Home / ಕವನ / ಕವಿತೆ / ಕವಿಯ ಬಯಕೆ

ಕವಿಯ ಬಯಕೆ

ಕವಿಯಾಗಿ ಸಲ್ಲಿಸುವ ಮಧುರಗಾನದ ಸೊಂಪು
ನುಣ್ದನಿಗಳಿಂಪಿನಿಂ ಬರೆದು ಪೊಗಳುವ ಮಾತು
ಸಾಲುಗಳ ಲೀಲೆಯಲಿ ಬರೆದ ಬಡಗಬ್ಬಿಗನ
ನಾಲ್ಪಂಕ್ತಿ ಕವನವದು ಏನು ಕಲ್ಪಿತ ವಾಣಿ!
ವೇದಗಳು ಶಾಸ್ತ್ರಗಳು ಕವಿಜಿಹ್ವೆ ಉಕ್ತಿಗಳು
ಯಾರ ಹಂಗನು ಕಾಯೆ ಹೇಳಿ ನಲಿವುವೊ ಏನೊ!
ತಮ್ಮ ಹೃದಯದ ಬಯಕೆ ಪದ್ಯ ಸಾಲ್ಗಳ ಮಾಲೆ.
ಕವಿಯು ಮರೆ ಮೋಸವನು ಎತ್ತಿ ತೋರುವ ಇಹದ
ಬಿಚ್ಚು ಮನಸಿನ ಬೇಹುಗಾರನೆಂದರೆ ಏನು?

ಅವನ ಬಯಕೆ ಅದೇನು?  ಜೀವನದ ಸಮರವನು
ಸಾಮರಸ ವಾದದಲಿ ಹಾಡಿತೋರಿಸಿ ನಲಿದು
ಜನದ ಪಾಡಿಗೆ ತಾನು ಪಾಲುಗಾರನು ಆಗಿ
ಕಳ್ಳ ಜೀವದ ತಂತ್ರಗಳ ಬಯಲಿಗೆಳೆ ತಂದು
ಜ್ಞಾನಿಗಳ ನಿಷ್ಪಕ್ಷ ತಲೆಗಳನು ತೂಗಿಸುತ
ತಾನು ಹಾಡಿದ ಗಾನ ಯಾರು ಪೊಗಳುವರೆಂದು
ತನ್ನ ವಾದಕೆ ಯಾರು ಮನ್ನಣೆಯ ಸಲಿಸುವರು
ಎಂದು ನೋಡುವ ತಾನು ಬರೆದ ಹಾಡ್ಗಳನೆಲ್ಲ
ಕ್ರಮವಾಂತು ಹೇಳಯವುದೆ ಅವನ ಜೀವದ ಬಯಕೆ!

ಮಧುರವಾದಾ ಕೀರ್ತಿ ಕವಿವರನೆ ಬಯಸುವನು
ತಾನು ಲೋಕಕೆ ಅಂದ ವಿಶ್ವರಹಸ್ಯದ ಸೊಲ್ಲು
ಪಾಪಿಯಾದವನೊಬ್ಬ ಹೇಳಿ ನಲಿದೊಡೆ ಕವಿಯು
ಹಿಗ್ಗುವನು, ಎಲ್ಲರಂತೆಯೆ ಪೇಳಲಿಚ್ಚಿಪನು!
ಆದಿ ಕವಿಯನು ಮೀರ್ವ ಬಯಕೆ ಅವನಲ್ಲಿಲ್ಲ!
ತನ್ನ ಒಣ ಮಾತುಗಳು ಮನ್ನಣೆಯ ದೃಷ್ಟಿಯಲಿ
ಹೊರಳಿದರೆ, ತನ್ನ ಸೇವೆಯು ರಸಿಕ ವೃಂದವದು
ಗಣಿಸಿದರೆ, ತನ್ನ ಬಿರುನುಡಿ ಜನಕೆ ನೀತಿಯನು
ಕಲಿಸಿದರೆ, ಅದೆ ಜಗದ ಕವಿ ಪ್ರಯತ್ನದ ಫಲವು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...