Home / ಕವನ / ಕವಿತೆ / ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ನಾಡಿಗೆ
ಅಲ್ಲಿ ಏನೆಲ್ಲ ಇದೆಯಂತೆ
ಅದೊಂದು ಮಾಯಾ ಪೆಟ್ಟಿಗೆಯಂತೆ
ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ
ಸುಮ್ಮನೆ ಕನಸು ಕಾಣಬಾರದಂತೆ;
ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ
ವಿಚಿತ್ರವಲ್ಲದೇ ಮತ್ತಿನ್ನೇನು-

ಕಣ್ಣಿಗೆ ಎಣ್ಣೆ ಹಾಕಿಕೊಂಡೇ ಕಿಟಕಿಯ ಪಕ್ಕ ಕುಳಿತಿದ್ದೇನೆ.
ಅಕ್ಕಪಕ್ಕ-ಮುಂದಿನ-ಹಿಂದಿನ ಸೀಟುಗಳಲ್ಲೆಲ್ಲಾ
ಘಾಟಿಯೋ, ಹುಳಿಯೊಗರಿನ ಎಣ್ಣೆಯ ವಾಸನೆ.
ಅವರೂ ಚುರುಕಾಗಿರಬೇಕೆಂದೇ ತಾನೆ!
ಕುಬೇರನರಮನೆಗೆ ಹೋಗಲು
ಕಣ್ತುಂಬ ಮನತುಂಬ ಲೂಟಿ ಮಾಡಲು-

ಮೋಡಗಳು ಅದೇಕೋ ಹಿಂದೆ ಹಿಂದೆಯೇ ಉಳಿದವು.
ಸಮುದ್ರ ತೆರೆಗಳಿಗೆ ನಗುವಿಲ್ಲ, ಬಾಯಿಗೆ ಬೀಗ ಹಾಕಿಕೊಂಡವೋ
ಅವುಗಳೊಂದಿಗೆ ಮಾತನಾಡುತ್ತಿದ್ದೆನಲ್ಲಾ!!!
ಕುಬೇರನ ವಿಲಾಸಿ ಬುದಕ ನೋಡ ಹೊರಟಿರುವೆನೆಂದು
ಯಾಕೋ ಮುಖ ಕವುಚಿಕೊಂಡು
ಕೇಳಿಯೂ ಕೇಳಿಸದಂತೆ ಮೆಳ್ಳಗಣ್ಣಲ್ಲಿ
ಮೈಯೊಡಮೂರಿ ಆಚೆ ಹೊರಳಿದವು.

ವೈನ್ ಸುರಿವ ಸುಂದರಿ ಕಿಲಕಿಲಸಿ
‘ಮೊದಲ ಸಲ ಅಮೇರಿಕಾ ಪ್ರವಾಸವೆ?
ಸುರಿಯಲೇ ಮಾಯಾನಗರಿಯ ರಹಸ್ಯ.’
ಆರಡಿ ಹೆಣ್ಣಿನ ಮೂರು ಮಾತುಗಳು
ಹಸಿರು ಕಣ್ಣಿನ ಬೆಕ್ಕಿನ ನೋಟ
ಕಿವಿಯವರೆಗಿನ ಬಾಯಗಲ ನಗು
ಕುಬೇರನರಮನೆಯ ಸ್ವಾಗತ ಕಾರಿಣಿಯ
ಬೆಡಗಿಗೆ ಮೊದಲ ಹಂತದಲ್ಲೇ ಬೆಚ್ಚಿ ಬಿದ್ದೆ.

ಕುತೂಹಲದ ಮೂಟೆಯ ನನ್ನ ಮುಖ
ಹಳಬನೊಬ್ಬ ಕುಬೇರನರಮನೆಯ ಹೊಕ್ಕು
ಚಿತ್ರ ವಿಚಿತ್ರ ಸೆಳೆತದ ಭ್ರಮೆ ಸಂತೋಷಿಸಿ
ನೆಮ್ಮದಿ ಕಳೆದುಕೊಂಡದ್ದಾಗಿ,
ಶಾಂತಿಗಾಗಿ ಯೋಗಾಶ್ರಮಗಳು ಹುಡುಕುತ್ತಾ
ಊರೂರ ಅಲೆಯುತ್ತಿರುವುದಾಗಿ ಉಸಿರಾಡಿದ.
ಕಿಟಕಿಯಾಚೆ ಮೋಡಗಳ ಗಹಗಹಿಸುವಿಕೆ
ದೂರದೂರ ಕೆಳಗೆ ಸಮುದ್ರದಬ್ಬರಿಸುವಿಕೆಯ
ಶಬ್ದ ಶಬ್ದ ಶಬ್ದ
ಅದೇಕೋ ಮತ್ತೊಮ್ಮೆ ನನ್ನ ನೂಕಿ
ತೇಲಾಡಿ ಸುತ್ತಾಡಿ ಹೊರಳಾಡಿ
ಗಕ್ಕೆಂದು ಹಿಂದಿರುಗಿ ಹೊರಟೇ ಹೋದವು.

ಹಾಗಾದರೆ ಕುಬೇರನ ದೇಶ ನೋಡಲೆ?
ಅಥವಾ ನಾಳೆ ಬೆಳಗಾಗುವುದರಲ್ಲೇ
ಮರು ಪ್ರಯಾಣಿಸಿ ಯೋಗಾಶ್ರಮ ಹುಡುಕಲೆ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...