Home / ಕವನ / ಕವಿತೆ / ನಿಶ್ಶಬ್ಧ ಮೌನ

ನಿಶ್ಶಬ್ಧ ಮೌನ

ರಾತ್ರಿಯ ಆರೆಂಟು ತಾಸಿನ ವಿಮಾನ ಪ್ರಯಾಣ
ಕಿಟಕಿಯಾಚೆ ನೋಡಲೇನಿದ್ದಿತು!
ಯಾವಾಗಲೋ ಅಲ್ಲೊಂದು ಇಲ್ಲೊಂದು ಕಾಣುವ
ಸಮುದ್ರದ ಹಡಗಿನ ದೀಪಗಳು,
ಮರುಭೂಮಿಯಲಿ ಹೊತ್ತಿ ಉರಿಯುವ ಕಚ್ಚಾತೈಲ ಬೆಳಕು
ದೊಡ್ಡ ನಗರಗಳಾಗಿದ್ದರೆ ಒಂದಷ್ಟು ರಸ್ತೆ ದೀಪಗಳೋ ಏನೋ!
ನಿದ್ದೆ ಸಮಯ ಬೇರೆ ಗಡದ್ದಾದ ನಿದ್ದೆ-
ನಿದ್ದೆ ನಿದ್ದೆ ನಿದ್ದೆ

ಕೈ ಕುಲುಕಿ ಭುಜ ಅಲುಗಾಡಿಸಿ ಏನೋ ಕೇಳಿದಂತೆ….
ಎಚ್ಚರ, ಕಣ್ಮುಚ್ಚಿ ಕಣ್ಣು ಬಿಟ್ಟರೆ
ಮಬ್ಬು ಬೆಳಕಿನಲ್ಲಿ ನಿಶ್ಶಬ್ದ ಮೌನ
ಹೊದಿಕೆಯೊಳಗೆ ಪಯಣಿಗರ ನಿದ್ರೆ
ಬೆನ್ನು ತಿರುಗಿಸಿ ಕಪ್ಪು ಕೋಟಿನ ಆಕೆ ಸರಕ್ಕನೆ ಸರಿದಳು.
ಗಗನಸಖಿ ಅಲ್ಲದೆ ಮತ್ಯಾರಿದ್ದಾರು!

ಹಿಂದೊರಗಿ ಕಣ್ಣು ಮುಚ್ಚಲು ಪ್ರಯತ್ನಿಸಿದೆ
ಕಾಲಿಗೆ ಜಡ ವಸ್ತು ತಗುಲಿ ಮತ್ತೆ ಎಚ್ಚರ
ಹ್ಯಾಂಡ್ ಬ್ಯಾಗ್ ಅಲ್ಲದೇ ಮತ್ತಿನ್ನೇನು?
ಸಮಾಧಾನಿಸಿಕೊಳ್ಳುವಿಕೆ-

ವಿಮಾನ ಕೆಳಮನೆಯ ಸ್ಟೋರೇಜ್
ಕಾರ್ಗೋ ಕಂಟೈನರ್‌ಗಳ ಬಿಡಿಬಿಡಿಯಾದ ದೃಶ್ಯ.
ನೂರಾರು ಸೂಟ್‌ಕೇಸ ಬ್ಯಾಗುಗಳ ಗುಡ್ಡೆ
ಇರಲಿ ಅದಕ್ಕೇನಂತೆ!
ಅದರೊಳಗಡೆ ಅದೆಷ್ಟೋ ಪ್ರೀತಿ ಪ್ರೇಮದ ಪತ್ರಗಳು

ರಾಜಕೀಯ ವ್ಯವಹಾರಗಳ ಕಾಗದಗಳು
ಡಾಲರ್‍ಸ್, ಚೆಕ್, ಡ್ರಾಫ್ಟ್‌ಗಳ ರಾಶಿ
ಚಿನ್ನ ಬೆಳ್ಳಿ ಗಾಂಜಾ ಅಫೀಮುಗಳ ಬಚ್ಚಿಟ್ಟ ಸ್ಥಳ.
ಅದೇ ಅದೇ ಜಾಗತೀಕರಣದ ಪೇಟೆ ಪೇಟೆ….
ಇರಲಿ ಅದಕ್ಕೇನಂತೆ!

ಈ ಕಡೆಗೆ ಶೀತಾಗಾರ ಒಂದರ ಮೇಲೊಂದು ಶೆಲ್ಫ್‌ಗಳು
ಅದರೊಳಗೆ ಹೆಣಗಳ ಪೆಟ್ಟಿಗೆಗಳು
ವಿದೇಶಗಳೊಳಗೆ ಹೆಣವಾದವರು
ಮರಳಿ ಮಣ್ಣಿಗೆ ಮಣ್ಣಾಗಲು ಬರುತ್ತಿದ್ದಾರೆ.
ದಡಕ್ಕನೇ ಎದೆಬಡಿತ ಜೋರಾದದ್ದು.
ನನ್ನ ಕಾಲ ಕೆಳಗಿನ ಮನೆಯಲ್ಲೇ
ಅನಾಥ ಹೆಣಗಳಿದ್ದು ಕೂತಿರಬಹುದೆ
ಹೊರಟಾಗ ಇದೇ ಸೀಟಿನಲ್ಲಿ ಕುಳಿತು
ಈಗ ಇದೇ ಸೀಟಿನ ಕೆಳಗೆ ಏಕಾಂಗಿಯಾಗಿ
ರೋಧಿಸುತ್ತಿರಬಹುದೆ!

ಕೆಳಗೆ ನಿರ್ಜೀವಿಗಳ ಸ್ಮಶಾನ
ಮೇಲೆ ರಾಜನರಮನೆ ಟಚ್
ಕ್ಷಣಾರ್ಧದಲ್ಲಿ ಎದೆಯೊಡೆದು ಭೀತಿ ಮೂಡಿ
ಮೈತುಂಬ ಸಣ್ಣಗೆ ಬೆವರು ನಡುಕ-
ಈ ವಿಮಾನದೊಳಗೆ ಇದೆಲ್ಲ ಇರದಿರಲಿ ದೇವರೆ-
ನನ್ನ ಸೀಟಿನ ಎಲ್ಲ ಲೈಟು ಬಟನ್‌ಗಳು ಶುರುಮಾಡಿ ಕಣ್ಮುಚ್ಚಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...