Home / ಕವನ / ಕವಿತೆ / ಉದ್ಯೋಗ ಪರ್ವ

ಉದ್ಯೋಗ ಪರ್ವ

ಬೇಹಿನವರಿಂದ ಸುದ್ದಿ ಸಂಗ್ರಹಿಸಿ ರಾಯಭಾರಿಗಳ ಕರೆಸಿ
ಕಿಟಕಿಬಾಗಿಲುಗಳ ಭದ್ರಪಡಿಸಿ ಮಂತ್ರಾಗಾರದಲ್ಲಿ
ಒಂದು ದುಂಡು ಮೇಜಿನ ಸುತ್ತ ಆಪ್ತೇಷ್ಟನಂಟರೂ
ಮಂತ್ರಿಗಳೂ ವಿಶೇಷ ಆಮಂತ್ರಿತರೂ ಪರಿಣತರೂ ಮಂಡಿಸಿ
ಗೂಢಾಲೋಚನೆ ನಡಿಸಿ
ಫೈಲುಗಳ ಮೇಲೆ ಫೈಲುಗಳೋಡಿ
ಟಿಪ್ಪಣಿಗಳ ಕೆಳಗೆ ಟಿಪ್ಪಣಿಗಳು ಕೂಡಿ
ಮಾತಿಗೆ ಮಾತು ಸೇರಿ ಮಾತಿನ ಧ್ವನಿಯೇರಿ
ಧ್ವನಿಯ ಪ್ರತಿಧ್ವನಿಯ ಕಾವಿನಲ್ಲಿ ಚರ್ಚೆ
ಉದ್ದುದ್ದ ಬೆಳೆದು ಬೇವಸಗೊಂಡು
ಪೂರ್ವಯೋಜಿತ ನಿರ್ಣಯದ ಕಡೆಗೆ
ದಾರಿಗಾಣದೆ ಕಾದು ಆಕಳಿಸಿ ಸಿಗಾರು ಹಚ್ಚಿ
ಸೀಲಿಂಗಿನತ್ತ ಹೊಗೆ ಫೂ ಎಂದು ಊದಿ
ಮೆತ್ತೆಗೆ ಶಿರ ಮಂಡಿಸಿದರೆ ಧ್ಯಾನಾವಸ್ಥೆ

ಮತ್ತೆ ಸನತ್ಸುಜಾತ ವಿದುರಾದಿಗಳಿಂದ ಲೌಕಿಕ ಪಾರಲೌಕಿಕ
ಆರ್ಥಿಕ ಪಾರಮಾರ್ಥಿಕ ನೀತಿ ಹೇಳಿಸಿಕೊಂಡು
ಮತ್ತೆ ಶಕುನಿ ಕಲಿಸಿದ ಅನೀತಿ ಜ್ಞಾಪಿಸಿಕೊಂಡು
ಕಳೆದ ಪರ್ವಗಳ ನಂಜುರಕ್ತ ಮೆಲ್ಲನೇ ಒತ್ತಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಒಮ್ಮತ ಬಂದು
ಧರ್ಮ ಸಂಸ್ಥಾಪನೆಯಂಥ ಆರ್ಷ ಉದ್ದೇಶಕ್ಕೆ
ಜನ್ಮವೆತ್ತಿಬಂದ ಪುರುಷಾರ್ಥಕ್ಕೆ
ಕರ್ಮಕಾಂಡದ ವಿಧ್ಯುಕ್ತ ಕಾರ್ಯನಿರ್ವಾಹಕ್ಕೆ
ಎಂಬಿತ್ಯಾದಿಯಾಗಿ ಶ್ರುತಿಧರ್ಮ ಸಂಹಿತೆಗಳಿಂದ
ಬೇಕುಬೇಕಾದ ತತ್ವಗಳನ್ನಾರಿಸಿ ಠರಾವುಗಳಿಗೆ ಜೋಡಿಸಿ
ಕಾಳೆಗವನೇ ಸಮೆದು ಬರುವೆವು ಎಂದು ಘೋಷಿಸಿ

ಘೋಷಣೆಯ ಕಾರ್ಯರೂಪಕ್ಕೆ ತೊಡಗಿದರೆ
ತೊಡಗಿದರೆ ತೊಟ್ಟ ಮಾರಕಾಸ್ತ್ರ ಪ್ರಯೋಗದಿಂದ ಈ ಗರ್ಭಕ್ಕೆ
ಗರ್ಭಸ್ಥ ಜೀವಕ್ಕೆ ಯಾತರ ರಕ್ಷೆ?
ಅಸಹಾಯಕಿ ಅಬಲೆ ಉತ್ತರೆಯೂ ನಿರುತ್ತರೆಯಾಗಿ ನಿಂತರೆ
ಅಲೆದೀತು ಒಂದು ವೇಳೆ ಈ ಪ್ರಶ್ನೆ ಹೀಗೆ ಕೊನೆಗೂ
ತನ್ನ ಉತ್ತರ ತಾನೆ ಕಂಡುಕೊಂಡೀತು ಒಂದು ವೇಳೆ
ಹೇಗಿದ್ದರೂ ಅದು ಈ ಪರ್ವದ ಹೊರತು ಇದರ ಸಮಸ್ಯೆಗಳ ಹೊರತು
ಈಗ ಸಮಗ್ರ ಮಗ್ನತೆಯನ್ನೂ ಕೂಡ
ಜರೂರು ವಿಚಾರಗಳ ವರ್ತಮಾನದಲ್ಲಿ ಕೇಂದ್ರೀಕರಿಸಿ
ಹಂಚಿಗೆಳ ಯೋಚಿಸುವ ಸಂಧಿಸುವ ಚಿಂತಿಸುವ ಪರ್ವ
ದೊಂಬಿ ಪಿತೂರಿ ಒಳಸಂಚಿನ ಸೈತಾನ ಕರ್ಮಗಳಿಂದ ಹಿಡಿದು
ಕುರುಕ್ಷೇತ್ರದ ಹೊಯ್ಕಯ್ ವರೆಗೂ
ಇದೆಲ್ಲದರ ಸಾಧ್ಯಾಸಾಧ್ಯತೆಗಳ ಕುರಿತು
ಇದರ ರಾಜತಾಂತ್ರಿಕ ಸೂತ್ರಗಳ ಕುರಿತು
ಕ್ಷೇತ್ರದ ಸಿದ್ಧತೆಯ ಕುರಿತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...