Home / ಕವನ / ಕವಿತೆ / ಜಾರಿಹೋದ ಉಂಗುರಕೆ

ಜಾರಿಹೋದ ಉಂಗುರಕೆ

ನಮ್ಮ ಪ್ರೇಮದ ದಾರಿ ಕೊರಕಲನು ಸಮವಾಗಿ,
ದೂರವನು ಹತ್ತಿರಿರಿಸಿ-
ಸಂದ ಭಾಗ್ಯದ ಚೆನ್ನುಗನಸನ್ನು ನೆನೆಸನ್ನು
ತೋರಿದುಂಗುರವ ಕಳೆದೆ!

ಸಂಜೆ ತಾರೆಯ ನೋಡಿ ಅದರ ಕಾಂತಿಯ ಹಳಿದ
ಸರಸಿ ಉಂಗುರವವಳು;
ಮೊಲ್ಲೆ ಮಲ್ಲಿಗೆ ವರ್ಣದೀಪ್ತಿಯನು ತಾಕಂಡು
ಮುಡಿಯಲೆಂದಳು ನನಗೆ!

ರಮಣನಂದೆನಗಿತ್ತ ಅಂದಿನಾ ದಿನದಿಂದ
ನನ್ನೊಡನಾಡಿ ಅವಳು,
ಪತಿಭವನ ವಾರ್ತೆಯನು ಪತಿಯೊಲುಮೆ ತೆರವನ್ನು
ಅಂದವಳವಳೆ ನನಗೆ!

ಕ್ಷಣಕ್ಷಣಕು ದಿನದಿನಕು ಉಂಗುರದ ಸ್ಪರ್ಶವೇ
ನನ್ನ ಪ್ರೇಮದ ಹರುಷ
ಹೃದಯ ಸಾಮಿಪ್ಯವನು ಪ್ರಣಯ ಸಾರೂಪ್ಯವನು
ತೋರಿತದು-ಅಹಾ ಎಲ್ಲಿ?

ಕೆರೆಯಲ್ಲಿ ಕೈತೊಳೆಯೆ ಅದು ನಕ್ಕು ಹೊಳೆಹೊಳೆದು
ನನ್ನ ಮುತ್ತನ್ನು ಕೊಂಡು-
ನಿನ್ನ ರಮಣನ ಪ್ರೇಮ ಸಾಕ್ಷ್ಯ ರೂಪಿಯೆ ನಾನು-
ಎಂದು ಗೇಲಿಯನು ಮಾಡಿ.

ಕೈಯ ನೀರೊಳಗಿಡಲು-ಅದರ ಹೊಳಪನು ನೋಡಿ
ಬರಲು ಬೆರಗಿಂ ಮೀಂಗಳು,
ಮುಗ್ದೆ ಶಕುಂತಲೆಯ ಉಂಗುರವ ಕದ್ದಂತೆ
ಸಿಗಲಾರೆ-ತಾನು ಎಂದು

ಓಡಿಸುತ ಮೀಂಗಳನು-ಪ್ರೇಮಪುರಿ ದಾರಿಯನು
ತೋರುವೆನು-ಅಂದಿತೆನಗೆ.
ಬೆರಳ ನಡುವಲಿ ಸಿಲುಕಿ ಓಡಲಾರೆನು, ಮೋಡಿ
ವಿದ್ಯೆಯಾ ಗಾಡಿ-ಎಂದು.

ಪ್ರೇಮವಾರ್ತೆಯ ದೂತಿ, ನಲ್ಮೆ ಕಾಯುವ ದಾಸಿ
ಮಾಯವಾದಳೇ ಇಂದು?
ಜಗದ ಪ್ರೇಮಿಗಳ ಹೃತ್ಕಮಲಗಳ ಹೆಣೆಯುತಿಹ
ಮಾಯ ಮುದ್ರಾ ಸ್ವರೂಪಿ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...