತ ಪಿಯಾನೋದ ಸುತ್ತ
ವಿವಿಧ ಲಯಗಳಲ್ಲಿ ತಾಳಗಳಲ್ಲಿ ಮೇಳಗಳಲ್ಲಿ ಸುತ್ತಿದವರು
ಸುತ್ತಿ ಸುಳಿಸುಳಿಯಾಗಿ ಈ ಕೋಣೆಯೊಳಗೆ ಸುತ್ತ ಮುತ್ತ
ಸುತ್ತಿ ರಾತ್ರಿ ಬೆಳೆದಂತೆ ಆಕಳಿಕೆಯಿಂದ ತೂಕಡಿಸಿದವರು
ಎಲ್ಲರೂ ಎದ್ದು ಹೋದರೂ ಬೆಳಕು ಮಂಕಾದರೂ ಇಲ್ಲಿ
ನಾಲ್ಕು ಗೋಡೆಯೊಳಗೆ ಕೋಣೆ ಏಕಾಕಿಯಾದರೂ ಕೂಡ
ಇವರ ಈ ಹೋದವರ ಮಾತುಕತೆ ಮತ್ತೆ ಉದ್ಗಾರಗಳು
ಉದ್ದುದ್ದ ಚರ್ಚೆಯ ಟೊಳ್ಳುಗಳು ಇವರ ಹೆಂಡಂದಿರ ಒಜ್ಜೆಯ
ಒಯ್ಯಾರದ ಶಬ್ದಗಳು ಅವರ ಆಭರಣದ ಥಳಕುಗಳು
ಮೈ ಎಡೆಯ ಗಂಧಗಳು ಬೆಳೆದ ಕೊಬ್ಬಿನ ಬೇಸರಗಳು
ಇಲ್ಲಿ ಲಯವಾದ ಸ್ವರಗಳು ಕಪ್ಪು ಸಾಸರುಗಳು ತಲೆಕೂದಲುಗಳು
ಸಿಕ್ಕಿಕೊಂಡ ಹೂವಿನ ಚೂರುಗಳು ಮತ್ತು ಉಗಿದ ಮೂಳೆಯ ತುಂಡುಗಳು
ಹೋಮಿಸಿ ಉಳಿದ ಮಂತ್ರಗಳಂತೆ ಸಮಿತ್ತುಗಳಂತೆ ಹವಿಸ್ಸುಗಳಂತೆ
ಏನನ್ನೊ ಬಿಟ್ಟು ಹೋಗಿವೆ ಮಾತು ಕಳೆದ ಧ್ವನಿಗಳಿರಬಹುದು
ಸ್ವರೂಪ ಕಳೆದ ಆಕಾರಗಳಿರಬಹುದು ಅಸ್ತಿತ್ವ ಕಳೆದ ಭೂತಗಳಿರಬಹುದು
ಅಸ್ವಸ್ಥತೆಯಿಂದ ಹೊರಳುತ್ತಿವೆ ಖಾಲಿತನದಲ್ಲಿ ನರಳುತ್ತಿವೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...