Home / ಕವನ / ಕವಿತೆ / ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ನಾಡಿಗೆ
ಅಲ್ಲಿ ಏನೆಲ್ಲ ಇದೆಯಂತೆ
ಅದೊಂದು ಮಾಯಾ ಪೆಟ್ಟಿಗೆಯಂತೆ
ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ
ಸುಮ್ಮನೆ ಕನಸು ಕಾಣಬಾರದಂತೆ;
ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ
ವಿಚಿತ್ರವಲ್ಲದೇ ಮತ್ತಿನ್ನೇನು-

ಕಣ್ಣಿಗೆ ಎಣ್ಣೆ ಹಾಕಿಕೊಂಡೇ ಕಿಟಕಿಯ ಪಕ್ಕ ಕುಳಿತಿದ್ದೇನೆ.
ಅಕ್ಕಪಕ್ಕ-ಮುಂದಿನ-ಹಿಂದಿನ ಸೀಟುಗಳಲ್ಲೆಲ್ಲಾ
ಘಾಟಿಯೋ, ಹುಳಿಯೊಗರಿನ ಎಣ್ಣೆಯ ವಾಸನೆ.
ಅವರೂ ಚುರುಕಾಗಿರಬೇಕೆಂದೇ ತಾನೆ!
ಕುಬೇರನರಮನೆಗೆ ಹೋಗಲು
ಕಣ್ತುಂಬ ಮನತುಂಬ ಲೂಟಿ ಮಾಡಲು-

ಮೋಡಗಳು ಅದೇಕೋ ಹಿಂದೆ ಹಿಂದೆಯೇ ಉಳಿದವು.
ಸಮುದ್ರ ತೆರೆಗಳಿಗೆ ನಗುವಿಲ್ಲ, ಬಾಯಿಗೆ ಬೀಗ ಹಾಕಿಕೊಂಡವೋ
ಅವುಗಳೊಂದಿಗೆ ಮಾತನಾಡುತ್ತಿದ್ದೆನಲ್ಲಾ!!!
ಕುಬೇರನ ವಿಲಾಸಿ ಬುದಕ ನೋಡ ಹೊರಟಿರುವೆನೆಂದು
ಯಾಕೋ ಮುಖ ಕವುಚಿಕೊಂಡು
ಕೇಳಿಯೂ ಕೇಳಿಸದಂತೆ ಮೆಳ್ಳಗಣ್ಣಲ್ಲಿ
ಮೈಯೊಡಮೂರಿ ಆಚೆ ಹೊರಳಿದವು.

ವೈನ್ ಸುರಿವ ಸುಂದರಿ ಕಿಲಕಿಲಸಿ
‘ಮೊದಲ ಸಲ ಅಮೇರಿಕಾ ಪ್ರವಾಸವೆ?
ಸುರಿಯಲೇ ಮಾಯಾನಗರಿಯ ರಹಸ್ಯ.’
ಆರಡಿ ಹೆಣ್ಣಿನ ಮೂರು ಮಾತುಗಳು
ಹಸಿರು ಕಣ್ಣಿನ ಬೆಕ್ಕಿನ ನೋಟ
ಕಿವಿಯವರೆಗಿನ ಬಾಯಗಲ ನಗು
ಕುಬೇರನರಮನೆಯ ಸ್ವಾಗತ ಕಾರಿಣಿಯ
ಬೆಡಗಿಗೆ ಮೊದಲ ಹಂತದಲ್ಲೇ ಬೆಚ್ಚಿ ಬಿದ್ದೆ.

ಕುತೂಹಲದ ಮೂಟೆಯ ನನ್ನ ಮುಖ
ಹಳಬನೊಬ್ಬ ಕುಬೇರನರಮನೆಯ ಹೊಕ್ಕು
ಚಿತ್ರ ವಿಚಿತ್ರ ಸೆಳೆತದ ಭ್ರಮೆ ಸಂತೋಷಿಸಿ
ನೆಮ್ಮದಿ ಕಳೆದುಕೊಂಡದ್ದಾಗಿ,
ಶಾಂತಿಗಾಗಿ ಯೋಗಾಶ್ರಮಗಳು ಹುಡುಕುತ್ತಾ
ಊರೂರ ಅಲೆಯುತ್ತಿರುವುದಾಗಿ ಉಸಿರಾಡಿದ.
ಕಿಟಕಿಯಾಚೆ ಮೋಡಗಳ ಗಹಗಹಿಸುವಿಕೆ
ದೂರದೂರ ಕೆಳಗೆ ಸಮುದ್ರದಬ್ಬರಿಸುವಿಕೆಯ
ಶಬ್ದ ಶಬ್ದ ಶಬ್ದ
ಅದೇಕೋ ಮತ್ತೊಮ್ಮೆ ನನ್ನ ನೂಕಿ
ತೇಲಾಡಿ ಸುತ್ತಾಡಿ ಹೊರಳಾಡಿ
ಗಕ್ಕೆಂದು ಹಿಂದಿರುಗಿ ಹೊರಟೇ ಹೋದವು.

ಹಾಗಾದರೆ ಕುಬೇರನ ದೇಶ ನೋಡಲೆ?
ಅಥವಾ ನಾಳೆ ಬೆಳಗಾಗುವುದರಲ್ಲೇ
ಮರು ಪ್ರಯಾಣಿಸಿ ಯೋಗಾಶ್ರಮ ಹುಡುಕಲೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...