Home / ಕವನ / ಕವಿತೆ / ಅಮರಾವತಿ

ಅಮರಾವತಿ

ಕುತೂಹಲದ ಹೃದಯ ಕಣ್ಣು ಮನಸು
ಒಮ್ಮಿಂದೊಮ್ಮೆಲೆ ಕಕ್ಕಾಬಿಕ್ಕಿ
ಲಂಡನ್ ಸಡಗರದ ಕನಸು ನನಸಾಗುವ
ಹತ್ತಿರ ಹತ್ತಿರದ ಸಮಯ
ಸಂಭ್ರಮದ ವಿದ್ಯುತ್ ಸಂಚಾರ ಒಳಗೊಳಗೇ….

ಸಖಿಯ ಉಲಿತ ಕೆಲವೇನಿಮಿಷ
ನಗರದಮೇಲೆ ಹಿಮಾಚ್ಫಾದನೆ
ಮೈನಸ್ ಸೆಲ್ಸಿಯಸ್ ಹಿತ್ರೋಗೆ ಹೆಜ್ಜೆ ಇಡಲು
ಒಂದು ಎರಡು ಮೂರು ನಾಲ್ಕು ಸುತ್ತು
ತಿರುಗುಚಕ್ರದನುಭವ
ಏರಿಳಿತ ಹೃದಯ ಬಡಿತ ಒಳಗೆಲ್ಲ ನಿಶ್ಶಬ್ಧ

ಹುಡುಕಾಟ ಹುಡುಕಾಟ ಎಲ್ಲಿದೆ ರಾಣಿಮಹಲು
ಮೋಡ ಮಿಣುಕು ತುಣುಕು ಮಿಣುಕು
ಕಣ್ಣು ಮುಚ್ಚಾಲೆಯಾಟ ಐದನೆಯ ಸುತ್ತು
ಆಕಾಶಪ್ರದಕ್ಷಣೆ ವೀಕ್ಷಣೆ
ಪೆಗ್ಗೇರಿಸಿ ಬೆಚ್ಚಗಾಗಿರುವವರ ಇನ್ನೂ ಸುಖನಿದ್ರೆ
ಕಾಫಿಹೀರಿ ಕಿಟಕಿಯಾಚೆ ನೆಟ್ಟ ದೃಷ್ಟಿ
ನಡುವೆ ಮಂಜು ಕೊರೆತ

ಮೋಡ ಭೇದಿಸಿ ಇಳಿಮುಖದ ವಿಮಾನ
ತುಂಡುತುಂಡಾಗಿ ಕೊನೆಗೊಮ್ಮೆ ಇಡಿಯಾಗಿ
ಗಕ್ಕನೆ ಕಾಣಿಸಿತೊಂದು ಅವರಾವತಿ
ಮುಸ್ಸಂಜೆ ಹೊತ್ತು ಮಿಣಿಮಿಣಿ,
ಝಗಝಗ ದೀಪ ಹರಿದಾಡುವ ಬಣ್ಣ

ರಸ್ತೆಗಳ ಉದ್ದಗಲ ಯಕ್ಷಯಕ್ಷಿಣಿಯರು
ಇನ್ನೂ ಹುಡುಕಾಟ ರಾಣಿಯ ಮಹಲು
ಮಹಲಿನೊಳಿಲ್ಲ ರಾಜನ ಸಂಗಡ ರಾಣಿ
ಇವನಬಿಟ್ಟು ಅವನಾರೋ
ಅವನಬಿಟ್ಟು ಇನ್ಯಾರೋ, ಹಾದಿಹೆಣವಾಗಿ
ಬಿದ್ದ ರಾಜಕುಮಾರಿ
ಸೂರ್ಯಮುಳುಗಿ ಕಗ್ಗತ್ತಲು
ಅರಮನೆಗೆ ಗ್ರಹಣ
ನೂರೊಂದು ಕಥೆಗಳ ನಗರ
ಗಹಗಹಿಸಿ ನಗುವ ದೀಪಗಳು
ನನ್ನೆದೆಯೊಳಕ್ಕೆ ಆಲಂಗಿಸುವ ಕುತೂಹಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...